NEWSನಮ್ಮಜಿಲ್ಲೆಸಂಸ್ಕೃತಿ

ಹಸಿರು ಕ್ರಾಂತಿಯ ಮೂಲಕ ದೇಶದ ಆಹಾರ ಸುಭದ್ರತೆ ನೀಡಿದವರು ಬಾಬೂಜಿ: ಪುಟ್ಟರಾಜು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕೆ.ಆರ್‌.ಪೇಟೆ: ದೇಶದ ಆಹಾರ ಭದ್ರತೆಗೆ ಹಸಿರು ಕ್ರಾಂತಿಯ ಮೂಲಕ ಸುಭದ್ರತೆ ನೀಡಿದ ದೂರ ದೃಷ್ಟಿಯ ಆಡಳಿತಗಾರ ಬಾಬು ಜಗಜೀವನ್ ರಾಮ್ ಆದರ್ಶಗಳು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ವರದಾನವಾಗಿವೆ ಎಂದು ಕೆ ಆರ್ ಪೇಟೆ ತಾಲ್ಲೂಕು ಬಾಬು ಜಗಜೀವನರಾಮ್ ಸಂಘಗಳ ಒಕ್ಕೂಟದ ಅಧ್ಯಕ್ಷ ಹೊಸ ಹೊಳಲು ಪುಟ್ಟರಾಜು ಹೇಳಿದರು.

ಅವರು ಇಂದು ಕೃಷ್ಣರಾಜಪೇಟೆ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ 37ನೇ ವರ್ಷದ ಪುಣ್ಯ ಸ್ಮರಣೆ ಸಮಾರಂಭದಲ್ಲಿ ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಭಾರತ ದೇಶದ ಕಾರ್ಮಿಕ, ರಕ್ಷಣಾ ಹಾಗೂ ಕೃಷಿ ಸಚಿವರಾಗಿ  ಹಸಿರು ಕ್ರಾಂತಿಯ ಆಂದೋಲನ ನಡೆಸಿ ದೇಶದ ಆಹಾರ ಭದ್ರತೆಗೆ ಅಮೂಲ್ಯವಾದ ಕಾಣಿಕೆ ನೀಡಿದ  ಬಾಬು ಜಗಜೀವನ್ ರಾಮ್ ಅವರ ಜೀವನದ ಸಾಧನೆಗಳು ಯುವ ಜನರಿಗೆ ದಾರಿದೀಪವಾಗಿವೆ. ಒಬ್ಬ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿ, ದೇಶದ ಉಪ ಪ್ರಧಾನಮಂತ್ರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಆಡಳಿತ ನಡೆಸಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡಿರುವ ಬಾಬು ಜಗಜೀವನ್ ರಾಮ್ ಎಂದು ಹೇಳಿದರು.

ಇನ್ನು ಸಾಮಾಜಿಕ ಅಸಮಾನತೆಗಳು ಮೂಢನಂಬಿಕೆ ಹಾಗೂ ವಿವಿಧ ಸಾಮಾಜಿಕ ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ನಿರಂತರವಾಗಿ ಹೋರಾಟ ನಡೆಸಿ ದೇಶದ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದಾರೆ. ನೇರ ನಿಷ್ಠುರ ಸ್ವಭಾವವನ್ನು ಜೀವನದಲ್ಲಿ ರೂಢಿಸಿಕೊಂಡಿದ್ದ ಬಾಬೂಜಿ ಅವರ ದಕ್ಷ ಪ್ರಾಮಾಣಿಕ ಆಡಳಿತವು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು..

ಕೆ.ಆರ್.ಪೇಟೆ  ತಹಸೀಲ್ದಾರ್ ನಿಸರ್ಗಪ್ರಿಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಿರಿಕಳಲೆ ರಾಮದಾಸು, ಪುರಸಭಾ ಸದಸ್ಯ ಡಿ.ಪ್ರೇಮ್ ಕುಮಾರ್, ಕೆ.ಆರ್.ಪೇಟೆ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಜಯ್ಯ, ದಲಿತ ಮುಖಂಡರಾದ ಕತ್ತರಘಟ್ಟ  ರಾಜೇಶ್, ಬಿಲ್ಲರಾಮನಹಳ್ಳಿ ಸುರೇಶ್, ಸುರೇಶ್ ಹರಿಜನ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಎಚ್ ಪುಟ್ಟರಾಜು, ಬಿಬಿ ಕಾವಲು ಕಾಂತರಾಜು, ಉಪತಹಶೀಲ್ದಾರ್ ವಿಕಾರ್ ಅಹಮದ್, ಲಕ್ಷ್ಮೀಕಾಂತ್, ಶಿರಸ್ತೆದಾರ್ ರವಿ, ರಾಜಸ್ವ ನಿರೀಕ್ಷಕರಾದ ಹರೀಶ್ ಚಂದ್ರಕಲಾ ಸೇರಿದಂತೆ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ದಲಿತ ಮುಖಂಡರು ಭಾಗವಹಿಸಿದ್ದರು.

 ವರದಿ ಡಾ. ಕೆಆರ್ ನೀಲಕಂಠ ಕೃಷ್ಣರಾಜಪೇಟೆ

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...