CrimeNEWSನಮ್ಮಜಿಲ್ಲೆನಮ್ಮರಾಜ್ಯ

ಚಿತ್ರದುರ್ಗದ ಬಳಿಯ ಅಪಘಾತದ ಹೊಣೆಯನ್ನು ಮಸ್ಕಿ ಘಟಕದ ಅಧಿಕಾರಿಗಳೇ ಹೊರಬೇಕು: ಚಾಲನಾ ಸಿಬ್ಬಂದಿಗಳ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ರಾಯಚೂರು ವಿಭಾಗದ ಮಸ್ಕಿ ಘಟಕದ ಬಸ್‌ (KA 36 F1628) ಬೆಂಗಳೂರಿನಿಂದ ಮಸ್ಕಿ ಕಡೆಗೆ ಬರುವಾಗ ಸೋಮವಾರ ಬೆಳಗಿನ ಜಾವ 5.30 ಸಮಯದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಲಾರಿಗೆ ಡಿಕ್ಕೆ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ.

ಅಲ್ಲದೆ ಬಸ್‌ನಲ್ಲಿದ್ದ ಒಟ್ಟು 51 ಜನರಲ್ಲಿ ಬಹುತೇಕ ಎಲ್ಲರೂ ಗಾಯಗೊಂಡಿದ್ದು, ಇನ್ನೂ 6-8 ಮಂದಿಯ ಸ್ಥಿತಿ ಗಂಭೀರವಾಗಿದೆ. ಇನ್ನು ಈ ಅಪಘಾತಕ್ಕೆ ಕಾರಣ ಏನು ಅಂತ ಕೇಳಿದರೆ ಮಸ್ಕಿ ಘಟಕದ ಕೆಲ ಸಿಬ್ಬಂದಿ ಹೇಳುತ್ತಿರುವುದು, ನಾವು ಡ್ರೈವರ್‌ ಕಂ ಕಂಡಕ್ಟರ್‌ ಎರಡೂ ಕೆಲಸವನ್ನು ಮಾಡಬೇಕಾಗಿದೆ.

ಇತ್ತ ಟಿಕೆಟ್‌ಗಳನ್ನು ಪ್ರಯಾಣಿಕರಿಗೆ ವಿತರಿಸಬೇಕು. ಬಳಿಕ ಬಸ್‌ಅನ್ನು ಕೂಡ ಓಡಿಸಬೇಕು ಇದರಿಂದ ನಮಗೆ ಬಿಡುವೇ ಸಿಗುತ್ತಿಲ್ಲ. ಅಲ್ಲದೆ ಸರಿಯಾಗಿ ನಿದ್ರೆಕೂಡ ಆಗುತ್ತಿಲ್ಲ. ಹೀಗಾಗಿ ಈ ರೀತಿಯ ಅಪಘಾತಗಳು ಸಂಭವಿಸುತ್ತಿವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ಈ ಬಗ್ಗೆ ರಾಯಚೂರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಗಮನಕ್ಕೆ ಇಂದು ನಡೆದ ಘಟನೆ ಬಗ್ಗೆ  ತಿಳಿಸಿದ್ದೆವು. ಅವರು ಘಟಕ ಮಟ್ಟದಲ್ಲಿ ಈ ರೀತಿ ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಹೇಳಿರುವುದಾಗಿ ಸಿಬ್ಬಂದಿ ತಿಳಿಸಿದರು.

ಇಂದು ಸಂಭವಿಸಿದ ಅವಘಡದಲ್ಲಿ ಐದುಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಇದಕ್ಕೆ ಯಾರನ್ನು ಹೊಣೆ ಮಾಡಬೇಕು. ಇದು ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಆಗಿರುವ ಘಟನೆಯೇ ಹೊರತು ಚಾಲನಾ ಸಿಬ್ಬಂದಿಯಿಂದ ಆಗಿರುವುದಲ್ಲ ಎಂದು ಸಿಬ್ಬಂದಿಗಳು ಆರೋಪ ಮಾಡಿದ್ದಾರೆ.

ಚಾಲಕ ಹಾಗೂ ಚಾಲಕ ಕಂ ನಿರ್ವಾಹಕರನ್ನು ರೂಟಿಗೆ ನಿಯೋಜಿಸಿದ್ದು ನಿರ್ವಾಹಕರಿಗೆ ಸರಿಯಾಗಿ ನಿದ್ದೆ ಆಗದೆ ಇರುವ ಕಾರಣ ಈ ಅವಘಡ ಸಂಭವಿಸಿದೆ. ಇದಕ್ಕೆ ಸಂಪೂರ್ಣ ಘಟಕದಲ್ಲಿರುವ ಅಧಿಕಾರಿಗಳು ಹಾಗೂ ಮೇಲಧಿಕಾರಿಗಳು ಕಾರಣ ಎಂದು ದೂರಿದ್ದಾರೆ.

ಇದನ್ನು ವ್ಯವಸ್ಥಾಪಕ ನಿರ್ದೇಶಕರು ಪರಿಶೀಲಿಸಿ ಅಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ಸೂಚನೆ ನೀಡುವ ಮೂಲಕ ಈ ತರ ಪದೇಪದೇ ಪ್ರಯಾಣಿಕರ ಮತ್ತು ನಮ್ಮ ಜೀವದ ಜತೆ ಚೆಲ್ಲಾಟ ಆಡುತ್ತಿರುವ ಅಧಿಕಾರಿಗಳನ್ನು ಕೂಡಲೇ ಘಟಕದಿಂದ ತೆಗೆಯಬೇಕೆಂದು ಮನವಿ ಮಾಡಿದ್ದಾರೆ.

ಇನ್ನು ಈ ಬಗ್ಗೆ ಡಿಸಿ ಡಿಟಿಒ ಅವರಿಗೂ ವಿಷಯ ತಿಳಿದರೂ ಕೂಡ ಇವರು ಚಾಲನಾ ಸಿಬ್ಬಂದಿಗಳ ಜೀವದ ಜತೆ ಚೆಲ್ಲಾಟ ಆಡುತ್ತಿದ್ದಾರೆ.  ಅದಕ್ಕೆ ನಿದರ್ಶನ ಎಂಬಂತೆ ಇಂದು ಸಂಭವಿಸಿದ ಅಪಘಾತದಲ್ಲಿ ಐದು ಜನ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಹೊಣೆಯನ್ನು ಸಂಪೂರ್ಣವಾಗಿ ಅಧಿಕಾರಿಗಳೇ ಹೊರಬೇಕು ಎಂದು ಮಸ್ಕಿ ಘಟಕದ ಎಲ್ಲ ಸಿಬ್ಬಂದಿಗಳು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ