ಸಾರಿಗೆ ನೌಕರರ ಸೈಕಲ್ಜಾಥಾದ ಯಶಸ್ಸು ಸಹಿಸದೆ ನೌಕರರನ್ನು ಎತ್ತಿಕಟ್ಟುವ ಕೆಲಸ – ಕೂಟದ ಅಧ್ಯಕ್ಷರ ವಿರುದ್ಧ ಅಪಪ್ರಚಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಇದೇ ಅ.10ರಿಂದ ಹಮ್ಮಿಕೊಂಡಿರುವ ರಾಜ್ಯಾದ್ಯಂತ ಬೃಹತ್ಸೈಕಲ್ಜಾಥಾ ಹತ್ತಿಕ್ಕುವ ಹುನ್ನಾರಗಳು ನಡೆಯುತ್ತಿವೆ.
ಈ ನಿಟ್ಟಿನಲ್ಲಿ ಕೂಟದ ಅಧ್ಯಕ್ಷ ಚಂದ್ರಶೇಖರ್ವಿರುದ್ಧ ವಜಾಗೊಂಡ, ಅಮಾನತಾಗಿರುವ ಮತ್ತು ಇತರೆ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಕೊಂಡಿರುವ ನೌಕರರನ್ನು ಎತ್ತಿಕಟ್ಟುವ ಕೆಲಸಕ್ಕೆ ಕೆಲ ಸಂಘಟನೆಗಳ ಮುಖಂಡರು ತೆರೆಮರೆಯಲ್ಲಿ ಕಸರತ್ತು ಮಾಡುತ್ತಿದ್ದಾರೆ.
ಸಾರಿಗೆ ನೌಕರರ ಕೂಟದ ಅಧ್ಯಕ್ಷರು ನೌಕರರು ಮತ್ತು ಕೂಟದ ಪದಾಧಿಕಾರಿಗಳ ಮಾತನ್ನೇ ಕೇಳುವುದಿಲ್ಲ ಎಂದು ಎರಡು ತಿಂಗಳ ಹಳೆಯ ಆಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಈ ಮೂಲಕ ಸೈಕಲ್ಜಾಥಾವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ.
ಆದರೆ, ಈ ಬಗ್ಗೆ ಯಾವ ನೌಕರರು ತೆಲೆ ಕೆಡಿಸಿಕೊಳ್ಳದೆ ನಮ್ಮ ನ್ಯಾಯಯುತ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಚಂದ್ರು ಮನವಿ ಮಾಡಿದ್ದಾರೆ. ಅಲ್ಲದೆ ನಾವು ಕುಟುಂಬವನ್ನು ನೂರಾರು ಕಿಮೀ ದೂರದಲ್ಲಿ ಬಿಟ್ಟು ರಾಜ್ಯಾದ ಮೂಲೆ ಮೂಲೆಗಳಿಗೂ ಸೈಕಲ್ಜಾಥಾ ಮಾಡುತ್ತಿದ್ದೇವೆ. ಅಲ್ಲಿ ನಮ್ಮ ಕುಟುಂಬ ಯಾವ ಸ್ಥಿತಿಯಲ್ಲಿ ಇದೆ ಎಂಬುವುದು ಕೂಡ ನಮಗೆ ಗೊತ್ತಾಗುತ್ತಿಲ್ಲ.
ಈ ಹೋರಾಟ ನನಗಾಗಿ ಅಲ್ಲ, ನಮಗಾಗಿ ಅಂದರೆ ಸಮಸ್ತ ನೌಕರರು ಮತ್ತು ಕುಟುಂಬದವರ ಮುಂದಿನ ಭವಿಷ್ಯಕ್ಕಾಗಿ. ಈಗಾಗಲೇ ಪ್ರತಿ ನೌಕರನಿಗೂ ಇದು ತಿಳಿದಿದೆ. ಈ ಬಗ್ಗೆ ನಾನು ಏನನ್ನು ಹೇಳಬೇಕಿಲ್ಲ. ಅದರೆ, ಕೆಲ ಕಿಡಿಗೇಡಿಗಳು ನೌಕರರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದು ಒಂದು ಸಂಘಟನೆ ಎಂದು ನೋಡಬೇಡಿ ನಾವು ನಿಮ್ಮ ಭವಿಷ್ಯ ಉತ್ತಮವಾಗಿರಲಿ ಎಂದು ಮತ್ತು ನೌಕರರಿಗೆ ಸಿಗಬೇಕಿರುವ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಮತ್ತು ನಿಗಮಗಳ ಆಡಳಿತ ಮಂಡಳಿಗಳ ಮುಂದೆ ಮಂಡಿಸುತ್ತಿದ್ದು ಈಡೇರಸಬೇಕು ಎಂದು ಮನವಿ ಮಾಡುತ್ತಿದ್ದೇವೆ.
ಆದರೆ, ನಮ್ಮ ಬೇಡಿಕೆಗಳಲ್ಲಿ ಪ್ರಮುಖವಾಗಿರುವ ವೇತನ ಆಯೋಗದ ಬಗ್ಗೆ ನಮ್ಮ ನೌಕರರ ಹಲವು ಸಂಘಟನೆಗಳ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಮಾನ ವೇತನ ಬೇಡ ಎಂಬ ನಿಟ್ಟಿನಲ್ಲಿ ಮಾತನಾಡುತ್ತಿದ್ದಾರೆ.
ಅವರಂತೆ ನಾವು ಮಾಡಿದರೆ ಮತ್ತೆ 4 ವರ್ಷಕ್ಕೊಮ್ಮೆ ಇದೆ ಅಮಾನತು, ವಜಾ ಶಿಕ್ಷೆಗೆ ನೌಕರರು ಗುರಿಯಾಗುತ್ತಲೇ ಇರುತ್ತೇವೆ. ಅದು ಬೇಡ ನಮಗೆ ಶಾಶ್ವತ ಪರಿಹಾರ ಬೇಕು ಎಂದು ಎಂಬ ನಿಟ್ಟಿನಲ್ಲಿ ನಾವು ಅಂತಿಮವಾಗಿ ಈ ಜಾಥಾ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಇನ್ನು ಇದೇ ಅ.27ರಂದು ಕಲಬುರಗಿಯಲ್ಲಿ ಬೃಹತ್ಸಮಾವೇಶ ನಡೆಯಲಿದೆ. ಅದಕ್ಕೆ ಸಾವಿರಕ್ಕೂ ಮೀರಿ ನೌಕರರು ಭಾಗವಹಿಸಲಿದ್ದಾರೆ. ಈ ಸಮಾವೇಶವನ್ನು ಹತ್ತಿಕ್ಕುವ ಸಲುವಾಗಿಯೂ ಈ ಪಿತೂರಿ ಮಾಡುತ್ತಿದ್ದಾರೆ ಎಂದು ಚಂದ್ರು ಆರೋಪಿಸಿದ್ದಾರೆ.
ಒಟ್ಟಾರೆ ನಮ್ಮ ಜೀವವಿರುವ ವರೆಗೂ ನಾವು ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಶ್ರಮಿಸುತ್ತಿರುವತ್ತೇವೆ ಎಂದು ನೌಕರರ ಕೂಟದ ಎಲ್ಲ ಪದಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.
ಇನ್ನು ಕಳೆದ 2-3 ತಿಂಗಳ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ಆಗುತ್ತಿರುವುದರ ಬಗ್ಗೆ ಕೂಟದ ಜಮರಾಮ ರಾಥೋಡ್ಅವರು ವಿಜಯಪಥಕ್ಕೆ ಪ್ರತಿಕ್ರಿಯಿಸಿದ್ದು, ಅಂದು ಮಾತನಾಡಿರುವುದು ನಾವೇ. ಅದು ಅಂದಿನ ಸಂದರ್ಭದಲ್ಲಿ ನಮ್ಮನ್ನು ಯಾರೋ ದಿಕ್ಕು ತಪ್ಪಿಸಿದ್ದರಿಂದ ಸ್ವಲ್ಪಕೋಪಗೊಂಡು ಚಂದ್ರಶೇಖರ್ಅವರ ಬಗ್ಗೆ ಮಾತನಾಡಿದ್ದೇವೆ. ಆದರೆ ಆ ರೀತಿ ಏನು ಇಲ್ಲ ನಾನು ಕೂಟದಲ್ಲೇ ಇದ್ದೇನೆ. ಈಗ ದೊಡ್ಡಮಟ್ಟದ ಸಮಾವೇಶ ಮಾಡುತ್ತಿದ್ದೇವೆ. ಹೀಗಾಗಿ ನೌಕರರು ಯಾರು ಆ ಆಡಿಯೋ ಬಗ್ಗೆ ತಲೆಕೆಡಿಸಿಕೊಳ್ಳದೆ ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
Related

You Might Also Like
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...
ನಟ ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್...
NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ...
ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...
KKRTC ಯಾದಗಿರಿ: ಇಬ್ಬರು ವಿಭಾಗಮಟ್ಟದ ಅಧಿಕಾರಗಳ ವಿರುದ್ಧ ಜಾತಿ ನಿಂದನೆ, ಲೈಂಗಿಕ ಕಿರುಕುಳ-2ಪ್ರತ್ಯೇಕ ಪ್ರಕಣಗಳು ದಾಖಲು
ಯಾದಗಿರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಇಬ್ಬರು ಪ್ರಮುಖ ಅಧಿಕಾರಿಗಳ ವಿರುದ್ಧ ವಿಭಾಗದ ಸಿಬ್ಬಂದಿಗಳೇ ಪ್ರತ್ಯೇಕವಾಗಿ ದೂರು ನೀಡಿದ್ದು, ವಾರದೊಳಗೆ ಅಧಿಕಾರಿಗಳ ಮೇಲೆ ಪ್ರತ್ಯೇಕ ಎರಡು...
KSRTC: 2006ರಲ್ಲಿ ಡ್ಯೂಟಿಗೆ ಸೇರಿ ಹಲವರು ನಿವೃತ್ತರಾಗುತ್ತಿದ್ದಾರೆ- ಅಚ್ಚರಿ ಎಂದರೆ ಬೇಸಿಕ್ ಪೇ 27 ಸಾವಿರ ದಾಟಲೇ ಇಲ್ಲಆದರೆ..!
ಸರ್ಕಾರಿ ಡಿ ಗ್ರೂಪ್ ನೌಕರರ ಮೂಲ ವೇತನ ಸೇರಿದ ಕೂಡಲೇ 27 ಸಾವಿರ ಬೇಸಿಕ್ ಪೇ ನಮ್ಮ ಈ ದುರಂತ ಕತೆಗೆ ನಾಯಕರು ಯಾರು? ಜಂಟಿ ಸಂಘಟನೆಗಳ...
ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿಕೆಶಿ ಅವರೇ: ಕೇಂದ್ರ ಸಚಿವ ಎಚ್ಡಿಕೆ ಪ್ರಶ್ನೆ
ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ...