ಸಾರಿಗೆ ಬಸ್ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್ ಎಂದಳು!!

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ಸನ್ನು ವಿಜಯಪುರದಲ್ಲಿ ಹತ್ತಿದ ಮಹಿಳೆಯೊಬ್ಬರು ತನ್ನ ನಿಲ್ದಾಣ ಬರುವ ಮೊದಲೇ ಅರ್ಧದಲ್ಲೇ ಬಸ್ ಇಳಿಯಲು ಮುಂದಾಗಿದ್ದಾರೆ ಈ ವೇಳೆ ನಿರ್ವಾಹಕರು ನಮಗೆ ತೊಂದರೆ ಆಗುತ್ತದೆ ನೀವು ಎಲ್ಲಿಗೆ ಟಿಕೆಟ್ ಪಡೆದುಕೊಂಡಿದ್ದೀರೋ ಅಲ್ಲೇ ಇಳಿಯ ಬೇಕು ಎಂದು ಹೇಳಿದ್ದಾರೆ.
ಅಷ್ಟಕ್ಕೆ ಆ ಮಹಿಳೆ ಮನೆಯಲ್ಲಿದ್ದ ತಮ್ಮವರನ್ನು ಕರೆಸಿಕೊಂಡು ಅವಾಜ್ ಹಾಕಿದ್ದಾರೆ. ಅಲ್ಲದೆ ಈ ವೇಳೆ ಅರ್ಧದಲ್ಲೇ ಬಸ್ ಇಳಿದ ಮಹಿಳೆ ಪರ ನಿಂತ ಮತ್ತೊಬ್ಬ ಮಹಿಳೆ ನಾಉ ಪೊಲೀಸ್ ಇದ್ದೀನಿ ಏನು ಮಾಡುವುದು ಕೆಲವೊಮ್ಮೆ ಅರ್ಧದಲ್ಲೇ ಇಳಿಯಬೇಕಾಗುತ್ತದೆ ಎಂದು ಆಕೆ ಪರ ಬ್ಯಾಟ್ ಬೀಸಿದ್ದಾರೆ.
ಅದಕ್ಕೆ ಬಸ್ನಲ್ಲಿದ್ದ ಪ್ರಯಾಣಿಕರೊಬ್ಬರು ನಿಮ್ಮ ಡಿಪಾರ್ಟ್ಮೆಂಟ್ನಲ್ಲಿ ಇದ್ದೋರು ಹೀಗೆ ಮಾತನಾಡುವುದಕ್ಕೆ ಹೇಳುತ್ತಾರೆ ಎಂದು ನಾಣು ಪೊಲೀಸ್ ಎಂದ ಮಹಿಳೆಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿದ ಆಕೆ ವಿಡಿಯೋ ಮಾಡುತ್ತಿದ್ದೀಯ ಎಂದು ಬಂದು ಫೋನ್ ಕಸಿಕೊಂಡಿದ್ದಾರೆ.
ಇದು ನಡೆದಿರುವುದು ಚಡಚಣ ಇಲಕಲ್ಲ ಮಾರ್ಗಮಧ್ಯೆ ಸಂಗಮ ಕ್ರಾಸ್ ಬಳಿ. ಮಹಿಳಾ ಪ್ರಯಾಣಿಕರು ವಿಜಯಪುರದಿಂದ ಇಲಕಲ್ಗೆ ಟಿಕೆಟ್ ಪಡೆದು ಮಾರ್ಗಮಧ್ಯೆ ಅಂದರೆ ಸಂಗಮ ಕ್ರಾಸ್ ಬಳಿ ಇಳಿಯಲು ಪ್ರಯತ್ನಿಸಿದರು.
ಆಗ ನಿರ್ವಾಹಕರು ನಡುವೆ ಇಳಿಬೇಡಿ ಅಂದಾಗ ಮನೆಯಲ್ಲಿದ್ದ ಪುರುಷರನ್ನು ಕರೆಸಿ ಚಾಲಕ ನಿರ್ವಾಹಕರಿಗೆ ಬೆದರಿಕೆ ಹಾಕಿ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಪುರುಷರೊಂದಿಗೆ ಬಂದಿದ್ದ ಪೊಲೀಸ್ ಎಂದು ಹೇಳಿಕೊಂಡ ಮಹಿಳೆಯೂ ಚಾಲನಾ ಸಿಬ್ಬಂದಿಗೆ ಏನು ಮಾಡೋಕಾಗುತ್ತೆ ಇಳಿಯಲೇ ಬೇಕು ಎಂದು ಹೇಳಿದ್ದಾರೆ.
ಇಂತಹ ಘಟನೆಗಳು ಪ್ರತಿದಿನ ನಡೆಯುತ್ತಿದ್ದೂ ಚಾಲನಾ ಸಿಬ್ಬಂದಿಗಳು ಭಯದ ವಾತಾವರಣದಲ್ಲೇ ಕರ್ತವ್ಯ ನಿರ್ವಹಿಸುವಂತಾಗಿದೆ. ಆದಕಾರಣ ಆಡಳಿತ ಮತ್ತು ಅಧಿಕಾರಿ ವರ್ಗದವರು ಚಾಲಕ, ನಿರ್ವಾಹಕರಿಗೆ ಸಣ್ಣ ಸಣ್ಣ ತಪ್ಪಿಗೂ ಶಿಕ್ಷೆ ವಿಧಿಸುವಂತೆ ತಪ್ಪು ಮಾಡಿದ ಪ್ರಯಾಣಿಕರಿಗೂ ಗಂಭೀರ ಪ್ರಕರಣ ದಾಖಲಿಸಬೇಕು ಎಂದು ಪ್ರಯಾಣಿಕರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಿನ ಪರಿಸ್ಥಿತಿ ನೋಡಿದ್ರೆ ಭಾರಿ ಆತಂಕವಾಗುತ್ತಿದೆ ಎಂದು ಚಾಲನಾ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಾರಿಗೆ ಸಚಿವರು ಗಮನಹರಿಸಿ ಇಂಥ ಪ್ರಕರಣಗಳಿಂದ ಮುಕ್ತ ನೀಡಬೇಕಿದೆ.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...