NEWSನಮ್ಮರಾಜ್ಯ

ಕಲಬುರಗಿ ಇಎಸ್ಐಸಿ, ಜಿಮ್ಸ್ ಆಸ್ಪತ್ರೆ‌‌ ಅವರಣದಲ್ಲಿ ಔಷಧ ಸಿಂಪರಣೆ

ಕೊರೊನಾ ಬಗ್ಗೆ ಮುನ್ನೆಚರಿಕೆ ಕ್ರಮ l ವೈರಸ್‌ ನಿಯಂತ್ರಣಕ್ಕೆ ಜಾಗೃತಿ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕೊರೊನಾ ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ  ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಜಿಮ್ಸ್ ಮತ್ತು ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಆಸ್ಪತ್ರೆ ಮತ್ತು ಸುತ್ತಮುತ್ತ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಮಂಗಳವಾರ ಬೆಳಗ್ಗೆ ಡಿಸ್ ಇನ್ಫೆಕ್ಷನ್ ಔಷಧ ಸಿಂಪರಣೆ ಕಾರ್ಯ ನಡೆಯಿತು.

ನೀರು, ಫಿನೈಲ್ ಹಾಗೂ ಡೆಟಾಲ್ ಮಿಶ್ರಣವುಳ್ಳ ಡಿಸ್‍ಇನ್‍ಫೆಕ್ಷನ್ ಔಷಧಿ ಬೆಳಗ್ಗೆ ಸಿಂಪಡಿಸಲಾಯಿತು. ಸಾಯಂಕಾಲ ನೀರು ಮತ್ತು ಬ್ಲೀಚಿಂಗ್ ಪೌಡರ್ ಮಿಶ್ರಣವುಳ್ಳ ಹೈಪೊಫ್ಲೋರೈಡ್ ಸೊಲ್ಯೂಷನ್ ಲಿಕ್ವಿಡ್ ಫಾಗಿಂಗ್ ಸಹ ಮಾಡಲಾಗುತ್ತಿದೆ. ಈ ಅಸ್ಪತ್ರೆಗಳ ಆವರಣದ ಮತ್ತು ಸುತ್ತಮುತ್ತ ಪ್ರತಿ ದಿನವು ಔಷಧ ಸಿಂಪಡಿಸುವ ಕಾರ್ಯ ಮುಂದುವರಿಯಲಿದೆ.

ಕಲಬುರಗಿಯಲ್ಲಿ ಸಂಪೂರ್ಣವಾಗಿ ಕೊರೋನಾವನ್ನು ಹತೋಟಿಯಲ್ಲಿಡಲು ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರ ನಿರ್ದೇಶನದಂತೆ ಈ ರೀತಿಯ ಔಷಧ ಸಿಂಪರಣೆ ಕಾರ್ಯ ಸೋಮವಾರದಿಂದ ಆರಂಭಗೊಂಡಿದೆ.

ಸೋಮವಾರ ನಗರದ ಪ್ರಮುಖ ರಸ್ತೆಗಳಾದ ಹುಮನಾಬಾದ್ ಬೇಸ್ -ಸೂಪರ್ ಮಾರ್ಕೆಟ್-ಜಗತ್ ವೃತ್ತ-ಸರ್ದಾರ ವಲ್ಲಭಭಾಯಿ ಪಟೇಲ್ -ರಾಷ್ಟ್ರಪತಿ ಚೌಕ್-ರಾಮ ಮಂದಿರ-ಹಳೇ ಜೇವರ್ಗಿ ರಸ್ತೆಯಲ್ಲಿ ಔಷಧಿ ಸಿಂಪಡಿಸಲಾಗಿದೆ.

ಮಂಗಳವಾರ ಬೆಳಿಗ್ಗೆ ನಗರದ ಟೌನ್ ಹಾಲ್ ನಿಂದ ಅರ್.ಟಿ.ಓ.ಕ್ರಾಸ್-ಖರ್ಗೆ ಪೆಟ್ರೋಲ್ ಪಂಪ್-ಇ.ಎಸ್.ಐ.ಸಿ. ಮೆಡಿಕಲ್ ಕಾಲೇಜಿನ ವರೆಗೆ ಸಿಂಪಡಿಸಲಾಯಿತು.

ಕಂಟೇನ್ ಮೆಂಟ್ ಝೋನ್ ನಲ್ಲಿ ಇಂದು ಸಿಂಪರಣೆ: ನಗರದಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾದ ವ್ಯಕ್ತಿಗಳ ವಾಸಸ್ಥಾನಗಳಾದ ಕಲಬುರಗಿಯ ವಾರ್ಡ್ ನಂ.14 ಮತ್ತು 30 ರಲ್ಲಿ ಮಂಗಳವಾರ ಔಷಧ ಸಿಂಪರಣೆ ಜೊತೆ ಸ್ಯಾನಿಟೈಸರ್‌ ಔಷಧ ಸಿಂಪರಣೆ‌ ಸಹ ನಡೆಯಲಿದೆ. ಮುಂದಿನ ಒಂದು ತಿಂಗಳು ಕಾಲ ನಗರದೆಲ್ಲೆಡೆ ಈ ರೀತಿಯ ನಿರಂತರ ಔಷಧ ಸಿಂಪರಣೆ ಕಾರ್ಯ ಮುಂದುವರೆಯಲಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ