KSRTC: ಪ್ರಯಾಣಿಕ ಮಹಿಳೆಯೊಬ್ಬರ ಗುಪ್ತಾಂಗ ಸ್ಪರ್ಶಿಸಿದ ಕಂಡಕ್ಟರ್ ಅಮಾನತು- ಸುಮೋಟೊ ಕೇಸ್ ದಾಖಲು

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಗುಪ್ತಾಂಗವನ್ನು ಸ್ಪರ್ಶಿಸಿ ಅಸಭ್ಯವಾಗಿ ನಡೆದುಕೊಂಡಿದ್ದು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ.
KSRTC ಮಂಗಳೂರು ವಿಭಾಗದ 3ನೇ ಘಟಕದ ಉಲ್ಲಾಳ-ಮುಡಿಪು ಮಾರ್ಗದಲ್ಲಿ ಚಲಿಸುತ್ತಿದ್ದಾಗ ಶೀಟ್ನಲ್ಲಿ ಕುಳಿತಿದ್ದ ಮಹಿಳೆ ಪಕ್ಕದಲ್ಲಿ ಹೋಗಿ ನಿಂತುಕೊಂಡ ನಿರ್ವಾಹಕ ಪ್ರದೀಪ್ ನಾಯ್ಕರ್ ಎಂಬಾತ ಆಕೆಯ ಎದೆ ಭಾಗವನ್ನು ಸ್ಪರ್ಶಿಸಿದ್ದಾನೆ. ಇನ್ನು ಅದನ್ನು ಗಮನಿಸಿದ ಸಹ ಪ್ರಯಾಣಿಕರೊಬ್ಬರು ಮೊಬೈಲ್ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಇತ್ತ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಪೊಲೀಸರು ನಿರ್ವಾಹಕರನ್ನು ವಶಕ್ಕೆ ಪಡೆದಿದ್ದು, ಸುಮೋಟೊ ಕೇಸ್ ದಾಖಲಿಸಿ FIR ಕೂಡ ಮಾಡಿದ್ದಾರೆ.
ಇನ್ನು ಬೆಂಗಳೂರಿನಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಿಂದ ಈತನ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಡಿಸಿ ನಿರ್ವಾಹಕನ ಅಮಾನತು ಆದೇಶ ಪ್ರಕ್ರಿಯೆ ನಡೆಸಿದ್ದಾರೆ.
ಇತ್ತ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ಮೇಲೆ ಕೈ ಹಾಕುತ್ತಿರುವ ಸರಕಾರಿ ಬಸ್ ಕಂಡಕ್ಟರ್… ಇಂತಹ ಕಾಮುಕ ಕಂಡಕ್ಟರನ್ನು ಕೂಡಲೆ ಕೆಲಸದಿಂದ ಅಮಾನತು ಮಾಡಿ ಕಠಿಣ ಕಾನೂನಿನ ಅಡಿಯಲ್ಲಿ ಬಂಧಿಸಿ… ಇಲ್ಲದಿದ್ದಲ್ಲಿ ಸಾರ್ವಜನಿಕರಿಂದ ಗೂಸ ಬೀಳೋದಂತೂ ಗ್ಯಾರಂಟಿ ಎಂದು ಎಚ್ಚರಿಕೆ ಸಂದೇಶವನ್ನು ನೆಟ್ಟಿಗರು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.
ಅಲ್ಲದೆ ಈತ KSRTC ಮಂಗಳೂರು ವಿಭಾಗದ ಕಂಡಕ್ಟರ್ ಆಗಿರುತ್ತಾನೆ.. ಇವನ ಬಗ್ಗೆ ಹೆಣ್ಣು ಮಕ್ಕಳು ಜಾಗರೂಕರಾಗಿರಿ… ಮಂಗಳೂರಿನ ಪೋಲೀಸ್ ಇಲಾಖೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.
Related

You Might Also Like
ಪ್ರಯಾಣಿಕರಿಗೆ ವಿತರಿಸದ ಟಿಕೆಟ್ ಮೌಲ್ಯ ಶೂನ್ಯ: ಆದರೂ ನಿರ್ವಾಹಕರು ದಂಡಕಟ್ಟಬೇಕೆಂಬ ಅಸಂಬದ್ಧ ಸುತ್ತೋಲೆ!!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳ ನಿರ್ವಾಹಕರ ಪಾಲಿಗೆ ಮುಳ್ಳಾಗುವ ಒಂದು ನಿರ್ಧಾರವನ್ನು 2024ರ ಮೇ 3ರಂದು ಅಂದಿನ ಮುಖ್ಯ ಸಂಚಾರಿ ವ್ಯವಸ್ಥಾಪಕರು...
KSRTC: ಪ್ರಯಾಣಿಕ ಟಿಕೆಟ್ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ
2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ...
ವಿಧಾನಸೌಧ ಈಗ ಪ್ರವಾಸಿ ತಾಣ: ಸಾರ್ವಜನಿಕ ವೀಕ್ಷಣೆಗೆ ಮುಕ್ತ- ಯಾರಿಗೆ ಟಿಕೆಟ್ ಮತ್ತ್ಯಾರಿಗೆ ಉಚಿತ!
ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಒಮ್ಮೆಯಾದರೂ ನೋಡಬೇಕು ಎಂದು ರಾಜ್ಯದ ಅದೆಷ್ಟು ಮಂದಿ ಆಸೆಪಡುತ್ತಿದ್ದರು. ಅಲ್ಲಿಗೆ ನಾವು ಹೋಗುವುದು ಹೇಗೆ ಎಂದು ಹಲವರು ಹಳ್ಳಿಗಳ್ಳಲಿ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕೆ...
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...
ನಟ ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್...
NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ...
ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...