CRIMENEWSನಮ್ಮಜಿಲ್ಲೆ

ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಸಾರಿಗೆ ಬಸ್: ಪ್ರಯಾಣಿಕರು ಪಾರು

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಚಾಲಕ ನಿಯಂತ್ರಣ ತಪ್ಪಿದ ಸಾರಿಗೆ ಬಸ್​ ಕಂದಕಕ್ಕೆ ಉರುಳಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಇಂದು ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಸೇತುವೆ ಬಳಿ ಈ ದುರ್ಘಟನೆ ಸಂಭವಿಸಿದ್ದು, ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

ಅಥಣಿಯಿಂದ ಜಮಖಂಡಿ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಈ ವೇಳೆ ಬಸ್​ನಲ್ಲಿದ್ದ ಏಳೆಂಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಅಪಘಾತ ಸಂಭವಿಸಿದ್ದನ್ನು ನೋಡಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಬಸ್​ನ ಹಿಂಬದಿಯ ಗಾಜು ಒಡೆದು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದು. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ. ರೋಡ್​ಹಂಪ್‌ ಹತ್ತಿ ಇಳಿಯುವ ವೇಳೆ ಬಸ್ಸಿನ ಪಾಟಾ ಮುರಿದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ರೋಡ್‌ನಲ್ಲಿ ರಸ್ತೆ ಡುಬ್ಬವನ್ನು ಅವೈಜ್ಞಾನಿಕವಾಗಿ ಹಾಕುತ್ತಿರುವುದರಿಂದ ಹಲವು ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಅವೈಜ್ಞಾನಿಕವಾಗಿ ಹಾಕಿರುವ ರಸ್ತೆ ಡುಬ್ಬಗಳನ್ನು ತೆರವುಗೊಳಿಸಿ ವೈಜ್ಞಾನಿಕವಾದ ರಸ್ತೆ ಉಬ್ಬುಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ ಸಾರಿಗೆ ನೌಕರರಿಗೆ ಬಿಡುಗಡೆಯಾಗಿರುವ 450 ಕೋಟಿ ರೂ.ನಲ್ಲಿ KSRTC ನೌಕರರಿಗೆ ಮೇ 11ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ... ಮೇ 20ರ ಪೂರ್ವ ನಿರ್ಧಾರಿತ ಮುಷ್ಕರ ಮಾಡಿ ಪೌರುಷ ತೋರಿಸಿ: ಜಂಟಿ ಸಮಿತಿಗೆ ಒಕ್ಕೂಟದ ಜಯರಾಮ್‌ ರಾಥೋಡ್‌ ಸವಾಲ್‌ KSRTC ನೌಕರರ ಕೂಟ- ಜಂಟಿ ಸಮಿತಿ ಸಭೆ ಸೇರುವ ಬಗ್ಗೆ ಎರಡು ದಿನದಲ್ಲಿ ನಿರ್ಣಯ: ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲದ ಅಡ್ಡಿ: ರಾಜ್ಯಪಾಲರ ಪವರ್ ಏನು, ಸುಪ್ರೀಂಕೋರ್ಟ್ ವಕೀಲರಾದ ಶಿವರಾಜು ಏನು ಹೇಳುತ್ತಾ... ರಾಜೀನಾಮೆ ನೀಡದೇ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ- ಸರ್ಕಾರ ವಜಾಗೊಳಿಸಿದ ರಾಜ್ಯಪಾಲ KSRTC: ನಿವೃತ್ತರಾದ 25ದಿನದೊಳಗೆ ಭವಿಷ್ಯ ನಿಧಿ ಪಾವತಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ವಿಳಂಬದ ಬಡ್ಡಿ ಬರಿಸಬೇಕು- ಪ... ಅನ್ನದಾತರಿಗೆ ಸಾಲ ಕೊಡಲು ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿ ಕೈಬಿಡಬೇಕು: ಆರ್‌ಬಿಐ ಅಧಿಕಾರಿಗಳಿಗೆ ಕುರುಬೂರು ಶಾಂತಕ... ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು