ಜೈಪುರ: ಉದಯೋನ್ಮುಖ ಪ್ರತಿಭೆಗಳಿಗೆ ದೊಡ್ಡ ವೇದಿಕೆಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2025) ಈ ಬಾರಿ ಹೊಸ ಯುವಕರ ಆರ್ಭಟವೇ ಜೋರಾಗಿದೆ. ಆದ್ರೆ 14 ವರ್ಷದ ಬಾಲಕ ತಾನು ಪ್ರವೇಶಿಸಿದ ಚೊಚ್ಚಲ ಐಪಿಎಲ್ ಆವತ್ತಿಯಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ಕ್ರಿಕೆಟ್ ದಿಗ್ಗಜರ ಹುಬ್ಬೇರಿಸುವಂತೆ ಮಾಡಿದ್ದಾನೆ.
ಇನ್ನು ಐಪಿಎಲ್ ಅಂದ್ರೆ ಸಿಕ್ಸರ್, ಬೌಂಡರಿಗಳ ಅಬ್ಬರ ಇದ್ದೇ ಇರುತ್ತೇ. ಕೆಲವೊಮ್ಮೆ ಬ್ಯಾಟ್ಸ್ಮೆನ್ಗಳು ಕಡಿಮೆ ಎಸೆತಗಳಲ್ಲಿ ಭಾರೀ ರನ್ಗಳಿಸಿ ಪಂದ್ಯದ ಗತಿಯನ್ನೇ ಬದಲಿಸುತ್ತಾರೆ. ಅಂತಾರಾಷ್ಟ್ರೀಯ ಮಟ್ಟದ ದಿಗ್ಗಜರೇ ಹೆಚ್ಚಾಗಿರುವ ಈ ಅಖಾಡದಲ್ಲಿ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿ ಭರ್ಜರಿಯಾಗಿ ಮಿಂಚುತ್ತಿದ್ದಾರೆ.
ತನ್ನ ಚೊಚ್ಚಲ ಪಂದ್ಯದಲ್ಲೇ ಸಿಕ್ಸರ್ ಸಿಡಿಸುವ ಮೂಲಕ ಐಪಿಎಲ್ ವೃತ್ತಿ ಬದುಕು ಶುರು ಮಾಡಿದ ವೈಭವ್ ಸೂರ್ಯವಂಶಿ 3ನೇ ಪಂದ್ಯದಲ್ಲೇ ಸ್ಫೋಟಕ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದಾರೆ.
ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಕೇವಲ 17 ಎಸೆತಗಳಲ್ಲಿ 6 ಸಿಕ್ಸರ್, 3 ಬೌಂಡರಿ ಬಾರಿಸುವ ಮೂಲಕ ಸ್ಫೋಟಕ ಅರ್ಧಶತಕ ಸಿಡಿಸಿದ್ದರು. ಮುಂದಿನ 18 ಎಸೆತಗಳಲ್ಲಿ ಫಿಫ್ಟಿ ಬಾರಿಸುವ ಮೂಲಕ ಶತಕ ಪೂರೈಸಿದ್ದಾರೆ. ಒಟ್ಟು ತಾನು ಎದುರಿಸಿದ 38 ಎಸೆತಗಳಲ್ಲಿ 101 ರನ್ (11 ಸಿಕ್ಸರ್, 7 ಬೌಂಡರಿ) ಸಿಡಿಸಿ ಔಟಾದರು.
2ನೇ ಆಟಗಾರನೆಂಬ ದಾಖಲೆ: ಇಡೀ ಐಪಿಎಲ್ ಇತಿಹಾಸದಲ್ಲೇ ಅತಿ ವೇಗದ ಶತಕ ಸಿಡಿಸಿದ ಖ್ಯಾತಿ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದೆ. ಇದೀಗ 35 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವೇಗದ ಶತಕ ಬಾರಿಸಿದ 2ನೇ ಆಟಗಾರ ಜತೆಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಉಳಿದಂತೆ ಯೂಸೂಫ್ ಪಠಾಣ್ (37 ಎಸೆತ), ಡೇವಿಡ್ ಮಿಲ್ಲರ್ (38 ಎಸೆತ), ಟ್ರಾವಿಸ್ ಹೆಡ್ (39 ಎಸೆತ) ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ ಟಾಪ್-5 ಆಟಗಾರರಾಗಿದ್ದಾರೆ.
ವೇಗದ ಫಿಫ್ಟಿ: ಇನ್ನೂ ವೈಭವ್ ಈ ಆವೃತ್ತಿಯಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ. ಜತೆಗೆ ಅತೀ ಕಡಿಮೆ ವಯಸ್ಸಿಗೆ ಈ ಸಾಧನೆ ಮಾಡಿದ ಮೊದಲಿಗನಾಗಿದ್ದಾರೆ.
ಇಡೀ ಐಪಿಎಲ್ನಲ್ಲೇ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಶಸ್ವಿ ಜೈಸ್ವಾಲ್ ಹೆಸರಲ್ಲಿದೆ. 2023ರ ಆವೃತ್ತಿಯಲ್ಲಿ ಜೈಸ್ವಾಲ್ ಕೆಕೆಆರ್ ವಿರುದ್ಧ ಕೇವಲ 13 ಎಸೆತಗಳಲ್ಲಿ ಫಿಫ್ಟಿ ಬಾರಿಸಿದ್ದರು. 2018ರಲ್ಲಿ ಕೆ.ಎಲ್ ರಾಹುಲ್, 2022ರಲ್ಲಿ ಪ್ಯಾಟ್ ಕಮ್ಮಿನ್ಸ್ (ಅಂದು ಕೆಕೆಆರ್) ಮುಂಬೈ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಕ್ರಮವಾಗಿ 2, 3ನೇ ಸ್ಥಾನಗಳಲ್ಲಿದ್ದಾರೆ.
- ಈ ಆವೃತ್ತಿಯಲ್ಲಿ ವೇಗದ ಫಿಫ್ಟಿ ಬಾರಿಸಿದ ಆಟಗಾರರು
ವೈಭವ್ (ರಾಜಸ್ಥಾನ್) – 50 ರನ್ – 17 ಎಸೆತ
ಪೂರನ್ (ಎಲ್ಎಸ್ಜಿ) – 50 ರನ್, 18 ಎಸೆತ
ಮಾರ್ಷ್ (ಎಲ್ಎಸ್ಜಿ) – 50 ರನ್, 21 ಎಸೆತ
ಹೆಡ್ (ಎಸ್ಆರ್ಹೆಚ್) – 50 ರನ್, 21 ಎಸೆತ
Related

You Might Also Like
ಪ್ರಯಾಣಿಕರಿಗೆ ವಿತರಿಸದ ಟಿಕೆಟ್ ಮೌಲ್ಯ ಶೂನ್ಯ: ಆದರೂ ನಿರ್ವಾಹಕರು ದಂಡಕಟ್ಟಬೇಕೆಂಬ ಅಸಂಬದ್ಧ ಸುತ್ತೋಲೆ!!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳ ನಿರ್ವಾಹಕರ ಪಾಲಿಗೆ ಮುಳ್ಳಾಗುವ ಒಂದು ನಿರ್ಧಾರವನ್ನು 2024ರ ಮೇ 3ರಂದು ಅಂದಿನ ಮುಖ್ಯ ಸಂಚಾರಿ ವ್ಯವಸ್ಥಾಪಕರು...
KSRTC: ಪ್ರಯಾಣಿಕ ಟಿಕೆಟ್ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ
2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ...
ವಿಧಾನಸೌಧ ಈಗ ಪ್ರವಾಸಿ ತಾಣ: ಸಾರ್ವಜನಿಕ ವೀಕ್ಷಣೆಗೆ ಮುಕ್ತ- ಯಾರಿಗೆ ಟಿಕೆಟ್ ಮತ್ತ್ಯಾರಿಗೆ ಉಚಿತ!
ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಒಮ್ಮೆಯಾದರೂ ನೋಡಬೇಕು ಎಂದು ರಾಜ್ಯದ ಅದೆಷ್ಟು ಮಂದಿ ಆಸೆಪಡುತ್ತಿದ್ದರು. ಅಲ್ಲಿಗೆ ನಾವು ಹೋಗುವುದು ಹೇಗೆ ಎಂದು ಹಲವರು ಹಳ್ಳಿಗಳ್ಳಲಿ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕೆ...
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...
ನಟ ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್...
NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ...
ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...