CrimeNEWSನಮ್ಮಜಿಲ್ಲೆ

ಲಾರಿ- ಬಸ್‌ ಮಧ್ಯೆ ಭೀಕರ ಅಪಘಾತ: ಐವರು ಸಾವು ಹಲವರಿಗೆ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಐವರು ಪ್ರಯಾಣಿಕರು ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.

ಹಿರಿಯೂರು ತಾಲೂಕು ಗೊಲ್ಲರಗಳ್ಳಿ ಗೇಟ್ ಎನ್‌ಎಚ್ 150ಎ ಹಿರಿಯೂರು ಬಳ್ಳಾರಿ ರಸ್ತೆಯಲ್ಲಿ ಸೋಮವಾರ ಬೆಳಗಿನ ಜಾವ 3.30ರ ಹೊತ್ತಿನಲ್ಲಿ ಈ ಭೀಕರ ಅಪಘಾತ ನಡೆದಿದೆ. ಮಸ್ಕಿಯ ರವಿ(23), ಮಾನ್ವಿಯ ನರಸಣ್ಣ(50), ಬೆಂಗಳೂರಿನ ಪಾರ್ವತಮ್ಮ(53) ಹಾಗೂ ಮಾಬಮ್ಮ(35) ಅಸುನೀಗಿದ್ದು, ಮತ್ತೊಬ್ಬರ ಗುರುತು ಪತ್ತೆಯಾಗಬೇಕಿದೆ.

ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್‌ ಓವರ್‌ಟೇಕ್ ತೆಗೆದುಕೊಳ್ಳುವ ವೇಳೆ ಲಾರಿಗೆ ಹಿಂದಿನಿಂದ ಗುದ್ದಿ ಈ ದುರಂತ ಸಂಭವಿಸಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರೆ, ಚಳ್ಳಕೆರೆ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಒಬ್ಬರು ಅಸುನೀಗಿದ್ದಾರೆ.

ಎಂಟು ಮಂದಿಗೆ ತೀವ್ರವಾಗಿ ಗಾಯಗೊಂಡಿದ್ದು, ಐವರನ್ನು ಜಿಲ್ಲಾಸ್ಪತ್ರೆಗೆ ಹಾಗೂ ಮೂವರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಇನ್ನು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಸ್‌ ಚಾಲಕನ ಅತಿವೇಗದ ಚಾಲನೆಯೇ ದುರಂತಕ್ಕೆ ಕಾರಣವೆಂದು ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ತಿಳಿಸಿದ್ದಾರೆ. ಐಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇನ್ನು ಸಂಪೂರ್ಣ ನುಜ್ಜುಗುಜ್ಜಾಗಿರುವ ಬಸ್ ಅಪಘಾತದ ಭೀಕರತೆಯನ್ನು ಬಿಂಬಿಸುತ್ತಿದೆ. ಬಸ್ಸಿನಲ್ಲಿ 51 ಪ್ರಯಾಣಿಕರು ಇದ್ದರೆಂದು ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ