ಕೊಟ್ಟ ಮಾತಿನಂತೆ ನಡೆಯುತ್ತಿದೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಚುನಾವಣಾ ಸಮಯದಲ್ಲಿ ಕೊಟ್ಟ ಮಾತಿನಂತೆ ಸಿಎಂ ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಜತೆಗೆ ಸಾವಿರಾರೂ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಜನಪರ ಮೆಚ್ಚುಗೆ ಗಳಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ
ಭಾನುವಾರ ದೇವನಹಳ್ಳಿ ತಾಲೂಕು ಭೈರದೇನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಯಿತಿ ವತಿಯಿಂದ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರಕ್ಕೆ ಜಿಲ್ಲಾ ಕೇಂದ್ರ ಹಾಗೂ ಜಿಲ್ಲಾ ಆಡಳಿತ ಸಂಕೀರಣವನ್ನು ಮಾಡಿಸಿದ್ದು ಕಾಂಗ್ರೆಸ್ ಸರ್ಕಾರವೇ. ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರದ ಸಹಕಾರ ಇರುತ್ತದೆ ಎಂದರು.
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ ಅಹ್ಮದ್ ಖಾನ್ ಮಾತನಾಡಿ ಜಿಲ್ಲೆಯ ವಸತಿ ರಹಿತ ಬಡವರಿಗಾಗಿ 2500 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಜತೆಗೆ ಅಲ್ಪಸಂಖ್ಯಾತರ ಮದುವೆ-ಶುಭ ಸಮಾರಂಭಗಳ ಅನುಕೂಲಕ್ಕಾಗಿ 4 ಶಾದಿ ಮಹಲ್ ನಿರ್ಮಾಣಕ್ಕೆ ಮಂಜೂರು ನೀಡಿದೆ. ಸರ್ಕಾರ ಸದಾ ಜನಪರ ಆಡಳಿತದೊಂದಿಗೆ 2 ವರ್ಷವನ್ನು ಕಾಂಗ್ರೆಸ್ ಸರ್ಕಾರ ಪೂರೈಸುತ್ತಿದೆ ಎಂದರು.
ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ 5 ಸಾವಿರ ಕೋಟಿ ರೂ.ಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ನಿವೇಶನ ರಹಿತರಿಗೆ 10 ಸಾವಿರ ಹಕ್ಕುಪತ್ರ ವಿತರಿಸಲಾಗುತ್ತಿದೆ. ಸಿ.ಎಸ್.ಆರ್.ನಿಧಿಯಿಂದ 125 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ. 465 ಕೋಟಿ ರೂ ಕಾಮಗಾರಿಗಳ ಉಧ್ಘಾಟನೆ. ಒಟ್ಟಾರೆ 1000 ಕೋಟಿ ರೂಗಳ ಕಾಮಗಾರಿ,ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಸವಲತ್ತುಗಳ ವಿತರಣೆ
ಪ್ರಮುಖ ಉದ್ಘಾಟನೆ ಕಾಮಗಾರಿಗಳ ವಿವರ: 406 ಕೋಟಿ ರೂ. ವೆಚ್ಚದಲ್ಲಿ ದೇವನಹಳ್ಳಿ ತಾಲ್ಲೂಕಿನ ಹರಳೂರು ಮುದ್ದೇನಹಳ್ಳಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಹಂತ 2 ರಲ್ಲಿ ನಿರ್ಮಿಸಿರುವ 220/66/11 ಕೆ.ವಿ ವಿದ್ಯುತ್ ಉಪಕೇಂದ್ರ ಉದ್ಘಾಟನೆ. 9.91 ಕೋಟಿ ವೆಚ್ಚದಲ್ಲಿ ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಹೆಚ್ಚುವರಿ ಕಟ್ಟಡ ಉದ್ಘಾಟನೆ.
6 ಕೋಟಿ ವೆಚ್ಚದಲ್ಲಿ ವಿಶ್ವನಾಥಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿಯ ಸಂಪನ್ಮೂಲ ಕೇಂದ್ರ ಕಟ್ಟಡ ಮತ್ತು ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ. 4.6 ಕೋಟಿ ವೆಚ್ಚದಲ್ಲಿ ದೊಡ್ಡಬಳ್ಳಾಪುರದ ನಗರದ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಪರಿಸರ ಪರಿಹಾರ ನಿಧಿಯಡಿ ಡಿ ಕ್ರಾಸ್ ರಸ್ತೆಯಲ್ಲಿ ಪೈಪ್ ಲೈನ್ ಅಳವಡಿಸುವ ಕಾಮಗಾರಿ.
ಪ್ರಮುಖ ಶಂಕುಸ್ಥಾಪನೆ ಕಾಮಗಾರಿಗಳು: 100 ಕೋಟಿ ವೆಚ್ಚದಲ್ಲಿ ದೇವನಹಳ್ಳಿಯಲ್ಲಿ 600 ಬಂದಿಗಳ ಸಾಮರ್ಥ್ಯದ ನೂತನ ಕೇಂದ್ರದ ಕಾರಾಗೃಹ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ. 40 ಕೋಟಿ ವೆಚ್ಚದಲ್ಲಿ ದೇವನಹಳ್ಳಿ ನಗರದಲ್ಲಿ ಹಾಲಿ ಇರುವ ಹೆಚ್.ಟಿ ಮತ್ತು ಎಲ್.ಟಿ ಮೇಲ್ತಿಂತಿ ಮಾರ್ಗಗಳನ್ನು ಭೂಗತ ಕೇಬಲ್ ಗಳಾಗಿ ಪರಿವರ್ತಿಸಲು ಶ೦ಕುಸ್ಥಾಪನೆ.
9 ಕೋಟಿ ವೆಚ್ಚದಲ್ಲಿ ದೇವನಹಳ್ಳಿ ತಾಲ್ಲೂಕು ರಾಜ್ಯ ಹೆದ್ದಾರಿ 170 ನಂದಿ ಗ್ರಾಮದಿಂದ ಆಂಧ್ರ ಪ್ರದೇಶದ ಗಡಿಯವರೆಗೆ ಸೇರುವ ರಸ್ತೆಯ ಮಾರ್ಗ ವಿಜಯಪುರ, ಶಿಡ್ಲಘಟ್ಟ, ದಿಟ್ಟೂರಹಳ್ಳಿ, ಇ-ತಿಮ್ಮಸಂದ್ರ ಚೇಳೂರು ರಸ್ತೆಯ ಸರಪಳಿ 14.53 ರಿಂದ 15.35 ಕಿ.ಮೀ ವರೆಗೆ ನಾಲ್ಕು ಪಥದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ (ಶಿಡ್ಲಘಟ್ಟ ಜಂಕ್ಷನ್ ಅಭಿವೃದ್ಧಿ).
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...