KSRTC ಸೇವೆ- ನಿರ್ವಹಣೆಗೆ ಮಾರುಹೋದ ಯುಪಿ ಸರ್ಕಾರ, ಅಧಿಕಾರಿಗಳ ತಂಡ ಕಳುಹಿಸಿ ಇನ್ನಷ್ಟು ಮಾಹಿತಿ ಸಂಗ್ರಹ
ಬೆಂಗಳೂರು: ಎಲ್ಲೆಡೆ ಯುಪಿ ಮಾಡೆಲ್ ಎನ್ನುವ ಚರ್ಚೆಯ ನಡುವೆ ಯುಪಿಯಲ್ಲೇ ಕರ್ನಾಟಕ ಮಾಡೆಲ್ನ ಚಿಂತನೆ ನಡೆದಿದ್ದು ಕುತೂಹಲಮೂಡಿಸಿದೆ. ಇದಕ್ಕೆ ತಾಜಾ ನಿದರ್ಶನ ಎಂಬಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಉಪಕ್ರಮಗಳಿಗೆ ಉತ್ತರ ಪ್ರದೇಶ ಸರ್ಕಾರ ಫಿದಾ ಆಗಿದ್ದು, ಸಾಮಾನ್ಯ ಸಾರಿಗೆ ಹಾಗೂ ಪ್ರೀಮಿಯಂ ಸೇವೆಗಳೆರಡರ ನಿರ್ವಹಣೆಗೂ ಮಾರುಹೋಗಿದ್ದು ಯುಪಿ ಸರ್ಕಾರದ ಅಧಿಕಾರಿಗಳ ನಿಯೋಗವೇ KSRTC ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ.
ಹೌದು! ನಿನ್ನೆ ಉತ್ತರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಗಳ ತಂಡದ ಯುಪಿಆರ್ಟಿಸಿ ನಿಯೋಗ KSRTC ಕೇಂದ್ರ ಕಚೇರಿಗೆ ಭೇಟಿ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸೇವೆ ನಿರ್ವಾಹಣೆ ಬಗ್ಗೆ ಮಾಹಿತಿ ಸಂಗ್ರಹಿಸಿದೆ.
ಮುಖ್ಯ ಮಂತ್ರಿ ಯೋಗಿಆದಿತ್ಯ ನಾಥ್ ಅವರ ಸಲಹೆಗಾರ ಡಾ.ಕೆ.ವಿ.ರಾಜು, ಯುಪಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್. ವೆಂಕಟೇಶ್ವರಲು ಹಾಗೂ ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಂ.ಕೆ.ಷಣ್ಮುಗ ಸುಂದರಂ ಸೇರಿದಂತೆ ಅಧಿಕಾರಿಗಳ ತಂಡವು ಶಾಂತಿನಗರದಲ್ಲಿರುವ ನಿಗಮದ ಕೇಂದ್ರ ಕಚೇರಿಗೆ ಭೇಟಿ ನೀಡಿ ನಿಗಮದಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರ ಪಡೆದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಯುಪಿ ನಿಯೋಗಕ್ಕೆ ಅಗತ್ಯ ಮಾಹಿತಿ ಒದಗಿಸಿದರು. ನಂತರ ತಂಡ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4ಕ್ಕೆ ಭೇಟಿ ನೀಡಿ, ನಿಗಮದ ಪ್ರತಿಷ್ಟಿತ ವಾಹನಗಳಾದ ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ ವಾಹನಗಳ ಕಾರ್ಯಾಚರಣೆ, ತಾಂತ್ರಿಕ ನಿರ್ವಹಣೆಯ ಬಗ್ಗೆ ಮಾಹಿತಿ ಹಾಗೂ ಎಲೆಕ್ಟ್ರಿಕ್ ಬಸ್ಗಳ ಘಟಕ ಮತ್ತು ಚಾರ್ಜಿಂಗ್ ಸ್ಟೇಷನ್ಗೆ ಭೇಟಿ ಕೊಟ್ಟಿತು. ಪ್ರೀಮಿಯಂ ಸೇವೆಗಳ ಉಪಕ್ರಮಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಮೆಚ್ಚುಗೆ ವ್ಯಕ್ತಪಡಿಸಿತು.
ಈ ಹಿಂದೆ KSRTC ಕೇಂದ್ರ ಕಚೇರಿಗೆ ಭೇಟಿ ನೀಡದ ಯುಪಿ ಅಧಿಕಾರಿಗಳ ನಿಯೋಗ ಸಚಿವ ರಾಮಲಿಂಗಾರೆಡ್ಡಿ ಜತೆ ಸಮಾಲೋಚನೆ ನಡೆಸಿ ಗ್ರಾಮೀಣ ಸಾರಿಗೆ, ನಗರ ಸಾರಿಗೆ, ವೇಗದೂತ, ರಾಜಹಂಸ, ಹವಾನಿಯಂತ್ರಣ ರಹಿತ ಸ್ಲೀಪರ್, ಎಸಿ ಸ್ಲೀಪರ್, ವೋಲ್ವೋ, ಮಲ್ಟಿ ಆಕ್ಸಲ್ ವೋಲ್ವೋ, ಮಲ್ಟಿ ಆ್ಯಕ್ಸಲ್ ಸ್ಲೀಪರ್ಜತೆಗೆ ಅಂತರ್ಜಿಲ್ಲೆಗಳಿಗೆ ಎಸಿ ವಿದ್ಯುತ್ ಚಾಲಿತ ಬಸ್ಗಳನ್ನು ಕಾರ್ಯಾಚರಿಸುತ್ತಿರುವ ವಿವರ ಪಡೆದುಕೊಂಡಿತು.
ಇನ್ನು ಈ ಎಲ್ಲ ವಿವರಗಳ ವರದಿ ಮೆಚ್ಚಿರುವ ಉತ್ತರಪ್ರದೇಶ ಸಾರಿಗೆ ಇಲಾಖೆ KSRTC ಉಪಕ್ರಮಗಳ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮಾಹಿತಿ ನೀಡಿತ್ತು . ಆ ವರದಿ ಹಿನ್ನೆಲೆಯಲ್ಲಿ ಖುದ್ದು ತಮ್ಮ ಸಲಹೆಗಾರರ ನೇತೃತ್ವದ ತಂಡವನ್ನೇ ಕರ್ನಾಟಕಕ್ಕೆ ಕಳಿಸಿಕೊಟ್ಟಿರುವ ಯೋಗಿ, KSRTC ಉಪಕ್ರಮಗಳ ಬಗ್ಗೆ ಮತ್ತಷ್ಟು ವಿವರ ಪಡೆದುಕೊಂಡು ಬರುವಂತೆ ಸೂಚಿಸಿದ್ದಾರೆ. ಅದರಂತೆ ಅಧಿಕಾರಗಳ ತಂಡ ಬಂದು ಹೋದ 10 ದಿನದಲ್ಲೇ ಸಿಎಂ ಸಲಹೆಗಾರರ ನಿಯೋಗ ರಾಜ್ಯಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದೆ.
Related

You Might Also Like
ಕರ್ತವ್ಯ ಲೋಪವೆಸಗಿದ ಮೂವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ
ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿ ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್...
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಬಸವರಾಜು
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ...
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...