LatestNEWSನಮ್ಮರಾಜ್ಯ

NWKRTC: ಮಳೆಗೆ ಸೋರುತಿಹುದು ಬಸ್‌ ಮಾಳಿಗೆ ಅಧಿಕಾರಿಗಳ ಅಜ್ಞಾನದಿಂದ ಸೋರುತಿಹುದು..!?

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ಮಾಳಿಗೆ ಮಳೆಗೆ ಸೋರುತಿದ್ದು ಇದು ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಸಂಸ್ಥೆಯ ಹಾವೇರಿ ವಿಭಾಗದ ಹಾವೇರಿ ಘಟಕದ ಬಸ್ಛಾವಣಿ ತೂತು ಬಿದ್ದಿದ್ದು ಮಳೆಗೆ ಅದು ಸೂರುತ್ತಿದೆ. ಆ ಸೋರುತ್ತಿರುವ ಬಸ್ಸನ್ನೇ ಚಾಲಕ ಕೊಡೆ ಹಿಡಿದುಕೊಂಡು ಮಳೆಯೊಳಗೆ ಓಡಿಸುತ್ತಿರುವುದನ್ನು ಪ್ರಯಾಣಿಕರು ವಿಡಿಯೋ ಮಾಡಿದ್ದಾರೆ.

ಇದು ಘಟಕದ ಅಧಿಕಾರಿಗಳು ಮತ್ತು ಸಂಸ್ಥೆಯ ಅಧಿಕಾರಿಗಳ ನಡೆಯನ್ನು ತೋರಿಸುವಂತಿದೆ. ಬಸ್ಗಳನ್ನು ರಿಪೇರಿ ಮಾಡದೆ ಬಸ್ಗಳ ಫಿಟ್ನೆಸ್ನೋಡದೆ ಚಾಲಕರ ಕೈಗೆ ಬಸ್ಕೊಟ್ಟು ಕಳುಹಿಸುವ ಚಾಳಿಯಿಂದ ಈ ರೀತಿಯ ಅವಾಂತರಗಳು ನಡೆಯುತ್ತಿವೆ.

ಇನ್ನು ಚಾಲಕರು ಇಂಥ ಬಸ್ಬೇಡ ಎಂದು ಹೇಳಿದರೆ ಅವರಿಗೆ ಮೆಮೋ ಕೊಡುವುದು ಇಲ್ಲ ಬೇರೆ ಬಸ್ಕೊಡದೆ ಡಿಪೋನಲ್ಲೇ ಕೂರಿಸಿ ಬಳಿಕ ಗೈರು ಹಾಜರಿ ಮಾಡಿ ವೇತನ ಬರದಂತೆ ಮಾಡುವುದು.

ಇದನ್ನು ಪ್ರಶ್ನಿಸಿದರೆ ಮೇಲಧಿಕಾರಿಗಳಿಗೆ ಎದುರು ಮಾತನಾಡಿದ ಎಂದು ಹೇಳಿ ಮೆಮೋ ಕೊಟ್ಟು ಬಳಿಕ ಅಮಾನತು ಮಾಡುವುದು. ಇಲ್ಲಿ ಚಾಲಕರು ಬಸ್ಸರಿಯಿಲ್ಲ ಎಂದು ಹೇಳುವುದಕ್ಕೂ ಬಿಡದೆ ಈ ರೀತಿ ಅಧಿಕಾರಿಗಳು ದಬ್ಬಾಳಿಕ ಮಾಡುತ್ತಿರುವುದರಿಂದ ಇಂದು ಕೊಡೆ ಹಿಡಿದುಕೊಂಡು ಬಸ್ಓಡಿಸುವ ಸ್ಥಿತಿ ಚಾಲಕರಿಗೆ ಬಂದಿದೆ.

ಇನ್ನಾದರೂ ಈ ಬಗ್ಗೆ ಸಾರಿಗೆ ಸಚಿವರು ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರು  ಗಮನ ಹರಿಸಿ ಬೇಜವಾಬ್ದಾರಿಯಿಂದ ನಡೆದುಕೊಳ್ಳುತಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪ್ರಯಾಣಿಕರೆ ಒತ್ತಾಯಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ