- ₹5 ಲಕ್ಷಕ್ಕೂ ಮೇಲ್ಪಟ್ಟು ಆಸ್ಪತ್ರೆಗಳ ಬಿಲ್ ಪೇ ಮಾಡುವ ಪರಮಾಧಿಕಾರ ಇರುವುದು ಎಂಡಿಗೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯಕ್ಕಾಗಿ ಇದೇ 2025ರ ಜನವರಿ 6ರಂದು ಎಲ್ಲರು ಒಬ್ಬರಿಗಾಗಿ ಒಬ್ಬರು ಎಲ್ಲರಿಗಾಗಿ ಎಂಬ ಧ್ಯೆಯ ವಾಕ್ಯದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ಚಿಕಿತ್ಸಾ ಸೌಲಭ್ಯ ಯೋಜನೆಗೆ ಚಾಲನೆ ನೀಡಿದ್ದಾರೆ.
ಆದರೆ, ಚಿಕಿತ್ಸೆ ನೀಡಲು ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಕೆಲ ಆಸ್ಪತ್ರೆಗಳಿಗೆ ಸಮಯಕ್ಕೆ ಸರಿಯಾಗಿ ಹಣ ಮಂಜೂರು ಮಾಡದೆ ಇರುವುದರಿಂದ ಆಸ್ಪತ್ರೆಯ ಆಡಳಿತ ವರ್ಗ ಪ್ರಸ್ತುತ ಕೆಎಸ್ಆರ್ಟಿಸಿ ನೌಕರರಿಗೆ ಕ್ಯಾಶ್ಲೆಸ್ ಸೌಲಭ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ರೋಗಿಗಳು ಮರುಪಾವತಿ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬಹುದು ಎಂದು ಬೋರ್ಡ್ಹಾಕಿ ನೌಕರರಿಗೆ ಉಚಿತ ಚಿಕಿತ್ಸೆ ಕೊಡಲು ನಿರಾಕರಿಸುತ್ತಿದ್ದಾರೆ.
ಇದನ್ನು ಗಮನಿಸಿದರೆ ನೌಕರರು ಹಾಗೂ ಅವರ ಕುಟುಂಬದವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗಬೇಕು ಆ ಮೂಲಕ ಅವರ ಜೀವ ಕಾಪಾಡಬೇಕು ಎಂಬ ಸದುದ್ದೇಶದಿಂದ ಆರಂಭವಾಗಿರುವ ಯೋಜನೆ ಎಲ್ಲೋ ಕೆಲ ಅಧಿಕಾರಿಗಳು ಮಾಡುತ್ತಿರುವ ಎಡವಟ್ಟಿನಿಂದ ಆಸ್ಪತ್ರೆಯ ಆಡಳಿತ ವರ್ಗ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಂತಾಗುತ್ತಿದೆ.
ಇನ್ನು ಯಾವ ಅಧಿಕಾರಿಗೆ ಎಷ್ಟು ಹಣ ಮಂಜೂರು ಮಾಡುವ ಅಧಿಕಾರವಿದೆ ಎಂದು ನೋಡುವುದಾದರೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ₹5 ಲಕ್ಷಗಳ ಮೇಲ್ಪಟ್ಟು ಮಂಜೂರು ಮಾಡುವ ಪರಮಾಧಿಕಾರವನ್ನು ಹೊಂದಿದ್ದಾರೆ.
ಅವರಂತೆಯೇ ಸಂಸ್ಥೆಯ ಸಿಬ್ಬಂದಿ ಮತ್ತು ಜಾಗೃತಾ ವಿಭಾಗದ ನಿರ್ದೇಶಕರು ₹1 ಲಕ್ಷದಿಂದ ₹5 ಲಕ್ಷಗಳವರೆಗೆ ಹಾಗೂ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು ₹1 ಲಕ್ಷದವರೆಗೆ ಆಸ್ಪತ್ರೆಗಳಿಗೆ ಬಿಲ್ ಮೊತ್ತವನ್ನು ಮಂಜೂರು ಮಾಡುವ ಅಧಿಕಾರ ಹೊಂದಿದ್ದಾರೆ. ಹೀಗಿದ್ದರೂ ಸಹ ಸಮಯಕ್ಕೆ ಸರಿಯಾಗಿ ರೋಗಿಗಳಿಗೆ ಚಿಕಿತ್ಸೆ ಕೊಡುವುದು ವಿಳಂಬವಾಗುತ್ತಿರುವುದಕ್ಕೆ ಕಾರಣವೇನು ಎಂಬುವುದು ಮಾತ್ರ ಯಕ್ಷ ಪ್ರಶ್ನೆಯಾಗಿದೆ.
ಇನ್ನು ಒಂದು ಮತ್ತೊಂದು ಎಂದು ಆಸ್ಪತ್ರೆಗಳಿಗೆ ಅಲೆದು ಅಲೆದು ಸುಸ್ತಾಗುತ್ತಿರುವ ನೌಕರರು ಹಾಗೂ ಅವರ ಕುಟುಂಬದವರು ಭಾರಿ ಅಸಮಾಧಾನಗೊಂಡಿದ್ದು ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಇಲ್ಲದಿದ್ದರೆ ನಾವು ನಮ್ಮ ಕುಟುಂಬದವರನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಅಲ್ಲದೆ KSRTC ಉಚಿತ ಆರೋಗ್ಯ ಸ್ಕೀಮ್ ಬರಿ ಎಲ್ಲ ಸುಳ್ಳು, ಯಾವ ಆಸ್ಪತ್ರೆಗಳಿಗೆ ಹೋದ್ರು ನಮಗೆ ಬಿಲ್ ಕೊಡ್ತಿಲ್ಲ ನೀವೆ ಹಣ ಕೊಟ್ಟು ಟ್ರೀಟ್ಮೆಂಟ್ ತೊಗೋಬೇಕು ಅಂಥ ಹೇಳ್ತಾರೆ ಬರಿ ಮೋಸ ನೌಕರರಿಗೆ ಬಹಳ ಮೋಸ ಆಗುತ್ತಿದೆ. ಅದಕ್ಕೆ ತಾಜಾ ನಿದರ್ಶನ ಎಂದರೆ ಹಾಸನದ ಜನಪ್ರಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ದೊರೆಯುತ್ತಿಲ್ಲ.
ಅದೇ ಹಾಸನದ ಡೆಂಟಲ್ ಕ್ಲಿನಿಕ್ ಒಂದಕ್ಕೆ ಹೋದ್ರೆ ಬರಿ ಫೀಸ್ ಫ್ರೀ, ಟ್ರೀಟ್ಮೆಂಟ್ಗೆ KSRTC ದುಡ್ಡು ಕೊಡ್ತಿಲ್ಲ ನೀವೆ ಪೇ ಮಾಡಬೇಕು ಅಂಥ ಹೇಳ್ತಾರೆ. ಈ ಅನ್ಯಾಯವನ್ನು ಕೇಳುವವರು ಯಾರು ಇಲ್ವಾ? ನಮ್ ದುಡ್ಡು ಕಟ್ ಮಾಡಿಕೊಂಡು ಚಿಕಿತ್ಸೆ ನೀಡುತ್ತಿಲ್ಲ, ಏನು ಪ್ರಯೋಜನ ಇದರ ಬಗ್ಗೆ ಗಂಭೀರವಾಗಿ ಕ್ರಮ ಜರುಗಿಸಿ ಎಂದು ಎಂಡಿ ಅವರಲ್ಲಿ ಮನವಿ ಮಾಡಿದ್ದಾರೆ.
ಇನ್ನು ಯಾವ ಆಸ್ಪತ್ರೆಗೆ ಹೋದ್ರು ಸರಿಯಾದ ರೀತಿ ಟ್ರೀಟ್ಮೆಂಟ್ ಕೊಡುತ್ತಿಲ್ಲ ಈಗ ಜನಪ್ರಿಯ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆ ದೊರಕುವುದಿಲ್ಲ ಅಂತ ಹೇಳುತ್ತಾರೆ. ಮಂಗಳ ಆಸ್ಪತ್ರೆಗೆ ಹೋದರೆ ಮೇಲೆ ಕರೆದುಕೊಂಡು ಹೋಗಿ ಅಲ್ಲೇ ಕೂರಿಸಿ ಬಿಡುತ್ತಾರೆ ಗಂಟೆಗಟ್ಟಲೆ ಕೂತರು ಯಾವುದೇ ರೀತಿ ಟ್ರೀಟ್ಮೆಂಟ್ ದೊರಕುತ್ತಿಲ್ಲ ಎಂದು ಹಾಸನ ವಿಭಾಗದ ನೌಕರರು ಅಳಲು ತೋಡಿಕೊಂಡಿದ್ದಾರೆ.
ಇನ್ನು ನಗದು ರಹಿತ ಆರೋಗ್ಯ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಬಯಸಿದರೆ ಇದನ್ನು ನೋಡಿ: https://ksrtc.org/arogya/about_scheme.php
Related

You Might Also Like
KSRTC ಬಡ ಸಾರಿಗೆ ನೌಕರರ ಮೇಲೆ ಎಸ್ಮಾ ಜಾರಿ ಸಲ್ಲ: ಸಾರಿಗೆ ಸಚಿವರು ಪರಿಶೀಲಿಸಿ- ಅಧಿವೇಶನದಲ್ಲಿ ಶಾಸಕರ ಆಗ್ರಹ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಿಂದ ಕರ್ನಾಟಕ ರಾಜ್ಯ ಅತ್ಯವಶ್ಯಕ ಸೇವೆ ವಿಧೇಯಕವನ್ನು ಮಂಡಿಸುವ ಸಂದರ್ಭದಲ್ಲಿ ರಾಜ್ಯದ ಸಾರಿಗೆ ನೌಕರರ ಮೇಲೆ ಎಸ್ಮಾ ಕಾಯಿದೆಯನ್ನು ಜಾರಿ ಮಾಡುತ್ತಿರುವ ಬಗ್ಗೆ...
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...