ಬೆಂಗಳೂರು: ಅಕ್ರಮವಾಗಿ ಐದು ಕೋಟಿ ನಾಲ್ಕು ಲಕ್ಷ ರೂಪಾಯಿಗಳನ್ನು ಸ್ವಂತ ವಾಹನದಲ್ಲಿ ಸಾಗಿಸುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಮದ ಸಂಚಾರ ನಿರೀಕ್ಷಕ Traffic Inspector (TI) ಸೇರಿ ಇಬ್ಬರನ್ನು ಕೇರಳ ಪೊಲೀಸ್ ಅಧಿಕಾರಿಗಳ ತಂಡ ಹಣದ ಸಹಿತ ವಶಕ್ಕೆ ಪಡೆದಿದೆ.
ಕೆಕೆಆರ್ಟಿಸಿ ರಾಯಚೂರು ವಿಭಾಗದದಲ್ಲಿ ಡ್ಯೂಟಿ ಮಾಡುತ್ತಿರುವ ಸಂಚಾರ ನಿರೀಕ್ಷಕ ರಾಘವೇಂದ್ರ ಬಡಿಗೇರ್ ಹಾಗೂ ನಿತಿನ್ ಎಂಬುವರು ಮೇ 3ರಂದು ತಮ್ಮ ಕಾರಿನ ಸೀಟ್ ಕೆಳಗೆ ಅಕ್ರಮವಾಗಿ 5.04 ಕೋಟಿ ರೂ.ಗಳನ್ನು ಸಾಗಿಸುತ್ತಿದ್ದಾಗ ಕೇರಳ ಪೊಲೀಸ್ ಅಧಿಕಾರಿಗಳು ಕರ್ನಾಟಕ-ಕೇರಳ ಗಡಿಯಲ್ಲಿ ತಪಾಸಣೆ ಮಾಡಿದ್ದು ಈ ವೇಳೆ ಕಾರಿನಲ್ಲಿದ್ದ ಹಣವನ್ನು ವಶಕ್ಕೆ ಪಡೆದುಕೊಂಡು ಬಡಿಗೇರ್ ಹಾಗೂ ನಿತಿನ್ನನ್ನು ಬಂಧಿಸಿದ್ದಾರೆ.
ಇನ್ನು ಇಷ್ಟೊಂದು ಹಣವನ್ನು ಕರ್ನಾಟಕದಿಂದ ಕೇರಳಕ್ಕೆ ಏಕೆ ಸಾಗಿಸುತ್ತಿದ್ದರು, ಈ ಹಣಕ್ಕೆ ದಾಖಲೆಗಳಿವೆಯೆ ಇಲ್ಲವೇ ಎಂಬುದರ ಬಗ್ಗೆ ಸ್ಪಷ್ಟಮಾಹಿತಿ ಸಿಕ್ಕಿಲ್ಲ. ಆದರೆ ಒಂದು ಮೂಲದ ಪ್ರಕಾರ ಈ ಬಡಿಗೇರ್ ಸೇರಿದಂತೆ ಇವರ ಸಂಬಂಧಿಕರು ಚಿನ್ನಾಭರಣಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ ಎಂಬ ಮಾಹಿತಿ ಇದೆ.
ಅಲ್ಲದೆ ರಾಘವೇಂದ್ರ ಬಡಿಗೇರ್ ತಾವು ಡ್ಯೂಟಿ ಮಾಡುವ ಸ್ಥಳದಲ್ಲೂ ಚಿನ್ನಾಭರಣಗಳನ್ನು ಮಾಡಿಕೊಡುತ್ತೇವೆ ಎಂದು ಸಹೋದ್ಯೋಗಿಗಳಿಂದಲೂ ಕಂತಿನ ರೂಪದಲ್ಲಿ ಚೀಟಿ ವ್ಯವಹಾರ ಮಾಡಿ 5000 ರಿಂದ 10000 ರೂಪಾಯಿಗಳನ್ನು ಪ್ರತಿ ತಿಂಗಳು ಚೀಟಿದಾರ ಫಲಾನುಭವಿಗಳಿಂದ ಸಂಗ್ರಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಈ ರೀತಿ ಚೀಟಿ ವ್ಯವಹಾರ ಮಾಡಿ ಅದರಿಂದ ಸಂಗ್ರಹಗೊಂಡ ಹಣದಲ್ಲಿ ಚಿನ್ನವನ್ನು ಖರೀದಿಸಿ ಬಳಿಕ ಆ ಚಿನ್ನದಿಂದ ಚೀಟಿದಾರರ ಬೇಡಿಕೆಯಂತೆ ಓಲೆ, ರಿಂಗ್ (ಉಂಗುರ) ಮಾಂಗಲ್ಯ ಸರ ಸೇರಿ ಇತರೆ ಆಭರಣಗಳನ್ನು ಮಾಡಿಕೊಡುತ್ತಿದ್ದರು. ಈ ವ್ಯವಹಾರವನ್ನು ಹಲವಾರು ವರ್ಷಗಳಿಂದಲೂ ಮಾಡಿಕೊಂಡು ಬರುತ್ತಿದ್ದು ಇವರ ಜತೆ ಸಂಬಂಧಿಕರು ಸೇರಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಇದೇ ಮೇ3ರಂದು ಕೂಡ ಚಿನ್ನವನ್ನು ಖರೀದಿಸುವ ಸಲುವಾಗಿ ತಮ್ಮ ಕಾರಿನಲ್ಲಿ 5.04 ಕೋಟಿ ರೂಪಾಯಿಯನ್ನು ಕೇರಳಕ್ಕೆ ತೆಗೆದುಕೊಂಡು ಹೋಗುತ್ತಿದ್ದು, ಈ ವೇಳೆ ಕೇರಳ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಲುಕಿದ್ದಾರೆ ಎಂಬ ಅನುಮಾನ ವ್ಯಕ್ತಪಡಿಸಿದ್ದು, ಈ ಹಣಕ್ಕೆ ಯಾವುದೆ ದಾಖಲೆಗಳು ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.
ಸದ್ಯ ಈ ಸಂಬಂಧ ಕೇರಳ ಪೊಲೀಸರು ಅಕ್ರಮ ಹಣ ಸಾಗಣೆ ಪ್ರಕರಣ ದಾಖಲಿಸಿಕೊಂಡಿದ್ದು, ಹಣದ ಮೂಲವನ್ನು ಹುಡುಕುವ ಕ್ರಮ ತೆಗೆದುಕೊಂಡಿದ್ದಾರೆ.
Related

You Might Also Like
ಹೆಂಡತಿ, ಮಕ್ಕಳಿದ್ದರೂ ಅಜ್ಜಿಯ ಮೊಮ್ಮಳ ಮೋಹಿಸಿ ಮನೆ ಬಿಟ್ಟು ಬಂದ- ಜೈಲು ಸೇರಿದ ಪ್ರೇಮಿಗಳು
ಚಿಕ್ಕಬಳ್ಳಾಪುರ: ಮದುವೆಯಾಗಿ ಮಕ್ಕಳಿದ್ದರೂ ಮತ್ತೊಬ್ಬ ಯುವತಿ ಜೊತೆ ರಹಸ್ಯವಾಗಿ ಲೈಂಗಿಕ ಕ್ರಿಯೆ ನಡೆಸಿ ಆಕೆಯ ಗರ್ಭಿಣಿ ಮಾಡಿದ ಗೃಹಸ್ಥನ ವಿಷಯ ಊರಿಗೆ ಜನರಿಗೆ ಗೊತ್ತಾದ ಮೇಲೆ ಆಕೆಯೊಂದಿಗೆ...
ಮಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಬಾಲಕಿ ಮೃತಪಟ್ಟ ಆರೋಪ- ಪಾಲಕರು ಸಂಘಟನೆಗಳಿಂದ ಪ್ರತಿಭಟನೆ
ಮಂಡ್ಯ: ಪೊಲೀಸರ ನಿರ್ಲಕ್ಷ್ಯದಿಂದ ಮೂರುವರೆ ವರ್ಷದ ಬಾಲಕಿ ಅಸುನೀಗಿದ ಪ್ರಕರಣ ಮಾಸುವ ಮುನ್ನವೇ ಮಂಡ್ಯದಲ್ಲಿ 7 ವರ್ಷದ ಬಾಲಕಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ....
ಪ್ರಯಾಣಿಕರಿಗೆ ವಿತರಿಸದ ಟಿಕೆಟ್ ಮೌಲ್ಯ ಶೂನ್ಯ: ಆದರೂ ನಿರ್ವಾಹಕರು ದಂಡಕಟ್ಟಬೇಕೆಂಬ ಅಸಂಬದ್ಧ ಸುತ್ತೋಲೆ!!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳ ನಿರ್ವಾಹಕರ ಪಾಲಿಗೆ ಮುಳ್ಳಾಗುವ ಒಂದು ನಿರ್ಧಾರವನ್ನು 2024ರ ಮೇ 3ರಂದು ಅಂದಿನ ಮುಖ್ಯ ಸಂಚಾರಿ ವ್ಯವಸ್ಥಾಪಕರು...
KSRTC: ಪ್ರಯಾಣಿಕ ಟಿಕೆಟ್ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ
2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ...
ವಿಧಾನಸೌಧ ಈಗ ಪ್ರವಾಸಿ ತಾಣ: ಸಾರ್ವಜನಿಕ ವೀಕ್ಷಣೆಗೆ ಮುಕ್ತ- ಯಾರಿಗೆ ಟಿಕೆಟ್ ಮತ್ತ್ಯಾರಿಗೆ ಉಚಿತ!
ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಒಮ್ಮೆಯಾದರೂ ನೋಡಬೇಕು ಎಂದು ರಾಜ್ಯದ ಅದೆಷ್ಟು ಮಂದಿ ಆಸೆಪಡುತ್ತಿದ್ದರು. ಅಲ್ಲಿಗೆ ನಾವು ಹೋಗುವುದು ಹೇಗೆ ಎಂದು ಹಲವರು ಹಳ್ಳಿಗಳ್ಳಲಿ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕೆ...
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...