NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಕಾಂಗ್ರೆಸ್‌ ಪಕ್ಷ ಪ್ರಣಾಳಿಕೆ ಮೂಲಕ ಕೊಟ್ಟ ಭರವಸೆ ಈಡೇರಿಸಿಯೇ ತೀರುತ್ತದೆ: ಕೆಕೆಆರ್‌ಡಿಬಿ ಅಧ್ಯಕ್ಷ ಅಜಯಸಿಂಗ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದಿಂದ ರಾಜ್ಯ ಮಟ್ಟದ ಸಮ್ಮೇಳನ ಆಯೋಜನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷದ ಮುಖಂಡರು ಸಾರಿಗೆ ನೌಕರರಿಗೆ ಪ್ರಣಾಳಿಕೆ ಮೂಲಕ ಕೊಟ್ಟಿರುವ ಭರವಸೆಯನ್ನು ಈಡೇರಿಸಿಯೇ ತೀರುತ್ತೇವೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರೂ ಆದ ಜೇವರ್ಗಿ ಶಾಸಕ ಅಜಯಸಿಂಗ್‌ ಹೇಳಿದ್ದಾರೆ.

ಮಂಗಳವಾರ ಸೆ.12ರಂದು ಕಲಬುರಗಿಯ ಕೊಠಾರಿ ಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಆಯೋಜಿಸಿದ್ದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು.

ಇಂದು ಈ ಸಮ್ಮೇಳನಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬರಬೇಕಿತ್ತು, ಅನ್ಯ ಕಾರ್ಯದ ನಿಮಿತ್ತ ಬರಲಾಗಿಲ್ಲ. ಆದರೆ, ನೌಕರರಿಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ. ಅದರಂತೆ 2021ರ ಮುಷ್ಕರದ ಸಮಯದಲ್ಲಿ ನೌಕರರ ವಿರುದ್ಧ ದಾಖಲಾಗಿರುವ ಪೊಲೀಸ್‌ ಪ್ರಕರಣಗಳನ್ನು ವಾಪಸ್‌ ಪಡೆಯುವುದಕ್ಕೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡಿದ್ದು ಶೀಘ್ರದಲ್ಲೇ ಅದನ್ನು ಕೂಡ ಕಾರ್ಯಗತ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಸಾರಿಗೆ ನೌಕರರಾದ ನೀವು ನಿತ್ಯ ಸಾರ್ವಜನಿಕರ ಸೇವೆಯಲ್ಲಿ ತೊಡಗಿಕೊಂಡಿದ್ದು, ಕುಟುಂಬಕ್ಕೆ ಹೆಚ್ಚಿನ ಸಮಯ ಕೊಡಲಾಗುತ್ತಿಲ್ಲ ಎಂಬುವುದು ನಮಗೂ ಗೊತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಿಮಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ನಮ್ಮ ಸರ್ಕಾರ ಕಲ್ಪಿಸಿಕೊಡಲಿದೆ ಎಂದು ತಿಳಿಸಿದರು.

ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಮಾತನಾಡಿ, ನಮ್ಮ ಸಂಘಟನೆಯ ಧ್ಯೇಯೋದ್ದೇಶಗಳನ್ನು ಮೆಚ್ಚಿ ಸಾರಿಗೆ ಹಲವಾರು ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಇಂದು ಕೂಟವನ್ನು ಸೇರುತ್ತಿರುವುದು ಸಂತಸ ತಂದಿದೆ ಎಂದ ಅವರು, ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ ಮುಂದೆ ಯಾವರೀತಿಯಲ್ಲಿ ನೌಕರರು ಕೂಟದೊಂದಿಗೆ ಸ್ಪಂದಿಸುತ್ತಾರೆ ಎಂಬುದನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಈ ಸಮ್ಮೇಳನ ಆಯೋಜಿದ್ದೇವೆ ಎಂದು ಹೇಳಿದರು.

ಇನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನಮಗೆ ಕೊಟ್ಟಿದ್ದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಗಮನಸೆಳೆಯಬೇಕಿತ್ತು. ಹೀಗಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಈಗ ನೂರು ದಿನ ಪೂರೈಸಿದ್ದು ಈ ನಡುವೆ ನಮಗೆ ಪ್ರಣಾಳಿಕೆ ಮೂಲಕ ಕೊಟ್ಟಿರುವಂತೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ಸರ್ಕಾರದ ಗಮನ ಸೆಳೆಯಲು ಈ ಸಮ್ಮೇಳನ ಆಯೋಜನೆ ಮಾಡಲಾಗಿದೆ ಎಂದರು.

ಇನ್ನು ನಮ್ಮ ಸಾರಿಗೆ ನೌಕರರಿಂದ, ನೌಕರರಿಗಾಗಿ ನಡೆಯುತ್ತಿರುವ ಈ ಸಮ್ಮೇಳನಕ್ಕೆ‌ ಸಾವಿರಾರು ಮಂದಿ ಸೇರಿರುವುದು ಇದೊಂದು ಐತಿಹಾಸಿಕ ಕ್ಷಣವಾಗಿದೆ. ನಿಮಗೆಲ್ಲರಿಗೂ ನಮ್ಮ ಕೂಟ ಆಭಾರಿಯಾಗಿದ್ದು, ನಿಮ್ಮ ಬೇಡಿಕೆಗಳನ್ನು ಸರ್ಕಾರ ಮತ್ತು ಆಡಳಿತ ಮಂಡಳಿ ಮುಂದಿಟ್ಟು ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ ಒತ್ತಾಯ ಮಾಡುವುದಕ್ಕೆ ಮತ್ತೊಮ್ಮೆ ಶಕ್ತಿ ನೀಡಿದ್ದೀರಿ ಎಂದು ಹೇಳಿದರು.

ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸ್ವಯಂ ಪ್ರೇರಿತವಾಗಿ ನಾಲ್ಕು ನಿಗಮಗಳ ನೌಕರರು ಮತ್ತು ಅವರ ಕುಟುಂಬದವರು ಆಗಮಿಸಿದ್ದರು. ಇದೂ ಕೂಡ ಒಗಟ್ಟಿನಲ್ಲಿ ಬಲವಿದೆ ಅನ್ನೋದಕ್ಕೆ ಇನ್ನೊಂದು ಸಾಕ್ಷಿಯಾಯಿತು.

ಇನ್ನು ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಿದ ಕಲ್ಯಾಣ ಕರ್ನಾಟಕ ಕಾರ್ಯಾಧ್ಯಕ್ಷ ಜಯರಾಮ ರಾಥೋಡ್ ಹಾಗೂ ಪದಾಧಿಕಾರಿಗಳಿಗೆ ಸಮಸ್ತ ನಾಲ್ಕು ನಿಗಮಗಳ ನೌಕರರು ತುಂಬು ಹೃದಯದ ಅಭಿನಂದನೆ ಸಲ್ಲಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ