NEWSನಮ್ಮಜಿಲ್ಲೆ

ಚೆಕ್‍ಪೋಸ್ಟ್‍ನಲ್ಲಿ ಕರ್ತವ್ಯ ಲೋಪ ಎಸಗಿದ 6 ನೌಕರರ ಅಮಾನತು

ಚಾಮರಾಜನಗರದ ಜಿಲ್ಲಾಧಿಕಾರಿ ಎಂ.ಆರ್‌. ರವಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಾಪಿಸಲಾಗಿರುವ ಚೆಕ್‍ಪೋಸ್ಟ್‍ನಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ ಹಾಗೂ ಪೂರ್ವಾನುಮತಿ ಪಡೆಯದೇ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಚೆಕ್‍ಪೋಸ್ಟ್ ಮೂಲಕ ಹಾದುಹೋಗಲು ಅವಕಾಶ ಕಲ್ಪಿಸಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಆರು ಮಂದಿ ನೌಕರರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಚೆಕ್‍ಪೋಸ್ಟ್‍ನಲ್ಲಿ ಮಾರ್ಚ್ 27ರಂದು ಮೊದಲನೇ ಹಾಗೂ ಎರಡನೇ ಪಾಳಿಯಲ್ಲಿ ಹೆಚ್ಚು ವಾಹನಗಳು ಹಾಗೂ ಜನರ ಸಂಚಾರ ಸಂಚಾರಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಎರಡೂ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಒಟ್ಟು ಆರು ನೌಕರರು ಅಮಾನತುಗೊಂಡಿದ್ದಾರೆ.

ಮೊದಲನೇ ಪಾಳಿಯಲ್ಲಿದ್ದ ಮುಕ್ಕಡಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಮಹದೇವಸ್ವಾಮಿ, ನಂಜದೇವನಪುರ ವೃತ್ತದ ಗ್ರಾಮ ಲೆಕ್ಕಿಗರಾದ ಸಂತೋಷ್‍ಕುಮಾರ್, ತಮ್ಮಡಹಳ್ಳಿ ವೃತ್ತದ ಗ್ರಾಮ ಲೆಕ್ಕಿಗರಾದ ಕೆ. ಶ್ರೀಧರ, ಎರಡನೇ ಪಾಳಿಯಲ್ಲಿದ್ದ ಮುಕ್ಕಡಹಳ್ಳಿ ಗ್ರಾಮ ಪಂಚಾಯಿತಿ ವಾಟರ್‍ಮ್ಯಾನ್ ನಂಜುಂಡಸ್ವಾಮಿ, ಕುಲಗಾಣ ವೃತ್ತದ ಲೆಕ್ಕಿಗರಾದ ಡಿ.ಜೆ. ಮಹೇಶ್, ಮುಕ್ಕಡಹಳ್ಳಿ ವೃತ್ತದ ಗ್ರಾಮ ಲೆಕ್ಕಿಗರಾದ ನಂದೀಶ್ ಅಮಾನತುಗೊಂಡ ನೌಕರರಾಗಿದ್ದಾರೆ.

ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಸರ್ಕಾರದ ಮಾರ್ಗಸೂಚಿಯನ್ವಯ ಜೀವನಾವಶ್ಯಕ ವಸ್ತುಗಳನ್ನು ಮಾತ್ರ ಚೆಕ್‍ಪೋಸ್ಟ್‍ಗಳ ಮೂಲಕ ಸಾಗಿಸಲು ಅವಕಾಶವಿದೆ. ಆದರೆ ಸೂಚನೆ ಉಲ್ಲಂಘಿಸಿ ಜಿಲ್ಲಾಧಿಕಾರಿಗಳ ಗಮನಕ್ಕೂ ತರದೇ, ಪೂರ್ವಾನುಮತಿ ಪಡೆಯದೇ ಮೊದಲೆರಡು ಪಾಳಿಯಲ್ಲಿ ನಿಯೋಜಿತರಾಗಿದ್ದ ನೌಕರರು ಚೆಕ್‍ಪೋಸ್ಟ್ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾದುಹೋಗಲು ಅವಕಾಶ ಕಲ್ಪಿಸಿದ ಹಿನ್ನಲೆಯಲ್ಲಿ ಕರ್ತವ್ಯ ಲೋಪವೆಂದು ಪರಿಗಣಿಸಿ ನಿಯೋಜಿತರಾಗಿದ್ದ ನೌಕರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ