ಬೆಂಗಳೂರು: ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಸಿ ನಂತರ ಮಾತನಾಡಿ ಡಿಸಿ, ಭಾರತ ದೇಶ ಕಂಡ ಅಪ್ರತಿಮ ಮಹಾನ್ ಧೀಮಂತ ವ್ಯಕ್ತಿ, ನಮಗೆ ಸಂವಿಧಾನವನ್ನು ರಚಿಸಿಕೊಟ್ಟ, ಸರಳ ಮತ್ತು ಸಜ್ಜನಿಕೆಯ ವ್ಯಕ್ತಿತ್ವ ನಮ್ಮ ಡಾ.ಬಿ.ಆರ್ ಅಂಬೇಡ್ಕರ್ ಅವರದು ಎಂದರು.
ಇನ್ನು ಅವರು ಸುಮಾರು 32 ಪದವಿಗಳನ್ನು ಅಧ್ಯಯನ ಮಾಡಿದ್ದಾರೆ. ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಎಷ್ಟೇ ಮಾತನಾಡಿದರು ಅದು ಕಡಿಮೆ, ಅವರ ಸಾಧನೆ ಒಂದು ಜನಾಂಗಕ್ಕೆ ಮಾತ್ರ ಸೀಮಿತ ಅಲ್ಲ, ಇಡೀ ಜಗತ್ತಿಗೆ ಅವರು ಮಾಡಿರುವ ಸಾಧನೆ ಅಗಾಧ ಎಂದು ಹೇಳಿದರು.
ಅಂಬೇಡ್ಕರ್ ಅವರು ನಡೆದ ದಾರಿಯಲ್ಲಿ ಇಂದಿನ ಯುವ ಜನಾಂಗವು ಸಾಗಬೇಕು, ಅಂಬೇಡ್ಕರ್ ಅವರ ರೀತಿಯಲ್ಲಿ ಯುವ ಜನಾಂಗವು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವುದರಿಂದ ದೇಶದಲ್ಲಿ ಇನ್ನೂ ಮಹತ್ತರವಾದ ಬದಲಾವಣೆಯನ್ನು ಕಾಣಬಹುದು. ಇಂದು ನಾವು ಅವರ 134ನೇ ಜನ್ಮ ದಿನಾಚರಣೆ ಮಾಡುತ್ತಿರುವುದು ನಮ್ಮ ಹೆಮ್ಮೆಯ ಕ್ಷಣವಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್. ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಜಿಲ್ಲಾ ಮಟ್ಟದ ಅಧಿಕಾರಿಗಳು ದಲಿತ ಸಂಘಟನೆಗಳು, ಜನಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.
Related

You Might Also Like
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...