7ನೇ ವೇತನ ಆಯೋಗದಂತೆ ಸಂಬಳ ಕೊಟ್ಟರೆ ಅದು KSRTC ಅಧಿಕಾರಿಗಳಿಗಷ್ಟೇ ಸೀಮಿತವಾಗಲ್ಲ ನೌಕರರಿಗೂ ಸಿಗುತ್ತದೆ!

ಬೆಂಗಳೂರು: ಸಾರಿಗೆ ಅಧಿಕಾರಿಗಳಿಗಷ್ಟೇ 7ನೇ ವೇತನ ಆಯೋಗದ ಮಾದರಿಯಲ್ಲಿ ಸಂಬಳ ಕೊಡಿ ಎಂದಷ್ಟೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಕೆಎಸ್ಆರ್ಟಿಸಿ ಆಫೀಸರ್ಸ್ ವೆಲ್ಫೇರ್ ಅಸೋಶಿಯೇಶನ್ ಪದಾಧಿಕಾರಿಗಳು ಒತ್ತಾಯಿಸಿಲ್ಲ ಅಧಿಕಾರಿಗಳು/ಸಿಬ್ಬಂದಿಗಳು/ನೌಕರರಿಗೂ ಕೊಡಿ ಎಂದೇ ವಿವರಿಸಿದ್ದಾರೆ.
ಆದರೆ, ಕೆಲ ನೌಕರರು ಅದನ್ನು ಸರಿಯಾಗಿ ತಿಳಿದುಕೊಳ್ಳದೆ ಇದು ಬರಿ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಬಿಂಬಿಸುತ್ತಿದ್ದಾರೆ. ನೋಡಿ ಇದು ಹೇಳಿ ಕೇಳಿ ಆಫೀಸರ್ಸ್ ವೆಲ್ಫೇರ್ ಅಸೋಶಿಯೇಶನ್ ಆಗಿರುವುದರಿಂದ ಈ ರೀತಿ ಮನವಿ ಸಲ್ಲಿಸುವುದು ಸಾಮಾನ್ಯ.
ಈ ಮನವಿ ಸಲ್ಲಿಸುವ ವೇಳೆ 15 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ ಅದನ್ನು ನೌಕರರು ಗಮನಿಸಬೇಕು. ಸಂಸ್ಥೆಯನ್ನು ಆರ್ಥಿಕವಾಗಿ ಸದೃಢಗೊಳಿಸುವಲ್ಲಿ ಸರಕಾರದ ಹಾಗೂ ನೌಕರರ ಪಾತ್ರ ಅಪಾರವಾಗಿದ್ದು, ತನ್ನ ಕಾಲ ಮೇಲೆ ತಾನು ನಿಲ್ಲಲು, ಇದರಲ್ಲಿ ಕೇವಲ ಒಂದು ವರ್ಗದ ಹಿತಾಸಕ್ತಿ ಇರುವುದಿಲ್ಲ, ಎಲ್ಲ ವರ್ಗದ ಅಧಿಕಾರಿ/ಸಿಬ್ಬಂದಿ/ನೌಕರರ ಹಾಗೂ ಅವರ ಕುಟುಂಬದವರ ಜೀವನದ ಪ್ರಶ್ನೆಯಾಗಿರುವುದಲ್ಲದೇ ಹಾಗೂ ನಾಡಿನ ಜನತೆಯ ಜೀವನಾಡಿಯಾದ ಸಾರಿಗೆ ಸಂಸ್ಥೆಯ ಉಳಿವಿನ ಪ್ರಶ್ನೆಯೂ ಇದಾಗಿದೆ.
ಸರಕಾರ ಈ ಇಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡಲ್ಲಿ ಮಾತ್ರ. ಈ ಮುಳಗುತ್ತಿರುವ ಹಡಗು ಮತ್ತೆ ಪ್ರಯಾಣಿಸಲು ಸಾಧ್ಯ. ಕಾರಣ ಈ ಸಲಹೆಗಳನ್ನು ಕಾರ್ಯರೂಪಕ್ಕೆ ತರಲು ಹಾಗೂ ಅಧಿಕಾರಿಗಳ ಬೇಡಿಕೆ ಈಡೇರಿಸಿ ಅವರ ಮನೋಸ್ಥೆರ್ಯ ಹೆಚ್ಚಿಸಲು ತಮ್ಮಲ್ಲಿ ಈ ಮೂಲಕ ಕೋರುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಜತೆಗೆ ಸಂಸ್ಥೆಯಲ್ಲಿ ಅಧಿಕಾರಿಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುವ ಅನಿವಾರ್ಯವಿದ್ದು, ಸಹಜವಾಗಿ ಆನಾರೊಗ್ಯಕ್ಕೆ ತುತ್ತಾಗುತ್ತಿದ್ದು, ಇಂತಹ ಸಂದರ್ಭಗಳಲ್ಲಿ ವೈದ್ಯಕೀಯ ವೆಚ್ಚಗಳನ್ನು ಮುರುಪಾವತಿಸಲು ಹಾಲಿ ನಿಯಮಗಳಲ್ಲಿ ಹಲವಾರು ನಿರ್ಬಂಧಗಳಿದ್ದು, ಹಾಲಿ ನಿರ್ಬಂಧಗಳನ್ನು ಸಡಿಲಗೊಳಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಾವುದೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಸಂದರ್ಭಗಳಲ್ಲಿ CGHS ದರಗಳನ್ವಯ ಅವರುಗಳಿಗೆ ವೈದ್ಯಕೀಯ ವೆಚ್ಚ ಮರುಪಾವತಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಅಂದರೆ ಇಲ್ಲಿ ಅಧಿಕಾರಿಗಳಿಗೆ ಮಾತ್ರ ವೈದ್ಯಕೀಯ ಸೌಲಭ್ಯ ಕೊಡಿ ಎಂದು ಅವರು ಹೇಳಿಲ್ಲ ಸಿಬ್ಬಂದಿಗಳಿಗೂ ಕೊಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಇದನ್ನು ತಪ್ಪಾಗಿ ತಿಳಿದುಕೊಂಡು ಇಲ್ಲ ಸಲ್ಲದ ರೀತಿ ಆರೋಪ ಮಾಡುವುದು ನೌಕರರಿಗೆ ಬುದ್ಧಿ ಇಲ್ಲ ಎಂಬುದನ್ನು ತೋರಿಸುತ್ತದೆ. ಹಾಗಾಗಿ ಆರೋಪ ಮಾಡುವ ಮುನ್ನ ಯೋಚಿಸಿ ತಿಳಿದುಕೊಂಡು ಬಳಿಕ ಆರೋಪ ಮಾಡಿ ಎಂದು ನೌಕರರೇ ಅಸಮಾಧಾನದಿಂದ ತಿಳಿ ಹೇಳುತ್ತಿದ್ದಾರೆ.
ಇನ್ನು ಈವರೆಗೂ ವೇತನ ಅಥವಾ ಸಂಸ್ಥೆಯಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಕಳೆದ 40 ವರ್ಷಗಳಿಂದಲೂ ಒಂದೇಒಂದು ಮನವಿಯನ್ನು ಕೊಡದ ಅಧಿಕಾರಿಗಳ ಸಂಘ ಈಗ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿಕೊಡಬೇಕು ಎಂದು ಮುಂದೆ ಬಂದು ಸರ್ಕಾರಕ್ಕೆ ಮತ್ತು ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದೆ ಎಂದರೆ ಆ ಮನವಿಯಿಂದ ಕೇವಲ ಅಧಿಕಾರಿಗಳಿಗಷ್ಟೇ ಲಾಭವಾಗುವುದಿಲ್ಲ ಸಮಸ್ತ ನಾಲ್ಕೂ ನಿಗಮಗಳ ನೌಕರರಿಗೂ ಲಾಭವಾಗುತ್ತದೆ. ಇದನ್ನು ಮೊದಲು ತಿಳಿದುಕೊಳ್ಳಿ.
ಕಾರಣ ಈವರೆಗೂ ನೌಕರರು ವೇತನ ಹೆಚ್ಚಳದ ಸಮಯದಲ್ಲಿ ಹೋರಾಟ ಮಾಡಿ ವೇತನ ಹೆಚ್ಚಾದಾಗ ಅದು ಅಧಿಕಾರಿಗಳಿಗೂ ಅನ್ವಯವಾಗುತ್ತಿತ್ತು. ಅದರಂತೆ ಈಗ 7 ನೇ ವೇತನ ಆಯೋಗ ಜಾರಿಯಾದರೆ ಅದು ನೌಕರರಿಗೂ ಅನ್ವಯಿಸಲಿದೆ. ಆದರೆ ನೌಕರರ ಪರ ಸಂಘಟನೆಗಳು ಎಂದು ಹೇಳಿಕೊಳ್ಳುವ ಮುಖಂಡರು ಮಧ್ಯೆ ಕಡ್ಡಿಯಾಡಿಸಬಾರು ಅಷ್ಟೆ.
ಇಲ್ಲ ಅಧಿಕಾರಿಗಳನ್ನು ಒಂದು ಗುಂಪು ಮಾಡಿ ನೌಕರರನ್ನು ಮತ್ತೊಂದು ಗುಂಪು ಮಾಡಿ ನೌಕರರಿಗೆ ಅಗ್ರಿಮೆಂಟ್ ಮೂಲಕವೇ ವೇತನಕೊಡಿ ಎಂದು ಕೇಳಬಾರದು. ಅಧಿಕಾರಿಗಳಿಗೆ ಏನು ಕೊಡುತ್ತೀರೋ ಅದೇ ರೀತಿ ನೌಕರರಿಗೂ ಕೊಡಬೇಕು ಎಂದು ಒತ್ತಾಯಿಸಬೇಕು. ಈ ಒತ್ತಾಯ ಮಾಡದಿದ್ದರೂ ಅಧಿಕಾರಿಗಳಿಗೆ ಸಿಗುವ ಸೌಲಭ್ಯಗಳು ತನ್ತಾನೆ ನೌಕರರಿಗೂ ಜಾರುಯಾಗುತ್ತವೆ.
ಇನ್ನು ನಾಲ್ಕೂ ಸಾರಿಗೆ ನಿಗಮಗಳಲ್ಲಿ ಸಂಸ್ಥೆಯ ಮಂಡಳಿಗಳಿದ್ದು, ಈ ಮಂಡಳಿಗಳಿಗೆ ಸರ್ಕಾರದಿಂದ ನೇಮಿಸಲ್ಪಟ್ಟ ಅಧಿಕಾರಿ/ಅಧಿಕಾರೇತರ ನಿರ್ದೇಶಕರು ಇದ್ದು, ಸಂಸ್ಥೆಯ ನಿಲುವುಗಳ ಬಗ್ಗೆ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಆದರೆ, ಸಂಸ್ಥೆಯ ನಿಲುವುಗಳನ್ನು ಪರಿಣಾಮಕಾರಿಯಾಗಿ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗುವಂತೆ, ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ನಾಮನಿರ್ದೇಶನಗೊಂಡ ಒಬ್ಬ ಅಧಿಕಾರಿಯನ್ನು ಹಾಗೂ ನೌಕರರ ವರ್ಗದವರಿಂದ ನಾಮನಿರ್ದೇಶನಗೊಂಡ ಒಬ್ಬ ನೌಕರನನ್ನು ಸಂಸ್ಥೆಯ ನಿರ್ದೇಶಕ ಮಂಡಳಿಗೆ ನಾಮನಿರ್ದೇಶನ ಮಾಡಬೇಕು ಇದರಿಂದ ಅಧಿಕಾರಿಗಳ ಹಾಗೂ ನೌಕರರ ಹಿತ ಕಾಪಾಡಲು ಸಾಧ್ಯವಾಗುತ್ತದೆ ಎಂದು ಮನವಿಯಲ್ಲಿ ಅಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದಾರೆ.
ಅಂದರೆ ಇದೆಲ್ಲ ಬರಿ ಅಧಿಕಾರಿಗಳಿಗಾಗಿ ಸಲ್ಲಿಸಿರುವ ಮನವಿ ಪತ್ರವೇ? ಅಲ್ಲತಾನೆ. ಇದು ನೌಕರರಿಗೂ ಅನುಕೂಲವಾಗಲಿದೆ ಎಂದು ಇಲ್ಲಿ ಅಧಿಕಾರಿಗಳು ನೌಕರರು ಎಂಬ ಬೇಭಾವವಿಲ್ಲದೆ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಮನವಿ ಸಲ್ಲಿಸಿದೆ. ಈ ಮೂಲಕ ಕಳೆದ 40 ವರ್ಷಗಳಿಂದ ಹೋರಾಟವೇ ಬೇಡ ಎನ್ನುತ್ತಿದ್ದ ಅಧಿಕಾರಿಗಳು ನ್ಯಾಯಕ್ಕಾಗಿ ಬೀದಿಗಿಳಿಯುವ ಎಚ್ಚರಿಕೆ ನೀಡಿದ್ದಾರೆ. ಇದರಿಂದ ನೌಕರರಿಗೂ ಲಾಭವಾಗುತ್ತದೆ. ಹೀಗಾಗಿ ಇಲ್ಲ ಸಲ್ಲದನ್ನು ಊಹಿಸಿಕೊಂಡು ನಿಮ್ಮ ಕಾಲ ಮೇಲೆ ನೀವೆ ಕಲ್ಲಾಕಿಕೊಳ್ಳಬೇಡಿ ಎಂದುವುದು ನಮ್ಮ ಕಳಕಳಿ.
ಇನ್ನು ನಮ್ಮ ಬೇಡಿಕೆಗಳು ಈಡೇರದಿದ್ದರೆ ನೌಕರರು ವೇತನ ಸಂಬಂಧ ಹೋರಾಟಕ್ಕೆ ಇಳಿಯುವ ಮನ್ನವೇ ನಾವೇ ಮುಂದಾಗುತ್ತೇವೆ ಎಂಬ ಸಂದೇಶ ರವಾನಿಸಿದ್ದಾರೆ. ಇದರಿಂದ ಅಧಿಕಾರಿಗಳು ಮತ್ತು ನೌಕರರು ಒಗ್ಗಟ್ಟಿನಿಂದ ಸೌಲಭ್ಯ ಪಡೆಯುವುದಕ್ಕೆ ವೇದಿಕೆ ಸಿದ್ಧವಾಗುತ್ತಿದೆ ಎಂಬ ಮುನ್ಸೂಚನೆ ಕಾಣುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಿ, ಅದನ್ನು ಬಿಟ್ಟು ಮೂರ್ಖರಂತೆ ನಡೆದುಕೊಳ್ಳಬೇಡಿ.
Related

You Might Also Like
ಪ್ರಯಾಣಿಕರಿಗೆ ವಿತರಿಸದ ಟಿಕೆಟ್ ಮೌಲ್ಯ ಶೂನ್ಯ: ಆದರೂ ನಿರ್ವಾಹಕರು ದಂಡಕಟ್ಟಬೇಕೆಂಬ ಅಸಂಬದ್ಧ ಸುತ್ತೋಲೆ!!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳ ನಿರ್ವಾಹಕರ ಪಾಲಿಗೆ ಮುಳ್ಳಾಗುವ ಒಂದು ನಿರ್ಧಾರವನ್ನು 2024ರ ಮೇ 3ರಂದು ಅಂದಿನ ಮುಖ್ಯ ಸಂಚಾರಿ ವ್ಯವಸ್ಥಾಪಕರು...
KSRTC: ಪ್ರಯಾಣಿಕ ಟಿಕೆಟ್ ಕಳೆದು ಕೊಂಡರೆ ನಿರ್ವಾಹಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ-ಎಂಡಿ ಆದೇಶ
2020 ಫೆಬ್ರವರಿ 20ರಂದು ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದಾರೆ ಬೆಂಗಳೂರು: ಪ್ರಯಾಣಿಕರು ಟಿಕೆಟ್ ಕಳೆದುಕೊಂಡ ಪಕ್ಷದಲ್ಲಿ ತನಿಖಾದಿಕಾರಿಗಳು ವಾಹನವೂ ತಪಾಸಣಾ ಗೋಳಪಡಿಸಿದಾಗ...
ವಿಧಾನಸೌಧ ಈಗ ಪ್ರವಾಸಿ ತಾಣ: ಸಾರ್ವಜನಿಕ ವೀಕ್ಷಣೆಗೆ ಮುಕ್ತ- ಯಾರಿಗೆ ಟಿಕೆಟ್ ಮತ್ತ್ಯಾರಿಗೆ ಉಚಿತ!
ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಒಮ್ಮೆಯಾದರೂ ನೋಡಬೇಕು ಎಂದು ರಾಜ್ಯದ ಅದೆಷ್ಟು ಮಂದಿ ಆಸೆಪಡುತ್ತಿದ್ದರು. ಅಲ್ಲಿಗೆ ನಾವು ಹೋಗುವುದು ಹೇಗೆ ಎಂದು ಹಲವರು ಹಳ್ಳಿಗಳ್ಳಲಿ ಮಾತನಾಡಿಕೊಳ್ಳುತ್ತಿದ್ದರು. ಅದಕ್ಕೆ...
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...
ನಟ ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್...
NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ...
ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...