ಏ.15ರಂದು ನಡೆದ KSRTC ಸಂಘಟನೆಗಳ ಸಭೆಯಲ್ಲಿ ಕೊಟ್ಟ ಭರವಸೆ ಶೀಘ್ರ ಜಾರಿಗೆ ತನ್ನಿ: ಸಿಎಂಗೆ ನೌಕರರ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೂ ಉಳಿದ 70 ನಿಗಮಗಳಿಗೆ ನೀಡುವ ವೇತನದಂತೆ ಹಾಗೂ ತಮ್ಮ ಪ್ರಣಾಳಿಕೆಯಂತೆ ಸರಿ ಸಮಾನ ವೇತನ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಸಮಸ್ತ ಸಾರಿಗೆ ನೌಕರರು ಮನವಿ ಮಾಡಿದ್ದಾರೆ.
ತಾವು ನಮ್ಮ ನೌಕರರ ಸಂಘಟನೆಗಳೊಂಗೆ ಇದೇ ಏ.15ರಂದು ಸಂಜೆ ನಡೆಸಿದ ಸಭೆಯಲ್ಲಿ ಸರಿ ಸಮಾನ ವೇತನ ಸೇರಿ ಇತರೆ ನಿಮ್ಮ ಬೇಡಿಕೆಗಳನ್ನು ಅತೀ ಶೀಘ್ರದಲ್ಲೇ ಈಡೇರಿಸುತ್ತೇವೆ ಎಂದು ಭರವಸೆ ನೀಡಿರುವುದಾಗಿ ನೀವೆ ಮಾಧ್ಯಮಗಳಿಗೆ ತಿಳಿಸಿದ್ದೀರಿ. ಅದರಂತೆ ನಮಗೆ ಸರಿ ಸಮಾನ ವೇತನವನ್ನು ಜಾರಿ ಮಾಡಬೇಕು ಎಂದು ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ನಮಗೂ ವೇತನ ಆಯೋಗದಂತೆ ವೇತನ ನೀಡಿದರೆ ಕಾಂಗ್ರೆಸ್ ಪಕ್ಷವು ಮತ್ತಷ್ಟು ಅವಧಿಗಳಿಗೆ ಆಯ್ಕೆ ಆಗುವುದು ಖಚಿತ ಹಾಗೂ ನಿಗಮದ 1.20 ಲಕ್ಷ ನೌಕರರು ಮತ್ತು ಕುಟುಂಬ ವರ್ಗವು ಸೇರಿದಂತೆ ದುಡಿಯುವ ವರ್ಗದ ಎಲ್ಲ ಮತದಾರರ ಒಲವು ಜೀವನಪೂರ್ತಿ ತಮ್ಮ ಮೇಲೆ ಇರುತ್ತದೆ ಎಂದು ಹೇಳಿದ್ದಾರೆ.
ಇನ್ನು ತಮ್ಮ ಸರ್ಕಾರದ ಕುರಿತು ಪ್ರಚಾರದ ಮಾಧ್ಯಮವಾಗಿ ಸಾರಿಗೆಯ ಚಾಲಕರು ಪ್ರಯಾಣಿಕರಿಗೆ ರಾಜ್ಯದ ಉದ್ದಗಲಕ್ಕೂ ಪ್ರಯಾಣದ ವೇಳೆಯಲ್ಲಿ ಅಬ್ಬರದ ಪ್ರಚಾರ ಮತ್ತು ಮಾತುಕತೆಯ ಮೂಲಕ ಮಾಡುತ್ತಾರೆ. ಇದು ಒಂದು ರೀತಿಯಲ್ಲಿ ಖರ್ಚುರಹಿತ ತಮ್ಮ ಸರ್ಕಾರದ ಕುರಿತು ಮಾಧ್ಯಮದ ಪ್ರಚಾರದಂತೆ ಆಗುತ್ತದೆ ಎಂದಿದ್ದಾರೆ.
ಇತಿಹಾಸವನ್ನು ತಿರುವುಹಾಕಿದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಲಾಭ ಮಾಡಿದ ಪಕ್ಷವು ಬಹುತೇಕ ಲಾಭವನ್ನೇ ನೋಡಿದೆ. ಆದ್ದರಿಂದ ದಯಮಾಡಿ 70 ನಿಗಮಗಳು ಮತ್ತು ಸರ್ಕಾರದ ಇಲಾಖೆಗಳಿಗೆ ನೀಡುವ ವೇತನ ಆಯೋಗದಂತೆ ಸಾರಿಗೆ ಸಂಸ್ಥೆಯ ನೌಕರರಿಗೂ ಸಹ ವೇತನ ಆಯೋಗ ಜಾರಿ ಮಾಡಬೇಕೆಂದು ಈ ಮೂಲಕ ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತೇವೆ.
ದಯವಿಟ್ಟು ಭ್ರಷ್ಟ ಸಂಘಟನೆಗಳ ದಲ್ಲಾಳಿಗಳ ಮುಖ ನೋಡಬೇಡಿ ಸಾರಿಗೆ ಸಂಸ್ಥೆ ನಿಷ್ಠಾವಂತ ನೌಕರರ ಮುಖ ನೋಡಿ ವೇತನ ಆಯೋಗ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದು, ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯನ್ನು ಜಾರಿ ಮಾಡಿ ಹಾಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿಯನ್ನು ಕೂಡಲೇ ಬಿಡುಗಡೆ ಮಾಡಲು ಆದೇಶ ಹೊರಡಿಸಿ ಎಂದು ಕೇಳಿಕೊಂಡಿದ್ದಾರೆ.
Related

You Might Also Like
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...