CrimeNEWSನಮ್ಮಜಿಲ್ಲೆ

KSRTC ಓವರ್‌ ಟೇಕ್‌ ಮಾಡುವ ವೇಳೆ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್‌ಗಳ ನಡುವೆ ಓವರ್​ ಟೇಕ್ ಮಾಡುವಾಗ ಘರ್ಷಣೆ ಸಂಭಿಸಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದ ಘಟನೆ ತುಮಕೂರು ರಾಷ್ಟ್ರೀಯ ಹೆದ್ದಾರಿಯ ಮಾದಾವರದ ಬಳಿ ಇಂದು ಮುಂಜಾನೆ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಎಲ್ಲ ಪ್ರಯಾಣಿಕರು ಪಾರಾಗಿದ್ದಾರೆ. ಮಾದಾವರದ ಹೆದ್ದಾರಿಯಲ್ಲಿ ಒಂದು ‌ಕೆಎಸ್​ಆರ್​‌ಟಿಸಿ ಬಸ್ ಅನ್ನು, ಇನ್ನೊಂದು ಬಸ್​ ಓವರ್ ಟೇಕ್ ಮಾಡುತ್ತಿತ್ತು. ಆಗ ಎರಡು ಬಸ್​ಗಳ ನಡುವೆ ಭಯಾನಕ ಅಪಘಾತವಾಗಿದೆ. ಇದರಿಂದ ಎರಡು ಬಸ್​ಗಳು ಮೇಲು ಸೇತುವೆಯ ಡಿವೈಡರ್​​ಗೆ ಡಿಕ್ಕಿ ಹೊಡೆದು ಹೆದ್ದಾರಿಗೆ ಅಡ್ಡವಾಗಿ ನಿಂತಿವೆ.

ಈ ಅವಘಡದಿಂದ ಬೇರೆ ವಾಹನಗಳು ಹೆದ್ದಾರಿಯಲ್ಲಿ ಚಲಿಸದಂತೆ ಆಗಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇಂದು ಭಾನುವಾರವಾದ್ದರಿಂದ ತೀರ್ಥ ಕ್ಷೇತ್ರಕ್ಕೆ, ದೇವಾಲಯಗಳಿಗೆ ಹೋಗುತ್ತಿದ್ದ ಸವಾರರು, ಪ್ರಯಾಣಿಕರಿಗೆ ಬಸ್​ಗಳ ಅಪಘಾತದಿಂದ ಟ್ರಾಫಿಕ್ ಬಿಸಿ ತಟ್ಟಿದೆ‌.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ