“ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ MD ಅನ್ಬುಕುಮಾರ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ “ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು ಇದೇ ಜ.6ರಂದು ಚಾಲನೆ ನೀಡಿದ್ದಾರೆ.
ಇನ್ನು ಈ ಯೋಜನೆಗೆ ಆಸ್ಪತ್ರೆಗಳು ಉತ್ತಮವಾಗಿ ಸ್ಪಂದಿಸಿದ್ದು ನೌಕರರು ಸಂತೋಷದಿಂದ ಸ್ವಾಗತಿಸಿರುವುದು ನಿಗಮಕ್ಕೆ ತೃಪ್ತಿ ತಂದಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಸಂತಸ ವ್ಯಕ್ತಪಡಿಸಿ ನೌಕರರಿಗೆ ಪತ್ರ ಬರೆದಿದ್ದಾರೆ.
ಆ ಪತ್ರದಲ್ಲಿ … ಆತ್ಮೀಯ ನೌಕರ ಬಾಂಧವರೇ,
ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂಬ ಸದುದ್ದೇಶದಿಂದ “ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು 06.01.2025 ರಂದು ಚಾಲನೆ ನೀಡಿದ್ದಾರೆ. ಈ ಯೋಜನೆಗೆ ಆಸ್ಪತ್ರೆಗಳು ಉತ್ತಮವಾಗಿ ಸ್ಪಂದಿಸಿದ್ದು ನೌಕರರು ಸಂತೋಷದಿಂದ ಸ್ವಾಗತಿಸಿರುವುದು ನಿಗಮಕ್ಕೆ ತೃಪ್ತಿ ತಂದಿರುತ್ತದೆ.
ಜನವರಿ 11ರವರೆಗೂ 41 ಮಂದಿ ಒಳರೋಗಿಗಳಾಗಿ ಹಾಗೂ 124 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಆರೋಗ್ಯ ಕಾರ್ಡ್ ಇಲ್ಲದೆಯೂ ನೌಕರರು ತಮ್ಮ PF Number ಹೇಳಿ ಚಿಕಿತ್ಸೆ ವಡೆಯಬಹುದಾಗಿದೆ.
ನಿಗಮದಲ್ಲಿ 33,288 ಅಧಿಕಾರಿ/ಸಿಬ್ಬಂದಿಗಳ ಪೈಕಿ 23,342 ಸಿಬ್ಬಂದಿಗಳಿಗೆ ಈಗಾಗಲೇ ಆರೋಗ್ಯ ಕಾರ್ಡ್ ವಿತರಿಸಲಾಗಿದ್ದು, ಉಳಿದ 9,946 ಸಿಬ್ಬಂದಿಗಳಿಗೆ ನಾಳೆ 12.01.2025 ರೊಳಗಾಗಿ ವಿತರಿಸಲಾಗುವುದು.
ಚಿಕಿತ್ಸಾ ವೆಚ್ಚವನ್ನು 30 ದಿನದೊಳಗಾಗಿ ಆಸ್ಪತ್ರೆಗಳಿಗೆ ಪಾವತಿಸಲಾಗುವುದೆಂದು ತಿಳಿಸಲಾಗಿತ್ತು. ಆದರೆ, ಎಲ್ಲ ಬಿಲ್ಲು/ ದಾಖಲೆಗಳು ಸರಿಯಾಗಿ ನಿಗದಿತ ಸಮಯದಲ್ಲಿ ಒದಗಿಸಿದ್ದಲ್ಲಿ 48 ಗಂಟೆಯೊಳಗೆ ಪಾವತಿಸಲು ಕ್ರಮ ವಹಿಸಲಾಗುವುದು. ಅದರಂತೆ ಈಗಾಗಲೇ 8 ಪ್ರಕರಣಗಳಿಗೆ 48 ಗಂಟೆಯೊಳಗೆ ಚಿಕಿತ್ಸಾ ವೆಚ್ಚ ಪಾವತಿಸಲಾಗಿದೆ.
ಮುಂದುವರಿದು, ಈ ಯೋಜನೆಯಲ್ಲಿ ಚಿಕಿತ್ಸಾ ವೆಚ್ಚವನ್ನು CGHS ದರದಂತೆ ಪಾವತಿಸಲಾಗುವುದೆಂದು ತಿಳಿಸಿದ್ದು, CGHS ದರಪಟ್ಟಿಯಲ್ಲಿ ಇಲ್ಲದ ವಸ್ತುಗಳಾದ Consumables/ Non Admissible items ಗಳಿಗೆ ನೌಕರರೇ ಪಾವತಿಸುವಂತೆ ಈ ಮೊದಲು ತಿಳಿಸಲಾಗಿತ್ತು.
ಆದರೆ ಕೆಲವೊಂದು ವಸ್ತುಗಳು ಚಿಕಿತ್ಸೆಯ ಭಾಗವಾಗಿದ್ದು ಅವುಗಳನ್ನು ಹಾಗೂ ಅಲಂಕಾರಿಕ ವಸ್ತುಗಳನ್ನು ಹೊರತುಪಡಿಸಿ, ಇನ್ನುಳಿದ ಎಲ್ಲ ವಸ್ತುಗಳಿಗೆ CGHS ದರ ಪಟ್ಟಿಯಲ್ಲಿ ಒಳಗೊಂಡಿಲ್ಲವಾದರೂ ಸಹ (Consumables/ Non Admissible ವಸ್ತುಗಳ ಪ್ರತಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದೆ) ನೌಕರರಿಗೆ ಆರ್ಥಿಕ ಹೊರೆಯಾಗಬಾರದೆಂಬ ಆಶಯದಿಂದ ನಿಗಮದ ವತಿಯಿಂದ ಪಾವತಿಸಲು ತೀರ್ಮಾನಿಸಲಾಗಿದೆ.
ಶುಭಾಶಯಗಳೊಂದಿಗೆ
(ವಿ. ಅನ್ನುಕುಮಾರ್ ಭಾಆಸೇ..)
ವ್ಯವಸ್ಥಾಪಕ ನಿರ್ದೇಶಕರು ಎಂದು ಪತ್ರ ಬರೆಯುವ ಮೂಲಕ ಎಲ್ಲ ನೌಕರರೊಂದಿಗೂ ಖುಷಿಯನ್ನು ಶೇರ್ ಮಾಡಿಕೊಂಡಿದ್ದಾರೆ.
Related

You Might Also Like
ಪ್ರಯಾಣಿಕರಿಗೆ ವಿತರಿಸದ ಟಿಕೆಟ್ ಮೌಲ್ಯ ಶೂನ್ಯ: ಆದರೂ ನಿರ್ವಾಹಕರು ದಂಡಕಟ್ಟಬೇಕೆಂಬ ಅಸಂಬದ್ಧ ಸುತ್ತೋಲೆ!!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳ ನಿರ್ವಾಹಕರ ಪಾಲಿಗೆ ಮುಳ್ಳಾಗುವ ಒಂದು ನಿರ್ಧಾರವನ್ನು 2024ರ ಮೇ 3ರಂದು ಅಂದಿನ ಮುಖ್ಯ ಸಂಚಾರಿ ವ್ಯವಸ್ಥಾಪಕರು...
KSRTC: ಪ್ರಯಾಣಿಕ ಟಿಕೆಟ್ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ
2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ...
ವಿಧಾನಸೌಧ ಈಗ ಪ್ರವಾಸಿ ತಾಣ: ಸಾರ್ವಜನಿಕ ವೀಕ್ಷಣೆಗೆ ಮುಕ್ತ- ಯಾರಿಗೆ ಟಿಕೆಟ್ ಮತ್ತ್ಯಾರಿಗೆ ಉಚಿತ!
ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಒಮ್ಮೆಯಾದರೂ ನೋಡಬೇಕು ಎಂದು ರಾಜ್ಯದ ಅದೆಷ್ಟು ಮಂದಿ ಆಸೆಪಡುತ್ತಿದ್ದರು. ಅಲ್ಲಿಗೆ ನಾವು ಹೋಗುವುದು ಹೇಗೆ ಎಂದು ಹಲವರು ಹಳ್ಳಿಗಳ್ಳಲಿ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕೆ...
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...
ನಟ ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್...
NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ...
ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...