SSLC: ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ BBMP ಶಾಲೆಯ 78 ವಿದ್ಯಾರ್ಥಿಗಳಿಗೆ ತಲಾ ₹25 ಸಾವಿರ ಪ್ರೋತ್ಸಾಹ ಧನ

- ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 55.78 ಫಲಿತಾಂಶ:
- ಬಿಬಿಎಂಪಿ ಶಾಲೆಯ ಮೂರು ವಿದ್ಯಾರ್ಥಿನಿಯರು ಶೇ. 95ಕ್ಕೂ ಹೆಚ್ಚು ಅಂಕ ಪಡೆದು ಉತ್ತೀರ್ಣ.
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2,257 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1,759 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 55.78 ರಷ್ಟು ಫಲಿತಾಂಶ ಬಂದಿದೆ.
ಬಿಬಿಎಂಪಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳ ಪೈಕಿ 78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಬಿಬಿಎಂಪಿ ಬಸವನಗುಡಿ ಪ್ರೌಢಶಾಲೆಯು ಶೇ. 100 ರಷ್ಟು ಫಲಿತಾಂಶವನ್ನು ನೀಡಿ ಅಗ್ರಸ್ಥಾನ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ.
ಬಿಬಿಎಂಪಿ ಶಾಂತಿ ನಗರ ಪ್ರೌಢಶಾಲೆಯು ಶೇ. 88.89 ರಷ್ಟು ಫಲಿತಾಂಶವನ್ನು ನೀಡಿ ಎರಡನೇ ಸ್ಥಾನವನ್ನು ಪಡೆದರೆ ಬಿಬಿಎಂಪಿ ಶ್ರೀರಾಮಪುರ ಪ್ರೌಢಶಾಲೆಯು ಶೇ. 86.21 ರಷ್ಟು ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.
ಇನ್ನು 2024-25 ನೇ ಸಾಲಿನಲ್ಲಿ ಒಟ್ಟು 78 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಅವರಲ್ಲಿ ಹೇರೋಹಳ್ಳಿ ಪ್ರೌಢಶಾಲೆಯಶಾಲಿನಿ ಬಿ.ಆರ್ ಅವರು 625 ಕ್ಕೆ 614 ಅಂಕಗಳನ್ನು ಪಡೆದು ಶೇ. 98.24 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಕೀರ್ತಿ ತಂದಿದ್ದಾರೆ.
ಶ್ರೀರಾಮಪುರ ಪ್ರೌಢಶಾಲೆಯ ರಾಜೇಶ್ವರಿ ಡಿ. ಅವರು 625 ಕ್ಕೆ 610 ಅಂಕಗಳನ್ನು ಪಡೆದು ಶೇ. 97.60 ರಷ್ಟು ಅಂಕಗಳನ್ನು ಗಳಿಸಿದ್ದು, ಜಯಮಹಲ್ ಬಿಬಿಎಂಪಿ ಬಾಲಕಿಯರ ಪ್ರೌಢಶಾಲೆಯ ಜೈನಬ್ ಫಿರ್ ದೋಸ್ ಖಾನಂ 606 (96.96%) ಪಾಲಿಕೆಗೆ ಕೀರ್ತಿ ತಂದಿದ್ದಾರೆ.
ಈ ಮೂವರು ವಿದ್ಯಾರ್ಥಿನಿಯರು ಸೇರಿದಂತೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ 78 ವಿದ್ಯಾರ್ಥಿಗಳಿಗೂ ಪಾಲಿಕೆ ವತಿಯಿಂದ ತಲಾ 25,000 ರೂಪಾಯಿ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Related

You Might Also Like
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...