NEWSನಮ್ಮಜಿಲ್ಲೆನಮ್ಮರಾಜ್ಯ

ಕರ್ನಾಟಕ ಬಂದ್‌: ಪ್ರಯಾಣಿಕರಿಲ್ಲದೇ ಖಾಲಿಯಾಗಿಯೇ ಓಡಾಡುತ್ತಿರುವ ಸಾರಿಗೆ ಬಸ್‌ಗಳು- ಕೋಟ್ಯಂತರ ರೂ.ನಷ್ಟ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಶುಕ್ರವಾರವಾದ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕವಾಘಿ ಇಡೀ ರಾಜ್ಯವೇ ಸ್ತಬ್ಧಗೊಂಡಿರುವುದರಿಂದ ಸಾರಿಗೆ ಬಸ್‌ಗಳು ಪ್ರಯಾಣೀಕರಿಲ್ಲದೆ ಖಾಲಿಯಾಗಿಯೇ ಓಡಾಡುತ್ತಿವೆ.

ನೂರಾರು ಸಂಘಟನೆಗಳು ರಸ್ತೆಗಿಳಿದಿರುವುದರಿಂದ ಬಂದ್​ಗೆ ಸ್ವಯಂಪ್ರೇರಿತರಾಗಿ ನಾಡಿನ 7 ಕೋಟಿ ಜನರು ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಮಂಗಳೂರು ಭಾಗ ಹೊರತುಪಡಿಸಿ ಇಡೀ ರಾಜ್ಯವೇ ಸ್ತಬ್ಧವಾಗಿದೆ. ಈ ಮೂಲಕ ಬಂದ್​ ಯಶಸ್ವಿಯಾಗುತ್ತಿದೆ.

ಇದರ ನಡುವೆಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಶೇ.40ರಷ್ಟು ಬಸ್‌ಗಳನ್ನು ರಸ್ತೆಗಿಳಿಸಲಾಗಿದೆ. ಆದರೆ, ಆ ಬಸ್‌ಗಳೂ ಕೂಡ ಪ್ರಯಾಣಿಕರಿಲ್ಲದೆ, ಒಬ್ಬಿಬ್ಬರು ಪ್ರಯಾಣಿಕರನ್ನೇ ಕರೆದುಕೊಂಡು ಹೋಗುತ್ತಿವೆ. ಇದರಿಂದ ಸಾರಿಗೆ ನಿಗಮಕ್ಕೆ ಕೋಟ್ಯಂತರ ರೂಪಾಯಿ ನಷ್ಟವೂ ಆಗುತ್ತಿದೆ ಎಂದು ಹೆಸರೇಳಲಿಚ್ಛಿಸದ ಅಧಿಕಾರಿಯೊಬ್ಬರು ವಿಜಯಪಥಕ್ಕೆ ತಿಳಿಸಿದ್ದಾರೆ.

ಕುರುಬೂರು ಶಾಂತಕುಮಾರ್‌ ಆಕ್ರೋಶ: ಪ್ರಮುಖವಾಗಿ ಬೆಂಗಳೂರಿನ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಆಗುತ್ತಿರುವುದು ಕಾವೇರಿ ನದಿ ನೀರಿನಿಂದ. ಈ ಹಿನ್ನೆಯಲ್ಲಿ ಪ್ರಸ್ತುತ ಬೆಳೆ ಬೆಳೆಯುವುದಕ್ಕೆ ನೀರಿಲ್ಲ. ಇನ್ನು ಕುಡಿಯಲಿಕ್ಕೂ ನೀರಿಲ್ಲದ ಪರಿಸ್ಥಿತಿಗೆ ರಾಜ್ಯವನ್ನು ಅದರಲ್ಲೂ ಬೆಂಗಳೂರಿಗರನ್ನು ದೂಡಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಟಾಳ್‌ ನಾಗರಾಜ್‌ ಆಗ್ರಹ: ಇತ್ತ ಮಂಡ್ಯ, ಚಾಮರಾಜನಗರ, ಹಾಸನ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಬಂದ್‌ ಬಿಸಿ ಜೋರಾಗಿದೆ. ಈ ಮೂಲಕ ಸರ್ಕಾರ ಎಚ್ಚೆತ್ತುಕೊಂಡು ಕೂಡಲೇ ನೀರು ನಿಲ್ಲಿಸಬೇಕು ಎಂದು ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

ಒಟ್ಟಾರೆ ಕರ್ನಾಟಕ ಬಂದ್‌ ಹಿನ್ನೆಲೆ ಸಾರಿಗೆ ನಿಗಮಗಳ ಬಸ್‌ಗಳು ಹಾಗೂ ನಮ್ಮ ಮೆಟ್ರೋದಲ್ಲೂ ಜನರ ಓಡಾಟ ವಿರಳವಾಗಿದ್ದು, ರಾಜ್ಯದ ಬಹುತೇಕ ಎಲ್ಲ ಬಸ್‌ ನಿಲ್ದಾಣಗಳು ಜನರಿಲ್ಲದೆ ಬಿಕೋ ಎನುತ್ತಿವೆ. ಇನ್ನು ರಸ್ತೆಗಿಳಿದಿರುವ ಕನ್ನಡಪರ, ರೈತಪರ ಸಂಘಟನೆಗಳು ಸೇರಿದಂತೆ ರಾಜ್ಯದ ಎಲ್ಲ ಸಂಘಟನೆಗಳು ಇಂದಿನ ಬಂದ್‌ನಲ್ಲಿ ಭಾಗಿಯಾಗುವ ಮೂಲಕ ಹೋರಾಟವನ್ನು ತೀವ್ರಗೊಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ