NEWSದೇಶ-ವಿದೇಶ

ಚೀನಾದಲ್ಲಿ ಹೊಸ ವೈರಸ್‌ಗೆ ವ್ಯಕ್ತಿ ಬಲಿ

ಹ್ಯಾಂಟ ವೈರಸ್‌ (Hanta virus)ನಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮೃತಪಟ್ಟ ವ್ಯಕ್ತಿ

ವಿಜಯಪಥ ಸಮಗ್ರ ಸುದ್ದಿ

ಬೀಜಿಂಗ್‌: ಕೊರೊನಾ ವೈರಸ್‌ನಂತೆ ಚೀನಾದಲ್ಲಿ ಮತ್ತೊಂದು ವೈರಸ್‌ಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಯುನ್ನಾನ್‌ ಪ್ರಾಂತದಲ್ಲಿ ನಡೆದಿದೆ.

ಕೊವಿಡ್‌-19 ಕೊರೊನಾ ಸೋಂಕು ಈಗಾಲೇ ವಿಶ್ವಾದ್ಯಂತ ಸುಮಾರು 16 ಸಾವಿರ ಮಂದಿಯನ್ನು ಬಲಿ ತೆಗೆದುಕೊಂಡಿದ್ದು, ಅದರ ಬೆನ್ನಲೇ ಈ ಹೊಸ ವೈರಸ್‌ ಕಾಡಿಸಿಕೊಂಡಿರುವುದು ಮತ್ತೆ ಇಡೀ ಪ್ರಪಂಚವನ್ನೇ ರೋಗದ ಬಾಧೆಗೆ ಇನ್ನಷ್ಟು ನೂಕುತ್ತಿದೆ.

ಇನ್ನೂ ಕೊರೊನಾದಿಂದ ಎಚ್ಚೆತ್ತುಕೊಳ್ಳಲಾಗದೆ ಎಲ್ಲಾ ಕೆಲಸಗಳಿಗೂ ವಿರಾಮ ನೀಡಿ ಮನೆಯಿಂದ ಹೊರಬರದಿದ್ದರೂ ಬಾಧಿಸುತ್ತಿರುವ ಕೊರೊನಾದಿಂದ ವಿಶ್ವದ 180 ದೇಶದ ಜನ ತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ಹೊಸ ಹ್ಯಾಂಟ ವೈರಸ್‌ ಕಾಣಿಸಿಕೊಂಡಿದ್ದು, ಈ ವೈರಸ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬಲಿಯಾಗಿದ್ದಾನೆ.

ಕೆಲಸ ನಿಮಿತ್ತ ಯುನ್ನಾನ್‌ ಪ್ರಾಂತ್ಯಂದಿದ ಶಂಡಾಂಗ್‌ ಪ್ರಾಂತ್ಯಕ್ಕೆ ಪ್ರಯಾಣ ಬೆಳೆಸುತ್ತಿದ್ದಾಗ ಬಸ್‌ನಲ್ಲಿ ಮೃತಪಟ್ಟಿದ್ದಾನೆ. ಈತನಿಗೆ ಇದ್ದ ವೈರಸ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇತರ 30 ಮಂದಿ ಪ್ರಯಾಣಿಕರಿಗೂ ಈ ವೈರಸ್‌ ಸೋಂಕಿರುವ ಶಂಕೆ ವ್ಯಕ್ತವಾಗಿದೆ.

ಹ್ಯಾಂಟ (Hanta virus) ವೈರಸ್‌ ಸಾಮಾನ್ಯವಾಗಿ ಇಲಿಯಿಂದ ಬರುತ್ತದೆ ಎಂದು ವೈದ್ಯರು ಹೇಳಿದ್ದು, ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದರೆ ಇಲಿಗಳ ಮಲ ಮೂತ್ರ ಲಾಲಾರಸ ಸ್ಪರ್ಶಿಸಿ ನಂತರ ಕಣ್ಣು, ಕಿವಿ, ಮೂಗು, ಬಾಯಿ ಮುಟ್ಟಿಕೊಂಡರೆ ಬರುತ್ತದೆ ಎಂದು ತಿಳಿಸಿದ್ದಾರೆ.

ಈ ಸೋಂಕು ತಗುಲಿದರೆ ಜ್ವರ, ತಲೆನೋವು, ಸ್ನಾಯು ಸೆಳೆತ, ಹೊಟ್ಟೆನೋವು,ತಲೆತಿರುಗುವಿಕೆ , ಶೀತ, ವಾಕರಿಕೆ ಮತ್ತು ವಾಂತಿ ಇತರ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ನಂತರದ ದಿನಗಳಲ್ಲಿ ಉಸಿರಾಟದ ತೊಂದರೆ, ಶ್ವಾಸಕೋಶಕ್ಕೆ ನೀರು ತುಂಬಿಕೊಳ್ಳುವುದು. ಇದನ್ನು ಆರಂಭದಲ್ಲೇ ನಿವಾರಿಸಲು ಸಾಧ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಆದರ ಜತೆಗೆ ಇದನ್ನು ಆರಂಭದಲ್ಲಿ ನಿಖರವಾಗಿ ಪತ್ತೆಹಚ್ಚುವ ಕೆಲಸ ಆಗಬೇಕಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ