NEWSನಮ್ಮಜಿಲ್ಲೆ

ಕೋವಿಡ್ -19 ಪರಿಹಾರ ನಿಧಿ: ಆನ್ ಲೈನ್‌ನಲ್ಲೇ ದೇಣಿಗೆ ನೀಡಿ

ಸಾರ್ವಜನಿಕರಲ್ಲಿ ಧಾರವಾಡ  ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆ ಅರ್ಪಿಸಲು ಬಯಸುವ ಸಾರ್ವಜನಿಕರು ಖುದ್ದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡದೇ,  ತಮ್ಮ  ಆರೋಗ್ಯದ ಹಿತದೃಷ್ಟಿಯಿಂದ ಆನ್ ಲೈನ್   ಮೂಲಕವೇ  ಉದಾರ ನೆರವು ನೀಡಬಹುದು. ಇದಕ್ಕಾಗಿ ಮನೆಗಳಿಂದ ಹೊರಬರುವುದು ಬೇಡ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ವೈದ್ಯೋಪಚಾರವನ್ನು ಸರ್ಕಾರದಿಂದ ಮಾಡಲಾಗುತ್ತಿದೆ. ರೋಗವನ್ನು ಪತ್ತೆ ಹಚ್ಚಲು ಹುಬ್ಬಳ್ಳಿಯ ಕಿಮ್ಸ್ ನಲ್ಲಿಯೂ  ಪ್ರಯೋಗಾಲಯ ಸ್ಥಾಪಿಸಲು  ಸರ್ಕಾರ ಕ್ರಮ ಕೈಗೊಂಡಿದೆ. ಸೋಂಕು ಹರಡದಂತೆ ಸಾರ್ವಜನಿಕರು ಸರ್ಕಾರದೊಂದಿಗೆ ಕೈಜೋಡಿಸಬೇಕು. ಮತ್ತು ಸರ್ಕಾರ ನೀಡುವ ಪ್ರತಿಯೊಂದು ಸೂಚನೆಗಳನ್ನು ಪಾಲಿಸಬೇಕು ಎಂದರು.

ಕೋವಿಡ್ – 19 ಕೊರೊನಾ ಸೋಂಕು  ರೋಗವನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ಯುದ್ಧೋಪಾದಿಯಲ್ಲಿ  ಕ್ರಮ ಕೈಗೊಳ್ಳುತ್ತಿದೆ. ಈ ಕಾರ್ಯಕ್ಕೆ ದೇಣಿಗೆ ಸಲ್ಲಿಸಲು ಬಯಸುವವರು ಸಾಧ್ಯವಾದಷ್ಟು  ಚೆಕ್ ಅಥವಾ ಡಿಡಿ ರೂಪದಲ್ಲಿ ನೀಡದೇ, ಮುಖ್ಯಮಂತ್ರಿಯವರ  ಪರಿಹಾರ ನಿಧಿ ಕೋವಿಡ್ -19 ಎಸ್.ಬಿ.ಐ.  (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ)  ವಿಧಾನ ಸೌಧ ಶಾಖೆಯ ಖಾತೆ ಸಂಖ್ಯೆ 39234923151, ಐ.ಎಫ್.ಸಿ. ಕೋಡ್ SBIN0040277ಮತ್ತು MIRCಸಂಖ್ಯೆ 560002419 ಸಂಖ್ಯೆಗೆ ಆನ್ ಲೈನ್ ನಲ್ಲಿ ಇ-ಪೇಮೆಂಟ್ ಮೂಲಕ ಸಂದಾಯ ಮಾಡಿ, ಅದರ ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ [email protected] ಇಮೇಲ್ ವಿಳಾಸಕ್ಕೆ, ಮಾಹಿತಿ ಮತ್ತು ಪಾಸ್ ಪೋರ್ಟ್ ಭಾವಚಿತ್ರ ಕಳಿಸಿದರೆ ಅವುಗಳನ್ನು ಮಾಧ್ಯಮಗಳಲ್ಲಿ ಪ್ರಕಟಣೆಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ಕಾಗಿ ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ವೈಯಕ್ತಿಕವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬರುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ,  ಆರೋಗ್ಯ ಸಂರಕ್ಷಣೆಗೆ ಒತ್ತು ನೀಡಬೇಕು  ಎಂದು ಕೋರಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ