NEWSಸಂಸ್ಕೃತಿ

ಅ.13ರಂದು ಮಹಿಷ ದಸರಾ ವಿರೋಧಿಸಿ ಚಾಮುಂಡಿಬೆಟ್ಟ ಚಲೋ: ಸಂಸದ ಪ್ರತಾಪ ಸಿಂಹ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ವಿರೋಧಿಸಿ ಮತ್ತು ತಾಯಿ ಚಾಮುಂಡೇಶ್ವರಿಯ ಗೌರವ ಸಂರಕ್ಷಣೆಗಾಗಿ ಅ.13ರಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಕುರಿತಂತೆ ಸಂಸದ ಪ್ರತಾಪ ಸಿಂಹ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಮೆಟ್ಟಿಲುಗಳ ಮೂಲಕ ಚಾಮುಂಡಿ ಬೆಟ್ಟ ಹತ್ತಲಾಗುವುದು. ವಾಹನಗಳಲ್ಲಿ ಬರುವವರು ವಾಹನದಲ್ಲಿ ಬರಬಹುದು. ಐದು ಸಾವಿರ ಮಂದಿ ದಿನವಿಡೀ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಲಾಗುವುದು. ನಾನು ಪೊಲೀಸ್ ಸೇರಿದಂತೆ ಇತರ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇನೆ. ನಾವು ಹಮ್ಮಿಕೊಂಡಿರುವ ಚಲೋಗೆ ಅವಕಾಶ ನೀಡುವಂತೆ ಕೋರುತ್ತೇನೆ ಎಂದು ಹೇಳಿದರು.

ನಮ್ಮೆಲ್ಲರ ನಂಬಿಕೆ ಉಳಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ತಪ್ಪದೇ ಪಾಲ್ಗೊಳ್ಳಿ. ಕೆಲವರು ಮಾಡುತ್ತಿರುವ ಅನಾಚಾರ ತಡೆಯಲು ಭಕ್ತರು ಕೈಜೋಡಿಸಬೇಕು. ಅವಮಾನ ಮಾಡಿ ನಿಂದಿಸುವವರನ್ನು ಸಹಿಸಬಾರದು. ಆಕ್ರೋಶ ಬಂದಿರುವವರೆಲ್ಲರೂ ಸಂಘಟಿತರಾಗಿ ವ್ಯಕ್ತ ಮಾಡೋಣ ಎಂದು ಕೋರಿದರು.

ಧರ್ಮಾತೀತ, ಪಕ್ಷಾತೀತವಾಗಿ ಎಲ್ಲರೂ ಬರಬೇಕು. ಮಹಿಷ ದಸರಾ ತಡೆಯುವ ಉದ್ದೇಶದಿಂದ ಸಂಘರ್ಷಕ್ಕೂ ಸಿದ್ಧವಿದ್ದೇವೆ. ಸಿದ್ಧಾಂತದ ಎಲ್ಲೆಯನ್ನು ಮೀರಿ ಅವಮಾನ ಮಾಡಿ ನಂತರ ಪೂಜಿಸುವುದು ಅನೈತಿಕ ಅಲ್ಲವೇ ಎಂದು ಪ್ರಶ್ನಿಸಿದರು.

ಈ ಬಾರಿ ನಡೆಯುತ್ತಿರುವುದು 414ನೇ ದಸರಾ. ಮಹಾರಾಜರ ಕಾಲದಿಂದ ಯಾವುದೇ ಸರ್ಕಾರದಲ್ಲಿ ನಿರಂತರವಾಗಿ ದಸರಾ ನಡೆದುಕೊಂಡು ಬರುತ್ತಿದೆ. ಈ ಬಾರಿಯೂ ಚೊಕ್ಕವಾಗಿ ನಡೆಯಬೇಕು ಎಂಬುದು ನಮ್ಮ ಆಶಯ. ರೂಢಿಗತವಾಗಿ ನಡೆದುಕೊಂಡು ಬಂದಿರುವುದು ಜನರಿಗೆ ಗೊತ್ತು.

2015-16ರ ವೇಳೆ ಮಹಿಷ ದಸರಾ ಆಚರಿಸಿದರು. ದೆವ್ವ ಅದ್ಯಾವಾಗ ದೇವರಾಯ್ತು ಎಂಬುದು ಗೊತ್ತಿಲ್ಲ. ಮೂಲನಿವಾಸಿಗಳ ದೇವರಂತೆ ನಮಗೆ ಗೊತ್ತಿಲ್ಲ. ಮರು ವರ್ಷ ಮೆರವಣಿಗೆ ನಡೆಸಿದರು. ನಮ್ಮ ಸರ್ಕಾರದಲ್ಲಿ ಚಾಮುಂಡಿಗೆ ಅವಮಾನ ಮಾಡುವಂತಹ ಕೆಲಸ ನಿಲ್ಲಿಸಿದ್ದೆವು. ಅನೈತಿಕ ಕೆಲಸವನ್ನು ನಿಲ್ಲಿಸಿದ್ದೆವು. ಆ ಅನಾಚಾರಕ್ಕೆ ನಾವು ಅವಕಾಶ ಕೊಟ್ಟಿರಲಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೇಯರ್ ಶಿವಕುಮಾರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ವಕ್ತಾರ ಮಹೇಶ್ ರಾಜೇ ಅರಸ್ ಇದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ