“ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ MD ಅನ್ಬುಕುಮಾರ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ “ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು ಇದೇ ಜ.6ರಂದು ಚಾಲನೆ ನೀಡಿದ್ದಾರೆ.
ಇನ್ನು ಈ ಯೋಜನೆಗೆ ಆಸ್ಪತ್ರೆಗಳು ಉತ್ತಮವಾಗಿ ಸ್ಪಂದಿಸಿದ್ದು ನೌಕರರು ಸಂತೋಷದಿಂದ ಸ್ವಾಗತಿಸಿರುವುದು ನಿಗಮಕ್ಕೆ ತೃಪ್ತಿ ತಂದಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಸಂತಸ ವ್ಯಕ್ತಪಡಿಸಿ ನೌಕರರಿಗೆ ಪತ್ರ ಬರೆದಿದ್ದಾರೆ.
ಆ ಪತ್ರದಲ್ಲಿ … ಆತ್ಮೀಯ ನೌಕರ ಬಾಂಧವರೇ,
ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂಬ ಸದುದ್ದೇಶದಿಂದ “ಕೆಎಸ್ಆರ್ಟಿಸಿ ಆರೋಗ್ಯ” ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು 06.01.2025 ರಂದು ಚಾಲನೆ ನೀಡಿದ್ದಾರೆ. ಈ ಯೋಜನೆಗೆ ಆಸ್ಪತ್ರೆಗಳು ಉತ್ತಮವಾಗಿ ಸ್ಪಂದಿಸಿದ್ದು ನೌಕರರು ಸಂತೋಷದಿಂದ ಸ್ವಾಗತಿಸಿರುವುದು ನಿಗಮಕ್ಕೆ ತೃಪ್ತಿ ತಂದಿರುತ್ತದೆ.
ಜನವರಿ 11ರವರೆಗೂ 41 ಮಂದಿ ಒಳರೋಗಿಗಳಾಗಿ ಹಾಗೂ 124 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಆರೋಗ್ಯ ಕಾರ್ಡ್ ಇಲ್ಲದೆಯೂ ನೌಕರರು ತಮ್ಮ PF Number ಹೇಳಿ ಚಿಕಿತ್ಸೆ ವಡೆಯಬಹುದಾಗಿದೆ.
ನಿಗಮದಲ್ಲಿ 33,288 ಅಧಿಕಾರಿ/ಸಿಬ್ಬಂದಿಗಳ ಪೈಕಿ 23,342 ಸಿಬ್ಬಂದಿಗಳಿಗೆ ಈಗಾಗಲೇ ಆರೋಗ್ಯ ಕಾರ್ಡ್ ವಿತರಿಸಲಾಗಿದ್ದು, ಉಳಿದ 9,946 ಸಿಬ್ಬಂದಿಗಳಿಗೆ ನಾಳೆ 12.01.2025 ರೊಳಗಾಗಿ ವಿತರಿಸಲಾಗುವುದು.
ಚಿಕಿತ್ಸಾ ವೆಚ್ಚವನ್ನು 30 ದಿನದೊಳಗಾಗಿ ಆಸ್ಪತ್ರೆಗಳಿಗೆ ಪಾವತಿಸಲಾಗುವುದೆಂದು ತಿಳಿಸಲಾಗಿತ್ತು. ಆದರೆ, ಎಲ್ಲ ಬಿಲ್ಲು/ ದಾಖಲೆಗಳು ಸರಿಯಾಗಿ ನಿಗದಿತ ಸಮಯದಲ್ಲಿ ಒದಗಿಸಿದ್ದಲ್ಲಿ 48 ಗಂಟೆಯೊಳಗೆ ಪಾವತಿಸಲು ಕ್ರಮ ವಹಿಸಲಾಗುವುದು. ಅದರಂತೆ ಈಗಾಗಲೇ 8 ಪ್ರಕರಣಗಳಿಗೆ 48 ಗಂಟೆಯೊಳಗೆ ಚಿಕಿತ್ಸಾ ವೆಚ್ಚ ಪಾವತಿಸಲಾಗಿದೆ.
ಮುಂದುವರಿದು, ಈ ಯೋಜನೆಯಲ್ಲಿ ಚಿಕಿತ್ಸಾ ವೆಚ್ಚವನ್ನು CGHS ದರದಂತೆ ಪಾವತಿಸಲಾಗುವುದೆಂದು ತಿಳಿಸಿದ್ದು, CGHS ದರಪಟ್ಟಿಯಲ್ಲಿ ಇಲ್ಲದ ವಸ್ತುಗಳಾದ Consumables/ Non Admissible items ಗಳಿಗೆ ನೌಕರರೇ ಪಾವತಿಸುವಂತೆ ಈ ಮೊದಲು ತಿಳಿಸಲಾಗಿತ್ತು.
ಆದರೆ ಕೆಲವೊಂದು ವಸ್ತುಗಳು ಚಿಕಿತ್ಸೆಯ ಭಾಗವಾಗಿದ್ದು ಅವುಗಳನ್ನು ಹಾಗೂ ಅಲಂಕಾರಿಕ ವಸ್ತುಗಳನ್ನು ಹೊರತುಪಡಿಸಿ, ಇನ್ನುಳಿದ ಎಲ್ಲ ವಸ್ತುಗಳಿಗೆ CGHS ದರ ಪಟ್ಟಿಯಲ್ಲಿ ಒಳಗೊಂಡಿಲ್ಲವಾದರೂ ಸಹ (Consumables/ Non Admissible ವಸ್ತುಗಳ ಪ್ರತಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದೆ) ನೌಕರರಿಗೆ ಆರ್ಥಿಕ ಹೊರೆಯಾಗಬಾರದೆಂಬ ಆಶಯದಿಂದ ನಿಗಮದ ವತಿಯಿಂದ ಪಾವತಿಸಲು ತೀರ್ಮಾನಿಸಲಾಗಿದೆ.
ಶುಭಾಶಯಗಳೊಂದಿಗೆ
(ವಿ. ಅನ್ನುಕುಮಾರ್ ಭಾಆಸೇ..)
ವ್ಯವಸ್ಥಾಪಕ ನಿರ್ದೇಶಕರು ಎಂದು ಪತ್ರ ಬರೆಯುವ ಮೂಲಕ ಎಲ್ಲ ನೌಕರರೊಂದಿಗೂ ಖುಷಿಯನ್ನು ಶೇರ್ ಮಾಡಿಕೊಂಡಿದ್ದಾರೆ.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...