CrimeNEWSದೇಶ-ವಿದೇಶ

ಬೆಳ್ಳಂಬೆಳಗ್ಗೆ ಸಚಿವ ಬಂಧಿಸಿದ ಇಡಿ: ಆಂಬುಲೆನ್ಸ್‌ನಲ್ಲಿ ಅಳುತ್ತ ಆಸ್ಪತ್ರೆಗೆ ಹೋದ ಮಂತ್ರಿ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದ ಮೇರೆಗೆ ತಮಿಳುನಾಡು ರಾಜ್ಯದ ಸಚಿವ ಹಾಗೂ ಡಿಎಂಕೆ ನಾಯಕ ವಿ. ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿ ಬುಧವಾರ ಬೆಳಗ್ಗೆ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಚಿವರು ಕಣ್ಣೀರು ಹಾಕಿದ್ದಾರೆ.

ಇಡಿ ಅಧಿಕಾರಿಗಳು ಮಂಗಳವಾರ ಬಾಲಾಜಿ ಅವರ ಮನೆಯ ಮೇಲೆ ದಾಳಿ ನಡೆಸಿದ್ದರು. ಕೆಲ ಗಂಟೆಗಳ ವಿಚಾರಣೆ ಬಳಿಕ ವಾಪಸ್‌ಆಗಿದ್ದ ಅಧಿಕಾರಿಗಳು ಇಂದು ಬೆಳಗ್ಗೆ ಸಚಿವರನ್ನು ಬಂಧಿಸಿ ವಿಚಾರಣೆಗಾಗಿ ಕರೆದೊಯ್ಯುವ ಮೊದಲು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಬಂಧನದ ನಂತರ ತನಿಖಾ ಸಂಸ್ಥೆ ಬಾಲಾಜಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಂತೆ, ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ನಾಟಕೀಯ ಬೆಳವಣಿಗೆ ನಡೆಯಿತು. ಹೊರಗೆ ಅವರ ಬೆಂಬಲಿಗರು ಜಾರಿ ನಿರ್ದೇಶನಾಲಯದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾಗ ಡಿಎಂಕೆ ನಾಯಕ ಆಂಬುಲೆನ್ಸ್‌ನಲ್ಲಿ ಅಳುತ್ತಿರುವುದು ಕಂಡುಬಂದಿದೆ.

ಅಳುತ್ತಲೇ ಇದ್ದ ಸಚಿವರನ್ನು ಆಂಬುಲೆನ್ಸ್‌ನಿಂದ ಹೊರಗೆ ಕರೆಯಲಾಗಿದೆ. ಬಾಲಾಜಿ ಅವರನ್ನು ಆಸ್ಪತ್ರೆಯ ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಡಿಎಂಕೆ ಸಂಸದ ಮತ್ತು ವಕೀಲ ಎನ್‌.ಆರ್. ಎಲಾಂಗೋ ಹೇಳಿದ್ದಾರೆ. ಇಡಿ ಅವರನ್ನು ಬಂಧಿಸಿದ್ದರೆ ಯಾವುದೇ ಸ್ಪಷ್ಟತೆ ಇಲ್ಲ, ಯಾವುದೇ ಬಂಧನ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಅವರನ್ನು ಐಸಿಯುಗೆ ಸ್ಥಳಾಂತರಿಸಿದಾಗ ನಾನು ಅವರನ್ನು (ಬಾಲಾಜಿ) ನೋಡಿದೆ. ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಪರಿಶೀಲನೆ ಮಾಡುತ್ತಿದ್ದಾರೆ. ಅವರನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ನಮಗೆ (ಇಡಿಯಿಂದ) ತಿಳಿಸಲಾಗಿಲ್ಲ ಎಂದು ಎಲಾಂಗೊ ಹೇಳಿದ್ದಾರೆ.

ಸೆಂಥಿಲ್ ಬಾಲಾಜಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಮಿಳುನಾಡು ಕ್ರೀಡಾ ಸಚಿವ ಹಾಗೂ ಡಿಎಂಕೆ ಯುವ ವಿಭಾಗದ ಮುಖ್ಯಸ್ಥ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಇದನ್ನು ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ, ಬಿಜೆಪಿಯ ಬೆದರಿಕೆಗೆ ಡಿಎಂಕೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ