KSRTC: ಹೆಂಡತಿ ತಂದೆ ನಿಧನರಾಗಿದ್ದಾರೆ ರಜೆ ಕೊಡಿ ಎಂದರೆ ಆಗಲ್ಲ ಡ್ಯೂಟಿಗ್ಹೋಗು ಎಂದ ಡಿಎಂ- ಎಲ್ಲಿದೆ ಮಾನವೀಯತೆ!

ಕನಕಪುರ: ತನ್ನ ಪತ್ನಿಯ ತಂದೆ ಅಂದರೆ ಹೆಣ್ಣುಕೊಟ್ಟ ಮಾವ ನಿಧನರಾಗಿದ್ದಾರೆ ಎಂಬ ವಿಷಯ ತಿಳಿದ ಚಾಲನಾ ಸಿಬ್ಬಂದಿಯೊಬ್ಬರು ಅಂತಿಮ ದರ್ಶನಕ್ಕೆ ಹೋಗಬೇಕು ರಜೆ ಕೊಡಿ ಎಂದರೆ ಕೆಎಸ್ಆರ್ಟಿಸಿ ಕನಕಪುರ ಘಟಕದ ಪ್ರಭಾರ ಘಟಕ ವ್ಯವಸ್ಥಾಪಕ ರಜೆ ಕೊಡದೆ ದೌರ್ಜನ್ಯದಿಂದ ನಡೆದುಕೊಂಡಿರುವ ಘಟನೆ ನಡೆದಿದೆ.
ಸ್ವಂತ ಹೆಂಡತಿಯ ಅಪ್ಪ ನಿಧನರಾಗಿದ್ದಾರೆ ಅವರ ಅಂತಿಮ ದರ್ಶನಕ್ಕೆ ಹೋಗಬೇಕು ಎಂದರೂ ಇಲ್ಲ ನೀನು ಡ್ಯೂಟಿಗೆ ಹೋಗು ಎಂದು ಹೇಳುತ್ತಾರೆ ಎಂದರೆ ಇವರನ್ನು ಮನುಷ್ಯರು ಅನ್ನಬೇಕೋ ಅಥವಾ ಇನ್ನೇನು ಅಂತ ತಿಳಿದುಕೊಳ್ಳಬೇಕೊ ಹೇಳಿ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ವಿಭಾಗ ಕನಕಪುರ ಘಟಕದ ಪ್ರಭಾರ ಘಟಕ ವ್ಯವಸ್ಥಾಪಕ ನರಸಿಂಹರಾಜು ಎಂಬುವವರೇ ಈ ದರ್ಪ ಹಾಗೂ ದೌರ್ಜನ್ಯವನ್ನು ಘಟಕದಲ್ಲಿ ನಿರ್ವಾಹಕರಾಗಿರುವ ಉತ್ತರ ಕರ್ನಾಟಕ ಭಾಗದ ಕಂಡಕ್ಟರ್ ಒಬ್ಬರ ಮೇಲೆ ಎಸಗಿರುವವರು.
ಕಂಡಕ್ಟರ್ ಏ.17 ರಂದು ಕರ್ತವ್ಯ ನಿರತರಾಗಿದ್ದ ವೇಳೆ ಮಧ್ಯಾಹ್ನ ಸುಮಾರು 3 ಗಂಟೆ ಸಮಯದಲ್ಲಿ ತನ್ನ ಹೆಂಡತಿಯ ತಂದೆ ನಿಧನರಾಗಿದ್ದಾರೆ ಎಂಬ ಸುದ್ದಿ ಬರುತ್ತದೆ. ಆ ಬಳಿಕ ಅವರು ಹೆಂಡತಿಯ ಮೂಲಕ ಅದನ್ನು ಖಚಿತಪಡಿಸಿಕೊಳ್ಳುತ್ತಾರೆ. ತದನಂತರ ನಿರ್ವಾಹಕರು ಪ್ರಭಾರ ಘಟಕ ವ್ಯವಸ್ಥಾಪಕ ನರಸಿಂಹರಾಜು ಅವರಿಗೆ ಕರೆ ಮಾಡುತ್ತಾರೆ. ಆದರೆ, ಆ ಕರೆಯನ್ನು ಅವರು ಸ್ವೀಕರಿಸುವುದಿಲ್ಲ. ಹಾಗಾಗಿ ನಿರ್ವಾಹಕರು ಮೂಲತಃ ಉತ್ತರ ಕರ್ನಾಟಕದವರಾಗಿದ್ದರಿಂದ ಅವರು ತನ್ನ ಮಾವನ ಅಂತಿಮ ದರ್ಶನಕ್ಕೆ ಬೇಗನೇ ಹೊರಡಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿತ್ತು.
ಆ ಪರಿಸ್ಥಿತಿ ಎದುರಾಗಿದ್ದರಿಂದ ಅವರು ರಾತ್ರಿಪಾಳಿಯ ವಾಹನವನ್ನು ರಾತ್ರಿ ಘಟಕಕ್ಕೆ ತೆಗೆದುಕೊಂಡು ಬಂದಿದ್ದಾರೆ. ಇತ್ತ ಮಾನವೀಯತೆ ದೃಷ್ಟಿಯಿಂದ ಹೇಳುವುದಾದರೆ ಘಟಕ ವ್ಯವಸ್ಥಾಪಕರು ಪರ್ಯಾಯ ನಿರ್ವಾಹಕರನ್ನು ಆ ಮಾರ್ಗಕ್ಕೆ ನಿಯೋಜಿಸಿ, ಈ ನಿರ್ವಾಹಕರನ್ನು ಅವರ ಮಾವನ ಅಂತ್ಯಕ್ರಿಯೆಗೆ ಕಳುಹಿಸಬೇಕಾಗಿತ್ತು. ಇದು ಅವರ ಕರ್ತವ್ಯ ಕೂಡ ಆಗಿತ್ತು.
ಆದರೆ ಡಿಎಂ ಅವರು ದರ್ಪ ದೌರ್ಜನ್ಯದಿಂದ ಆತನನ್ನು ಪ್ರಾಣಿಯ ರೀತಿಯಲ್ಲಿ ನಡೆಸಿಕೊಂಡು ಈ ಕತೆಯಲ್ಲ ಹೇಳಬೇಡ ಮೊದಲು ಗಾಡಿ ತೆಗೆದುಕೊಂಡು ಜಾಗಖಾಲಿ ಮಾಡು ಎಂದು ದರ್ಪದಿಂದ ನಡೆದುಕೊಂಡಿದ್ದಾರೆ.
ಆದರೂ ಮಾವನ ಅಂತಿಮ ದರ್ಶನಕ್ಕೆ ಹೋಗಲೇ ಬೇಕು ನನಗೆ ರಜೆ ಕೊಡಿ ಎಂದು ನಿರ್ವಾಹಕ ಹಠ ಮಾಡಿಕೊಂಡು ಹೋಗಿದ್ದಾರೆ ಎಂದು ಘಟಕದ ಸಿಬ್ಬಂದಿಯೊಬ್ಬರು ವಿಜಯಪಥಕ್ಕೆ ತಿಳಿಸಿದ್ದಾರೆ. ಅಲ್ಲದೆ ನಿರ್ವಾಹಕನೊಂದಿಗೆ ಡಿಎಂ ನಡೆದುಕೊಂಡಿರುವುದನ್ನು ವಿಡಿಯೋ ಮಾಡಿ ಕಳಿಸಿದ್ದಾರೆ.
ದೌರ್ಜನ್ಯ ಇದೇನು ಮೊದಲೇನಲ್ಲ: ಪ್ರಭಾರ ಘಟಕ ವ್ಯವಸ್ಥಾಪಕರ ಈ ದರ್ಪ ದೌರ್ಜನ್ಯ ಇದೇನು ಮೊದಲೇನಲ್ಲ ಈ ಹಿಂದೆ ಈ ರೀತಿಯ ಹಲವಾರು ಪ್ರಕರಣಗಳು ಇವರ ವಿರುದ್ಧ ದಾಖಲಾಗಿವೆ ಆದರೂ ಸಹ ಮೇಲಧಿಕಾರಿಗಳು ಇವರ ಮೇಲೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ಇವರನ್ನು ವರ್ಗಾವಣೆ ಸಹ ಮಾಡದೆ ಇರುವುದನ್ನು ನೋಡಿದರೆ ಇದರಲ್ಲಿ ಮೇಲಧಿಕಾರಿಗಳ ಪಾತ್ರವೂ ಎದ್ದು ಕಾಣುತ್ತದೆ.
ಹಾಗಾದರೆ ನೌಕರರು ನ್ಯಾಯವನ್ನು ಕೇಳಲು ಯಾರ ಬಳಿ ಹೋಗಬೇಕು. ಸಂಬಂಧಿಕರು ಸತ್ತರು ಕೂಡ ಅವರ ಅಂತಿಮ ದರ್ಶಕ್ಕೆ ಹೋಗಲಾರದ ಪರಿಸ್ಥಿತಿಯಲ್ಲಿ ನಾವು ಡ್ಯೂಟಿ ಮಾಡಬೇಕು ಎಂದರೆ ನಾವು ದುಡಿಯುತ್ತಿರುವುದು ಏತಕ್ಕಾಗಿ, ನಮ್ಮವರು ತಮ್ಮವರು ಎಂಬುದಕ್ಕೆ ಇಲ್ಲಿ ಜಾಗವಿಲ್ಲ ಎಂದರೆ ನಾವು ಪ್ರಾಣಿಗಳ? ಪ್ರಾಣಿಗಳಿಗೂ ಸಾವು ನೋವಿನ ಮಿಡಿತವಿರುತ್ತದೆ. ಆದರೆ ನಮ್ಮ ಸಂಸ್ಥೆಯಲ್ಲಿರುವ ಬಹುತೇಕ ಅಧಿಕಾರಿಗಳಿಗೆ ಇದು ಇಲ್ಲದಿರುವುದು ಭಾರಿ ನೋವಿನ ಸಂಗತಿ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Related

You Might Also Like
KSRTC ಬಡ ಸಾರಿಗೆ ನೌಕರರ ಮೇಲೆ ಎಸ್ಮಾ ಜಾರಿ ಸಲ್ಲ: ಸಾರಿಗೆ ಸಚಿವರು ಪರಿಶೀಲಿಸಿ- ಅಧಿವೇಶನದಲ್ಲಿ ಶಾಸಕರ ಆಗ್ರಹ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಿಂದ ಕರ್ನಾಟಕ ರಾಜ್ಯ ಅತ್ಯವಶ್ಯಕ ಸೇವೆ ವಿಧೇಯಕವನ್ನು ಮಂಡಿಸುವ ಸಂದರ್ಭದಲ್ಲಿ ರಾಜ್ಯದ ಸಾರಿಗೆ ನೌಕರರ ಮೇಲೆ ಎಸ್ಮಾ ಕಾಯಿದೆಯನ್ನು ಜಾರಿ ಮಾಡುತ್ತಿರುವ ಬಗ್ಗೆ...
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...