CrimeNEWSನಮ್ಮರಾಜ್ಯಬೆಂಗಳೂರು

ವಿಜಯಪಥ ಸಂಪಾದಕರ ವಿರುದ್ಧ ಬಿಎಂಟಿಸಿ ಜಯನಗರ ಡಿಪೋ ವ್ಯವಸ್ಥಾಪಕ ಪ್ರಶಾಂತ್‌ ದಾಖಲಿಸಿದ್ದ ಪ್ರಕರಣಕ್ಕೆ ಹೈ ಕೋರ್ಟ್‌ತಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು 2021ರ ಏಪ್ರಿಲ್‌7ರಿಂದ ಸುಮಾರು 14 ದಿನಗಳವರೆಗೂ ನಡೆಸಿದ ಮುಷ್ಕರದ ವೇಳೆ ವಿಜಯಪಥ ಮುಖ್ಯ ಸಂಪಾದಕರ ವಿರುದ್ಧ ದಾಖಲಿಸಿದ್ದ ಪ್ರಕರಣವೊಂದಕ್ಕೆ ಕರ್ನಾಟಕ ಹೈ ಕೋರ್ಟ್‌ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಈ ಮೂಲಕ ಸುಖ ಸುಮ್ಮನೇ ಆರೋಪ ಮಾಡಿ ಅಂದು ಬಿಎಂಟಿಸಿ ಜಯನಗರದ 4ನೇ ಘಟಕದ ವ್ಯವಸ್ಥಾಪಕ ಪ್ರಶಾಂತ್‌, ಘಟಕದ ನಿರ್ವಾಹಕ ಎಸ್‌.ಜೆ. ಮೇಟಿಯನ್ನು ವಿಜಯಪಥ ಸಂಪಾದಕರು ಡ್ಯೂಟಿ ಮಾಡುತ್ತಿದ್ದಾಗ ಅವರನ್ನು ತಡೆದು ಡ್ಯೂಟಿ ಮಾಡದಂತೆ ಬೆದರಿಕೆ ಹಾಕಿದ್ದರು ಎಂದು ಸುಳ್ಳು ದೂರು ನೀಡಿದ್ದರು.

ಆ ಬಗ್ಗೆ ಸರಿಯಾಗಿ ವಿಚಾರಣೆ ಮಾಡದ ತಿಲಕ್‌ನಗರ ಪೊಲೀಸ್‌ಠಾಣೆ ಐಒ ವಿಜಯಪಥ ಸಂಪಾದಕರ ಫೋನ್‌ನಂಬರ್‌ಮಾಹಿತಿಯನ್ನು ಏರ್‌ಟೆಲ್‌ಕಚೇರಿಯಿಂದ ಪಡೆದು ಅದರಲ್ಲಿ ಅಂದು ಯಾರ ಜತೆ ಮಾತನಾಡಿದ್ದಾರೆ ಎಂಬುದನ್ನು ಪರಿಶೀಲಿಸಿದ್ದಾರೆ. ಆ ವೇಳೆ ಪ್ರಶಾಂತ್‌ಮತ್ತು ಎಸ್‌.ಜೆ. ಮೇಟಿ ಅವರ ಜತೆ ಯಾವುದೇ ಸಂಭಾಷಣೆ ನಡೆಸಿರುವುದು ಕಂಡು ಬರದಿದ್ದರು ಡ್ಯೂಟಿ ಮಾಡುವುದಕ್ಕೆ ಅಡ್ಡಿ ಪಡಿಸಿದರು ಎಂಬ ದೂರಿನ ಆಧಾರದ ಮೇರೆಗೆ ಎಫ್‌ಐಆರ್‌ದಾಖಲಿಸಿಕೊಂಡು ಬಳಿಕ ಚಾರ್ಜ್‌ಶೀಟ್‌ಕೂಡ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇದರ ವಿರುದ್ಧ ಹೈ ಕೋರ್ಟ್‌ಮೆಟ್ಟಿಲೇರಿದ ವಿಜಯಪಥ ಸಂಪಾದಕರ ಪರವಾಗಿ ಸುಪ್ರೀಂ ಕೋರ್ಟ್‌ಮತ್ತು ಹೈ ಕೋರ್ಟ್‌ವಕೀಲರಾದ ಎಚ್.ಬಿ.ಶಿವರಾಜು ಅವರು ವಕಾಲತು ವಹಿಸಿ ವಾದ ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿ ಹೈಕೋರ್ಟ್‌ಏಕಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರು ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ.

ಇನ್ನು ಪ್ರಕರಣದಲ್ಲಿ ಯಾವುದೇ ಸತ್ಯಾಸತ್ಯತೆ ಮೇಲ್ನೋಟಕ್ಕೆ ಕಂಡು ಬರದ ಹಿನ್ನೆಲೆಯಲ್ಲಿ ಹಾಗೂ ದೂರು ದಾಖಲಿಸಿರುವುದು ಸುಳ್ಳು ಎಂಬುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ.

ಇನ್ನು ತಿಲಕನಗರ ಪೊಲೀಸರು ಚಾರ್ಜ್‌ಶೀಟ್‌ಸಲ್ಲಿಸುವ ಮುನ್ನ ಎಸ್‌.ಜೆ.ಮೇಟಿ ಎಂಬ ನಿರ್ವಾಹಕ ಡ್ಯೂಟಿ ಮಾಡಿದ್ದಾನೆ ಎಂದು ತೋರಿಸಿದ್ದಾರೆ. ಆದರೆ, ನಿಜ ಹೇಳಬೇಕು ಎಂದರೆ ಆತ ಅಂದು ಚಾರ್ಜ್‌ಶೀಟ್‌ನಲ್ಲಿ ತೋರಿಸಿರುವುದನ್ನು ಗಮನಿಸಿದರೆ ದೂರು ದಾಖಲಿಸುವುದಕ್ಕೆ ಸೃಷ್ಟಿಸಿರುವ ಟ್ರಿಪ್‌ಶೀಟ್‌ನಂತೆ ಕಂಡು ಬಂದಿದೆ.

ಎಸ್‌.ಜೆ.ಮೇಟಿ ಅಂದು ಡ್ಯೂಟಿ ಮಾಡಿದ್ದರೆ ಡಿಪೋನಿಂದ ಎಷ್ಟು ಗಂಟೆಗೆ ಬಸ್‌ಔಟ್‌ಮಾಡಿದರು ಎಷ್ಟು ಗಂಟೆಗೆ ಇನ್‌ಮಾಡಿದರು ಎಂಬುದನ್ನು ಸರಿಯಾಗಿ ತೋರಿಸಿಲ್ಲ. ಜತೆಗೆ ಅಂದು ಇವರು ಮಾಡಿರುವ ಡ್ಯೂಟಿ ರೂಟ್‌ಮೇಲೆ ಕನಿಷ್ಠ ಎಂದರೂ 8-10 ಟ್ರಿಪ್‌ಕಾರ್ಯಾಚರಣೆ ಮಾಡಬೇಕು. ಆದರೆ ಆತ ಮಾಡಿರುವುದು ಕೇವಲ 4 ಟ್ರಿಪ್‌ಮಾತ್ರ ಅಂದರೆ ಮಧ್ಯಾಹ್ನ 2 ಗಂಟೆಗೆ ಡ್ಯೂಟಿಗೆ ಬಂದರೂ 8ಗಂಟೆವರೆಗೇ ಡ್ಯೂಟಿ ಎಂದರೂ ಆತ ರಾತ್ರಿ 10 ಗಂಟೆವರೆಗೆ ಡ್ಯೂಟಿ ಮಾಡಿದ ಬಳಿಕ ಡಿಪೋಗೆ ಬರಬೇಕಿತ್ತು. ಆದರೆ ಆತನ 9 ಗಂಟೆಗೆ ಡಿಪೋನಲ್ಲಿ ಇದ್ದನು ಎಂದು ಚಾರ್ಜ್‌ಶೀಟ್‌ನಲ್ಲಿ ತೋರಿಸಲಾಗಿದೆ.

ಇನ್ನು ವಿಜಯಪಥ ಸಂಪಾದಕರ ಫೋನ್‌ನಂಬರ್‌ಮಾತ್ರ ಚಾರ್ಜ್‌ಶೀಟ್‌ನಲ್ಲಿ ಹಾಕಿದ್ದು ದೂರುದಾರ ಘಟಕ ವ್ಯವಸ್ಥಾಪಕ ಅವರ ಜತೆ ಮಾತನಾಡಿರುವುದನ್ನಾಗಲಿ ಇಲ್ಲ ನಿರ್ವಾಹಕ ಎಸ್‌.ಜೆ. ಮೇಟಿಯ ಜತೆ ಸಂಭಾಷಣೆ ನಡೆಸಿರುವ ಬಗ್ಗೆ ಆತನ ಫೋನ್‌ನಂಬರ್‌ರನ್ನಾಗಲಿ ಚಾರ್ಜ್‌ಶೀಟ್‌ನಲ್ಲಿ ತೋರಿಸಿಲ್ಲ. ಆದರೂ ಚಾರ್ಜ್‌ಶೀಟ್‌ನಲ್ಲಿ ವಿಜಯಪಥ ಸಂಪಾದಕರ ಫೋನ್‌ನಂಬರ್‌ಅನ್ನು ಪದೇ ಪದೆ ತೋರಿಸಿದ್ದಾರೆ.

ಈ ಎಲ್ಲವನ್ನು ಗಮನಿಸಿದರೆ ಇದು ಉದ್ದೇಶ ಪೂರ್ವಕವಾಗಿ ದಾಖಲಿಸಿರುವ ದೂರು ಎಂಬುವುದು ಗೊತ್ತಾಗಲಿದೆ. ಆದರೂ ತಿಲಕ್‌ನಗರ ಪೊಲೀಸರು ಎಸ್‌.ಜೆ.ಮೇಟಿಯ ಫೋನ್‌ ನಂಬರ್‌ ತೋರಿಸದೆ ಆರೋಪ ಮಾಡಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಈ ಪೊಲೀಸರು ಅರ್ಥ ಮಾಡಿಕೊಳ್ಳಬೇಕು.

ಒಬ್ಬರ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಸಂಬಂಧಪಟ್ಟ ದಾಖಲೆಗಳು ಮತ್ತು ಸಾಕ್ಷಿ, ಘಟನೆ ನಡೆದಿರುವುದು ನಿಜವೆ? ಎಲ್ಲಿ ಅವರು ತೊಂದರೆ ಕೊಟ್ಟರು, ಅದರಿಂದ ಸಾರ್ವಜನಿಕರಿಗೆ ತೊಂದರೆ ಆಗಿದ್ದು ನಿಜವೆ? ಎಂಬ ಬಗ್ಗೆ ತೀವ್ರ ತನಿಖೆ ಮಾಡಬೇಕಿತ್ತು, ಆದರೆ ಅದಾವುದನ್ನು ಮಾಡದೆ ತಿಲಕ್‌ನಗರ ಪೊಲೀಸ್ರು ಚಾರ್ಜ್‌ಶೀಟ್‌ಹಾಕಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು