CRIMENEWSನಮ್ಮರಾಜ್ಯ

ನಿವೃತ್ತ ಡಿಜಿಪಿ ಮತ್ತು ಐಜಿ ಓಂ ಪ್ರಕಾಶ್ ಹತ್ಯೆ: ಪತ್ನಿಯೇ ಕೊಂದಿರುವ ಶಂಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ 38ನೇ ಡಿಜಿಪಿ ಮತ್ತು ಐಜಿ ಓಂ ಪ್ರಕಾಶ್ ಅವರ ಹತ್ಯೆ ಇಂದು ನಡೆದಿದ್ದು, ಈ ನಿವೃತ್ತ ಐಪಿಎಸ್ ಅಧಿಕಾರಿ ಅವರ ಪತ್ನಿಯಿಂದಲೇ ಕೊಲೆಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ನಿವೃತ್ತ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಅವರು 10 ದಿನಗಳ ಹಿಂದೆ ಪತ್ನಿ ಪಲ್ಲವಿ ಜೊತೆ ಜಗಳವಾಡಿಕೊಂಡಿದ್ದರು, ಹೀಗಾಗಿ ಕೌಟುಂಬಿಕ ಕಲಹದಿಂದಾಗಿ ಈ ಕೊಲೆ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಚಾಕುವಿನಿಂದ ಇರಿದು ಕೊಲೆ ಮಾಡಿರಬಹುದು ಎಂದು ಹೇಳಲಾಗುತ್ತಿದ್ದು, ಒಂದು ವಾರದ ಹಿಂದೆ ಪಲ್ಲವಿ ಐಪಿಎಸ್ ಅಧಿಕಾರಿಗಳಿಗೆ ಸಂದೇಶ ಕಳುಹಿಸಿದ್ದರು. ತನ್ನ ಪತಿ ತನ್ನನ್ನು ಮತ್ತು ಮಗಳನ್ನು ತುಂಬಾ ಹಿಂಸಿಸುತ್ತಿದ್ದಾರೆ. ಇವರು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸುತ್ತಿದ್ದು, ಓಂ ಪ್ರಕಾಶ್ ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಮನವಿ ಮಾಡಿದ್ದರು.

ಅಲ್ಲದೆ ಓಂ ಪ್ರಕಾಶ್ಅವರು ಮನೆಯಲ್ಲಿ ಬಂದೂಕನ್ನು ಹಿಡಿದುಕೊಂಡು ಓಡಾಡುತ್ತಿದ್ದಾರೆ. ಅವರು ಯಾವುದೇ ಕ್ಷಣದಲ್ಲಾದರೂ ನಮ್ಮನ್ನು ಕೊಲ್ಲಬಹುದು. ಆದ್ದರಿಂದ, ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಪಲ್ಲವಿ ವಿನಂತಿಸಿದ್ದರು.

ಈ ಎಲ್ಲ ಬೆಳವಣಿಗೆಯ ನಡುವೆ ಇಂದು ಓಂ ಪ್ರಕಾಶ್ ಅವರ ಹತ್ಯೆಯಾಗಿದ್ದು, ಆ ಬಳಿಕ ಪೊಲೀಸರು ಅವರ ಪತ್ನಿ ಪಲ್ಲವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ