CRIMENEWSನಮ್ಮಜಿಲ್ಲೆಬೆಂಗಳೂರು

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕ ಅರೆಸ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಿಳೆಗೆ ತನ್ನ ಖಾಸಗಿ (ಗುಪ್ತಾಂಗ) ಭಾಗ ತೋರಿಸಿ ವಿಕೃತಿ ಮೆರೆದಿದ್ದ ಯುವಕನನ್ನು ಶಿವಾಜಿ ನಗರ ಪೊಲೀಸರು ಬಂಧಿಸಿ ಕಂಬಿಹಿಂದೆ ಬಿಟ್ಟಿದ್ದಾರೆ.

ಕಾರ್ತಿಕ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಊಟ ಮುಗಿಸಿ ಮಹಿಳೆ ಎರಡನೇ ಮಹಡಿಗೆ ಮಲಗಲು ಹೋಗುತ್ತಿದ್ದಳು. ಆ ಸಮಯದಲ್ಲಿ, ಎದುರಿನ ಮನೆಯಲ್ಲಿದ್ದ ಆರೋಪಿ ತನ್ನ ಪ್ಯಾಂಟ್ ಗುಂಡಿಗಳನ್ನು ಬಿಚ್ಚಿ ತನ್ನ ಖಾಸಗಿ ಭಾಗಗಳನ್ನು ತೋರಿಸಿದ್ದಾನೆ.

ಈ ವೇಳೆ ಮಹಿಳೆ ಅವನನ್ನು ಪ್ರಶ್ನಿಸಿದಾಗ, ಗಲಾಟೆ ಮಾಡಿದ್ದಾನೆ ಅಲ್ಲದೆ ಆತ ತನ್ನ ಗಂಡನ ಮೇಲೂ ಹಲ್ಲೆ ಮಾಡಿದ್ದಾನೆ. ಜತೆಗೆ ಈ ವೇಳೆ ಜಗಳ ಬಿಡಿಸಲು ಬಂದವರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಇನ್ನು ಈ ಘಟನೆ ಏಪ್ರಿಲ್ 13 ರಂದು ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ನಡೆದಿದೆ.

ಎರಡನೇ ಮಹಡಿಯಿಂದ ಒಂದು ಹಾಲೋ ಬ್ಲಾಕ್ ಮತ್ತು ಹೂವಿನ ಕುಂಡವನ್ನು ನೆಲ ಮಹಡಿಯಲ್ಲಿರುವವರ ಮೇಲೆ ಎಸೆದಿದ್ದಾನೆ. ಈ ವೇಳೆ ಬುದ್ಧಿ ಹೇಳಲು ಹೋದವರ ಮೇಲೂ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಏಳು ಜನರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸದ್ಯ ಈಗ ಶಿವಾಜಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಕಾರ್ತಿಕ್ ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ವಿಚಾರಣೆ ವೇಳೆ ಆತ ನಾನು ಮೂತ್ರ ವಿಸರ್ಜನೆ ಮಾಡುತ್ತಿದ್ದೆ ಆ ಸಮಯದಲ್ಲಿ ಮಹಿಳೆ ಬಂದಿದ್ದಾಳೆ. ಆಗ ಗಲಾಟೆ ನಡೆದಿದೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

Deva
the authorDeva

Leave a Reply

error: Content is protected !!
Latest news
KSRTC: ನೌಕರರ ವೇತನ ಹೆಚ್ಚಳ ಸಂಬಂಧದ ಹೋರಾಟ ನಿಲ್ಲುವುದಿಲ್ಲ ಹೈ ಕೋರ್ಟ್‌ ನಿರ್ದೇಶನದಂತೆ ಮುಂದುವರಿಯಲಿದೆ- ಚಂದ್ರಶೇಖರ... ಏ.29ರಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ 2024ರ ಜ.1ರಿಂದ ನೌಕರರ ವೇತನ ಹೆಚ್ಚಳ, ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ... ಏ.29ರ ಒಳಗೆ ರೈತರ ಖಾತೆಗೆ ಬಾಕಿ ಹಣ ಜಮಾ ಡಿಸಿ ಭರವಸೆ ಹಿನ್ನೆಲೆ ಧರಣಿ ತಾತ್ಕಾಲಿಕ ಮುಂದೂಡಿಕೆ: ಕುರುಬೂರು ಶಾಂತಕುಮಾರ್... ಇದ್ದಲ್ಲಿಂದಲೇ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೀರುವ ಸಾರಿಗೆ ನೌಕರರು: ಧರ್ಮ ಸಂಕಟದಲ್ಲಿ ಪೊಲೀಸರು ಮೈಸೂರು: ಹೆಚ್ಚುವರಿ ಹಣ 100 ರೂ. ಪಾವತಿಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ KSRTC: ಪ್ರಣಾಳಿಕೆ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ... KSRTC: ಅರಿಸಿನಕುಂಟೆಯಲ್ಲಿ ಪಾದಯಾತ್ರೆ ತಡೆದಿದ್ದ ಪೊಲೀಸರು ಸದ್ಯ ಫ್ರೀಡಂ ಪಾರ್ಕ್‌ನತ್ತ ಹೊರಟ ಸಾರಿಗೆ ನೌಕರರು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ, ಸಾರಿಗೆ ಸಚಿವರಿಗೆ ಮಾರ್ಗದರ್ಶನ ನೀಡುವಂತೆ ಹೈ ಕೋರ್ಟ್‌ ಸಿಜೆಗೆ ಲಿಖಿತ ಮನವ... KSRTC: ಬೆಂಗಳೂರಿಗೆ ಪಾದಯಾತ್ರೆ ಬರುತ್ತಿರುವ ಸಾರಿಗೆ ನೌಕರರ ಅರಿಸಿನಕುಂಟೆ ಬಳಿ ತಡೆದ ಪೊಲೀಸರು KSRTC: ಮುಂದಿನ ಚಕ್ರದ ಮುಡಿ ಕಟ್ಟಾಗಿ ಬಸ್‌ ಪಲ್ಟಿ- ಸಣ್ಣಪುಟ್ಟಗಾಯಗಳೊಂದಿಗೆ 74 ಪ್ರಯಾಣಿಕರು ಪಾರು