ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕಮಗಳೂರು ವಿಭಾಗದ ಕಡೂರು ಘಟಕದ ಎಟಿಎಸ್ ಕಿರುಕುಳದಿಂದ ಮನನೊಂದ ಚಾಲನಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ನಡುವೆ ಸೆಣಸಾಡುತ್ತಿರುವ ಘಟನೆ ಇಂದು ಘಟಕದಲ್ಲಿ ನಡೆದಿದೆ.
ಕಡೂರು ಘಟಕದ ಚಾಲಕ ಮಧು ಎಂಬುವರೆ ಈ ಅಧಿಕಾರಿಯ ಕಿರುಕುಳದಿಂದ ಮನನೊಂದು (ಏ.18) ಇಂದು ಡಿಪೋದಲ್ಲೇ ಆತ್ಮಹತ್ಯೆಗೆ ಯತ್ನಿಸಿದವರು. ಸದ್ಯ ಕಡೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ಇನ್ನು ಘಟಕದಲ್ಲಿ ಎಟಿಸ್ ಪುಟ್ಟಸ್ವಾಮಿ ಎಂಬಾತ ತಮಗಿಷ್ಟ ಬಂದಂತೆ ರಜೆ ಕೊಡುವುದು ಹಾಗೂ ನೌಕರರು ಡ್ಯೂಟಿ ಮಾಡಿದರೂ ಗೈರು ಹಾಜರಿ ಮಾಡುವ ಮೂಲಕ ಇನ್ನಿಲ್ಲದ ಕಿರುಕುಳ ನೀಡುತ್ತಿದ್ದಾನೆ. ಅಲ್ಲದೆ ಮಧು ವಾರದ ರಜೆಯಲ್ಲಿ ಡ್ಯೂಟಿ ಮಾಡಿದ್ದಾರೆ. ಈ ನಡುವೆ ತಮ್ಮ 7 ವರ್ಷದ ಪುತ್ರನಿಗೆ ಅನಾರೋಗ್ಯವಾಗಿದ್ದ ಕಾರಣ ಆ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು.
ಆದರೆ, ಇಂಥ ಕಠಿಣ ಪರಿಸ್ಥಿತಿಯ ನಡುವೆಯೂ ವಾರದ ರಜೆ ದಿನದಲ್ಲೂ ಡ್ಯೂಟಿ ಮಾಡಿ ಬಳಿಕ ಮಗುವಿನ ಆರೋಗ್ಯ ಸಮಸ್ಯೆ ಹೆಚ್ಚಾದ್ದರಿಂದ ವಾರದ ರಜೆಯಲ್ಲಿ ಮಾಡಿರುವುದಕ್ಕೆ ಒಂದು C-Off ಕೊಡಿ ಎಂದು ಕೇಳಿದ್ದಾರೆ. ಆದರೆ ಸಿ ಆಫ್ ಕೊಡದೆ ಗೈರು ಹಾಜರಿ ತೋರಿಸುವ ಮೂಲಕ ಕಿರುಕುಳ ನೀಡಿದ್ದಾನೆ ಈ ಎಟಿಎಸ್ ಪುಟ್ಟಸ್ವಾಮಿ ಎಂಬ ಆರೋಪ ಕೇಳಿ ಬಂದಿದೆ.
ಅಲ್ಲದೆ ಇದೇ ರೀತಿ ಇತರ ನೌಕರರಿಗೂ ಕಿರುಕುಳ ನೀಡುತ್ತಿದ್ದಾನೆ ಈ ಎಟಿಎಸ್. ತಿಂಗಳಲ್ಲಿ 22ದಿನ ಡ್ಯೂಟಿ ಮಾಡಿದರೆ ಎಲ್ಲ ರಜೆ ಪಡೆಯುವುದಕ್ಕೂ ನೌಕರರು ಅರ್ಹರಿರುತ್ತಾರೆ ಎಂದು ಸಂಸ್ಥೆಯಲ್ಲಿಯೇ ಒಂದು ಅವೈಜ್ಞಾನಿಕ ನಿಯಮವನ್ನು ಮಾಡಿಕೊಂಡಿದ್ದಾರೆ. ಅದರಂತೆ 22 ದಿನಗಳ ಡ್ಯೂಟಿ ಮಾಡಿದರೂ ನೌಕರರಿಗೆ ರಜೆ ಸೌಲಭ್ಯ ಕೊಡದೆ ಭಾರಿ ಕಿರುಕುಳ ನೀಡುತ್ತಿದ್ದಾರೆ.
ಇನ್ನು ಡ್ಯೂಟಿ ಮಾಡಿದರೂ ನಾವು ವಾರದ ರಜೆಯನ್ನು ಪಡೆಯದ ಸ್ಥಿತಿ ಘಟಕದಲ್ಲಿ ನಿರ್ಮಾಣವಾಗಿದೆ. ಈ ಎಟಿಎಸ್ ಪುಟ್ಟಸ್ವಾಮಿ ಕಳೆದ 8-9 ವರ್ಷಗಳಿಂದಲೂ ಇದೇ ಡಿಪೋದಲ್ಲಿ ಇದ್ದು ಲಂಚಕೊಟ್ಟವರಿಗೆ ಮಾತ್ರ ರಜೆ ಮಂಜೂರು ಮಾಡುತ್ತಾರೆ, ಲಂಚ ಕೊಡದಿದ್ದರೆ ಗೈರು ಹಾಜರಿ ತೋರಿಸುತ್ತಾರೆ ಎಂದು ಘಟಕದ ನೌಕರರು ಕಿಡಿಕಾರಿದ್ದಾರೆ.
ಇಂಥ ಭ್ರಷ್ಟರು ಘಟಕದಲ್ಲಿ ಇರುವುದರಿಂದ ಇಲ್ಲಿ ಇರುವ ಇತರ ಅಧಿಕಾರಿಗಳಿಗೂ ಕೆಟ್ಟ ಹೆಸರು ಬರುತ್ತಿದೆ. ಇಲ್ಲಿ ಒಳ್ಳೆ ಅಧಿಕಾರಿಗಳು ಇದ್ದರೂ ಅವರ ಮಾತಿಗೆ ಬೆಲೆ ಇಲ್ಲದಂತಾಗಿದೆ. ಇನ್ನು ಘಟಕ ವ್ಯವಸ್ಥಾಪಕರು ಹೊಸದಾಗಿ ಬಂದಿದ್ದು ಅವರಿಗೆ ಈತನ ಬಗ್ಗೆ ಇನ್ನೂ ಏನು ಗೊತ್ತಿಲ್ಲ ಎಂದು ನೌಕರರು ತಿಳಿಸಿದ್ದಾರೆ.
ಇನ್ನಾದರೂ ಇಂಥ ಲಂಚಕೋರ ಎಟಿಎಸ್ಅನ್ನು ಕೂಡಲೇ ವರ್ಗಾವಣೆ ಮಾಡಿ ಜತೆಗೆ ಈತ ಪಡೆದಿರುವ ಲಂಚದ ಬಗ್ಗೆ ಸಂಸ್ಥೆಯ ಕಾನೂನು ವಿಭಾಗದ ಅಧಿಕಾರಿಗಳು ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಿ ಈತನ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
Related

You Might Also Like
KSRTC ಬಡ ಸಾರಿಗೆ ನೌಕರರ ಮೇಲೆ ಎಸ್ಮಾ ಜಾರಿ ಸಲ್ಲ: ಸಾರಿಗೆ ಸಚಿವರು ಪರಿಶೀಲಿಸಿ- ಅಧಿವೇಶನದಲ್ಲಿ ಶಾಸಕರ ಆಗ್ರಹ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಿಂದ ಕರ್ನಾಟಕ ರಾಜ್ಯ ಅತ್ಯವಶ್ಯಕ ಸೇವೆ ವಿಧೇಯಕವನ್ನು ಮಂಡಿಸುವ ಸಂದರ್ಭದಲ್ಲಿ ರಾಜ್ಯದ ಸಾರಿಗೆ ನೌಕರರ ಮೇಲೆ ಎಸ್ಮಾ ಕಾಯಿದೆಯನ್ನು ಜಾರಿ ಮಾಡುತ್ತಿರುವ ಬಗ್ಗೆ...
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...