NEWSವಿದೇಶ

ಡೆಡ್ಲಿ ಕೊರೊನಾಗೆ ಎಸ್ಸೆಸ್ಸೆಲ್ಸಿ ಸೇರಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವವನ್ನೇ ಒಂದುರೀತಿ ಶೋಕದ ಕಡಲಲ್ಲಿ ತೇಲಿಸುತ್ತಿರುವ ಡೆಡ್ಲಿಕೊರೊನಾಗೆ ಭಾರತ ಮುಂಜಾಗ್ರತೆ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಜನತಾ ಕರ್ಫ್ಯೂಗೆ ದೇಶವಾಸಿಗಳ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ,  ಯಾವುದೇ ಚುನಾವಣೆಗಳಿದ್ದರು ಅದನ್ನು ಮುಂದೂಡಲಾಗುವುದು, ಜತೆಗೆ ದೇಶಿಯ ಪ್ರಯಾಣಿಕರನ್ನೂ ಕೂಡ ತಪಾಸಣೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕೊರೊನಾ ಇಡೀಪ್ರಪಂಚವನ್ನೇ ಆವರಿಸುವುದರಿಂದ ಭವಿಷ್ಯದ ಪ್ರಜೆಗಳಿಗೆ ಇರುವ  SSLC ಪರೀಕ್ಷೆ ಸೇರಿ ಎಲ್ಲಾ ಪರೀಕ್ಷೆಗಳನ್ನು ಅನಿರ್ದಿಷ್ಟ ಅವಧಿವರೆಗೆ  ಮುಂದೂಡಲಾಗುವುದು. ಕೊರೊನಾ ಪೀಡಿತರು ಸೇರಿ ಯಾವುದೇ ವ್ಯಕ್ತಿ ರಾಜ್ಯದ ಗಡಿಗಳನ್ನು ದಾಟದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಕರ್ನಾಟಕ ಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು ಎಂದು  ಹೇಳಿದರು.

ಜನತಾ ಕರ್ಫ್ಯೂಗೆ ರಾಜ್ಯದ ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕೋಟೆನಾಡು ಚಿತ್ರದುರ್ಗ ಎಲ್ಲಾ ಜಿಲ್ಲೆಗಳು ಸ್ತಬ್ಧವಾಗಿವೆ. ತರಕಾರಿ ಮಾರುಕಟ್ಟೆ, ಅಂಗಡಿ, ಹೊಟೇಲ್ ಗಳು ಬಂದ್ ಆಗಿವೆ.

ಸಣ್ಣ ಹಳ್ಳಿಗಳಲ್ಲೂ ಅಂಗಡಿ ಹೋಟೆಲ್‌ಗಳನ್ನು ಬಂದ್‌ ಮಾಡಲಾಗಿದೆ. KSRTC, BMTC ಬಸ್‌ಗಳು ರಸ್ತೆಗಿಳಿಯದ ಕಾರಣ ಮೆಜೆಸ್ಟಿಕ್ ಸಂಪೂರ್ಣ ಬಂದ್ ಆಗಿದೆ. ಇದಕ್ಕೆ ಬೆಂಬಲವಾಗಿ ಆಟೋ, ಟ್ಯಾಕ್ಸಿ ಇತರ ವಾಹನಗಳೂ ರಸ್ತೆಗಿಳಿದ್ದಿಲ್ಲ.

ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಲ್ಲಿ ಕೊರೊನಾ ವೈರಸ್‌ ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದ ಕೊರೊನಾ ಪೀಡಿತರ ಸಂಖ್ಯೆ 21ಕ್ಕೆ ಏರಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ