CRIMENEWSನಮ್ಮಜಿಲ್ಲೆ

KSRTC: ಪ್ರಯಾಣಿಕ ಮಹಿಳೆಯೊಬ್ಬರ ಗುಪ್ತಾಂಗ ಸ್ಪರ್ಶಿಸಿದ ಕಂಡಕ್ಟರ್‌ ಅಮಾನತು- ಸುಮೋಟೊ ಕೇಸ್ ದಾಖಲು

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಗುಪ್ತಾಂಗವನ್ನು ಸ್ಪರ್ಶಿಸಿ ಅಸಭ್ಯವಾಗಿ ನಡೆದುಕೊಂಡಿದ್ದು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ.

KSRTC ಮಂಗಳೂರು ವಿಭಾಗದ 3ನೇ ಘಟಕದ ಉಲ್ಲಾಳ-ಮುಡಿಪು ಮಾರ್ಗದಲ್ಲಿ ಚಲಿಸುತ್ತಿದ್ದಾಗ ಶೀಟ್‌ನಲ್ಲಿ ಕುಳಿತಿದ್ದ ಮಹಿಳೆ ಪಕ್ಕದಲ್ಲಿ ಹೋಗಿ ನಿಂತುಕೊಂಡ ನಿರ್ವಾಹಕ ಪ್ರದೀಪ್ ನಾಯ್ಕರ್ ಎಂಬಾತ ಆಕೆಯ ಎದೆ ಭಾಗವನ್ನು ಸ್ಪರ್ಶಿಸಿದ್ದಾನೆ. ಇನ್ನು ಅದನ್ನು ಗಮನಿಸಿದ ಸಹ ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಇತ್ತ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಪೊಲೀಸರು ನಿರ್ವಾಹಕರನ್ನು ವಶಕ್ಕೆ ಪಡೆದಿದ್ದು, ಸುಮೋಟೊ ಕೇಸ್ ದಾಖಲಿಸಿ FIR ಕೂಡ ಮಾಡಿದ್ದಾರೆ.

ಇನ್ನು ಬೆಂಗಳೂರಿನಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಿಂದ ಈತನ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಡಿಸಿ ನಿರ್ವಾಹಕನ ಅಮಾನತು ಆದೇಶ ಪ್ರಕ್ರಿಯೆ ನಡೆಸಿದ್ದಾರೆ.

ಇತ್ತ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ಮೇಲೆ ಕೈ ಹಾಕುತ್ತಿರುವ ಸರಕಾರಿ ಬಸ್ ಕಂಡಕ್ಟರ್… ಇಂತಹ ಕಾಮುಕ ಕಂಡಕ್ಟರನ್ನು ಕೂಡಲೆ ಕೆಲಸದಿಂದ ಅಮಾನತು ಮಾಡಿ ಕಠಿಣ ಕಾನೂನಿನ ಅಡಿಯಲ್ಲಿ ಬಂಧಿಸಿ… ಇಲ್ಲದಿದ್ದಲ್ಲಿ ಸಾರ್ವಜನಿಕರಿಂದ ಗೂಸ ಬೀಳೋದಂತೂ ಗ್ಯಾರಂಟಿ ಎಂದು ಎಚ್ಚರಿಕೆ ಸಂದೇಶವನ್ನು ನೆಟ್ಟಿಗರು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.

ಅಲ್ಲದೆ ಈತ KSRTC ಮಂಗಳೂರು ವಿಭಾಗದ ಕಂಡಕ್ಟರ್ ಆಗಿರುತ್ತಾನೆ.. ಇವನ ಬಗ್ಗೆ ಹೆಣ್ಣು ಮಕ್ಕಳು ಜಾಗರೂಕರಾಗಿರಿ… ಮಂಗಳೂರಿನ ಪೋಲೀಸ್ ಇಲಾಖೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.

Deva
the authorDeva

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?