NEWSನಮ್ಮಜಿಲ್ಲೆರಾಜಕೀಯ

ಗೋ ಬ್ಯಾಕ್ ಸೋಮಣ್ಣ ಅಭಿಯಾನದ ಹಿಂದೆ ರಾಜಕೀಯ ಪಿತೂರಿ ಇದೆ : ಸಚಿವರ ಭಾವುಕ ನುಡಿ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ನಗರದಲ್ಲಿ ನಡೆಸಲಾದ ಗೋ ಬ್ಯಾಕ್ ಸೋಮಣ್ಣ ಅಭಿಯಾನದ ಹಿಂದೆ ರಾಜಕೀಯ ಪಿತೂರಿ ಇದೆ. ನನ್ನನ್ನು ಸುಳ್ಳುಗಾರ ಎಂದು ಕರೆಯುವುದು ಎಷ್ಟು ಸರಿ ಎಂದು ವಸತಿ ಸಚಿವ ವಿ.ಸೋಮಣ್ಣ ಭಾವುಕರಾಗಿ ಪ್ರಶ್ನಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮುರಿದ ರಥ ಹಾಗೂ ದೇವಸ್ಥಾನ ಜೀರ್ಣೋದ್ಧಾರ ಮಾಡಿಕೊಡುವುದಾಗಿ ಭರವಸೆ ನೀಡಿದ್ದ ಸೋಮಣ್ಣ ಕೊಟ್ಟ ಮಾತಿಗೆ ತಪ್ಪಿದ್ದಾರೆಂದು ಗೋಬ್ಯಾಕ್ ಸೋಮಣ್ಣ ಅಭಿಯಾನ ಆರಂಭಿಸಿದ್ದ ಚಾಮರಾಜನಗರ ತಾಲೂಕಿನ ಚನ್ನಪ್ಪನಪುರ ಅಮಚವಾಡಿ ಮತ್ತಿತರ ಗ್ರಾಮಸ್ಥರೊಂದಿಗೆ ಸೋಮಣ್ಣ ಸಭೆ ನಡೆಸಿದರು.

ಈ ವೇಳೆ ಗೋ ಬ್ಯಾಕ್‌ ಅಭಿಯಾನವನ್ನು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರೇ ನಡೆದರು. ಇದರಿಂದ ಅಸಮಾಧಾನಗೊಂಡು, ಬೆಂಗಳೂರಿನಿಂದ ಫ್ಲೆಕ್ಸ್ ಬೋರ್ಡ್ ತಂದು ಹಾಕಿ ನನ್ನನ್ನು ತೇಜೋವಧೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು, ಇದರ ಹಿಂದೆ ರಾಜಕೀಯ ಪಿತೂರಿ ಇರುವ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿ ನಾನೇನು ತಪ್ಪು ಮಾಡಿದ್ದೇನೆ ಎಂದು ಕೇಳಿದರು.

ಅಲ್ಲದೆ ನನ್ನನ್ನು ಖಳನಾಯಕನನ್ನಾಗಿ ಮಾಡಿದ್ದೀರಿ. ಯಾರೋ ಸೃಷ್ಟಿ ಮಾಡಿ ಕಳಿಸುತ್ತಾರೆ. ಯಾರದ್ದೋ ಮಾತು ಕೇಳಿ ಕೆಟ್ಟದಾಗಿ ನಡೆದುಕೊಂಡರೆ ಹೇಗೆ? ಇನ್ನೊಬ್ಬರ ಮುಲಾಜಿಗೋಸ್ಕರ, ಇನ್ನೊಬ್ಬರನ್ನು ತೃಪ್ತಿಪಡಿಸಲು ನನ್ನನ್ನು ಕೆಟ್ಟದಾಗಿ ಬಿಂಬಿಸಿ ಹರಾಜು ಹಾಕಿದ್ದೀರಿ ಎಂದು ತೀವ್ರ ಅಸಮಾಧಾನ ಹೊರಹಾಕಿದರು.

ದೇವರ ಹತ್ರ ಪಾಲಿಟಿಕ್ಸ್, ಚಿಲ್ಲರೆ ಕೆಲಸ ಮಾಡಬಾರದು, ಕಳೆದು ಹೋಗ್ತೀರಿ ಎಂದಂತಹ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಎಚ್ಚರಿಕೆ ನೀಡಿದರು. ದೇವಸ್ಥಾನ ಸ್ವಚ್ಛವಾಗಿ ಇಟ್ಟುಕೊಳ್ಳಿ ಎನ್ನುವುದೇ ತಪ್ಪಾ? ತಪ್ಪಾಗಿದ್ದರೆ ಕ್ಷಮಿಸಿ. ಇನ್ನು ರಥ ನಿರ್ಮಾಣ ಹಾಗೂ ದೇವಸ್ಥಾನ ಅಭಿವೃದ್ಧಿಗೆ ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ