NEWSಮೈಸೂರುಸಂಸ್ಕೃತಿ

ಮೈಸೂರು ದಸರಾ ಮಹೋತ್ಸವ ಹಿನ್ನೆಲೆ: ಕುಶಾಲತೋಪು ಸಿಡಿಸುವ ಫಿರಂಗಿಗಳಿಗೆ ಪೂಜೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದಸರಾ ಮಹೋತ್ಸವದ ವೇಳೆ ಜಂಬೂ ಸವಾರಿಯಲ್ಲಿ ಸಾಗುವ ಗಜಪಡೆ ಮತ್ತು ಅಶ್ವಾರೋಹಿ ದಳದ ಕುದುರೆಗಳಿಗೆ ಸಿಡಿಮದ್ದಿನ ತಾಲೀಮು ನಡೆಸುವ ಉದ್ದೇಶದಿಂದ ಅರಮನೆಯಲ್ಲಿರುವ ಫಿರಂಗಿ ಗಾಡಿಗಳನ್ನು ಹೊರತೆಗೆದು ಶುಚಿಗೊಳಿಸಿ ಪೂಜೆ ಸಲ್ಲಿಸಲಾಯಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈಗಾಗಲೇ ಅರಮನೆಯಲ್ಲಿ ದಸರಾ ಚಟುವಟಿಕೆಗಳು ಶುರುವಾಗಿದ್ದು ಅದರಂತೆ ಅಂಬಾವಿಲಾಸ ಅರಮನೆ ಆವರಣದ ಆನೆಬಾಗಿಲು ಬಳಿ ಫಿರಂಗಿ ಗಾಡಿಗಳಿಗೆ ಅರಮನೆ ಪುರೋಹಿತ ಪ್ರಹ್ಲಾದ್‌ರಾವ್ ನೇತೃತ್ವದಲ್ಲಿ ನಗರ ಪೊಲೀಸ್ ಆಯುಕ್ತ ರಮೇಶ್.ಬಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. 11 ಫಿರಂಗಿ ಗಾಡಿಗಳಿಗೆ ಪೂಜೆ, ಮಹಾಮಂಗಳಾರತಿಯನ್ನು ನಡೆಸಲಾಯಿತು.

ಈ ವೇಳೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ರಮೇಶ್.ಬಿ ಅವರು ಗಣಪತಿ, ಚಾಮುಂಡೇಶ್ವರಿ ಪೂಜೆ ಮಾಡಿ ಫಿರಂಗಿಗಳನ್ನು ನಮ್ಮ ವಶಕ್ಕೆ ಪಡೆಯಲಾಗಿದೆ. ವಸ್ತುಪ್ರದರ್ಶನ ಆವರಣದಲ್ಲಿ ಮೂರು ಬಾರಿ ಗಜಪಡೆ, ಅಶ್ವಾರೋಹಿ ದಳಕ್ಕೆ ಶಬ್ದದ ಪರಿಚಯ ಮಾಡಿಕೊಡಲಾಗುತ್ತದೆ. ಅ.24ರಂದು ಜಂಬೂ ಸವಾರಿ ವೇಳೆ ಕುಶಾಲತೋಪು ಸಿಡಿಸಲಾಗುತ್ತದೆ ಎಂದು ಹೇಳಿದರು.

ಡಿಸಿಎಫ್ ಸೌರಭ್ ಕುಮಾರ್ ಮಾತನಾಡಿ, ಫಿರಂಗಿಗಳಿಗೆ ಪೂಜೆ ಸಲ್ಲಿಸಲಾಗಿದೆ. ಪೊಲೀಸ್ ಆಯುಕ್ತರು ದಿನಾಂಕ ನಿಗದಿಪಡಿಸಿದ ನಂತರ ಸಿಡಿಮದ್ದು ತಾಲೀಮು ನಡೆಸಲಾಗುತ್ತದೆ. ಗಜಪಡೆಯ ಎಲ್ಲಾ 14 ಆನೆಗಳು ಆರೋಗ್ಯವಾಗಿದ್ದು, ತಾಲೀಮಿನಲ್ಲಿ ಭಾಗವಹಿಸುತ್ತಿವೆ. ಸುಗ್ರೀವ ಆನೆಗೆ ಭಾರ ಹೊರಿಸಿ ತಾಲೀಮು ನಡೆಸಲಾಗಿದೆ ಎಂದರು.

ಪ್ರತಿವರ್ಷ ಜಂಬೂ ಸವಾರಿ ಹೊರಡುವ ಮುನ್ನ ಸಿಡಿಸುವ ಕುಶಾಲತೋಪು ಶಬ್ದಕ್ಕೆ ಗಜಪಡೆ, ಅಶ್ವಾರೋಹಿ ಪಡೆ ಬೆದರದಂತೆ ತಾಲೀಮು ನಡೆಸುವುದು ವಾಡಿಕೆ. ಅದರಂತೆ ಈ ಬಾರಿಯೂ ಗಜಪಡೆ ಹಾಗೂ ಅಶ್ವಾರೋಹಿ ದಳಕ್ಕೆ ಕುಶಾಲತೋಪಿನ ಶಬ್ಧ ಪರಿಚಯಿಸಲು ಫಿರಂಗಿ ತಾಲೀಮು ನಡೆಸಲು ಸಿದ್ಧತೆ ಮಾಡಲಾಯಿತು. ಜಂಬೂ ಸವಾರಿ ದಿನದಂದು 21 ಕುಶಾಲತೋಪು ಸಿಡಿಸುವ ಕಾರ್ಯ ನಡೆಯಲಿದ್ದು, ಸಿಎಆರ್ ಪೊಲೀಸರು ಕುಶಾಲ ತೋಪು ಸಿಡಿಸಲು ಸಿದ್ಧತೆ ನಡೆಸಿದರು.

ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ, ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ