NEWSನಮ್ಮಜಿಲ್ಲೆನಮ್ಮರಾಜ್ಯ

BMTC ನಿಗಮದ ಬಸ್‌ ಉಳಿಸಿದ ಚಾಲಕ ಗೌರೀಶ್‌ಗೆ ₹10 ಸಾವಿರ ಬಹುಮಾನ ನೀಡಿ ಸನ್ಮಾನಿಸಿದ ಎಂಡಿ ಸತ್ಯವತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಘಟಕ-26ರ ಚಾಲಕನ ಧೈರ್ಯವನ್ನು ಮೆಚ್ಚಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನಗದು ಬಹುಮಾನ ಮತ್ತು ಪ್ರಶಂಸನ ಪತ್ರ ನೀಡಿ ಗೌರವಿಸಿದ್ದಾರೆ.

ನಿನ್ನೆ ಡಿ.4ರ ಸೋಮವಾರ ಬೆಳಗ್ಗೆ 9ಗಂಟೆ ಸುಮಾರಿನಲ್ಲಿ ಘಟಕದ ವಾಹನಕ್ಕೆ ಹಿಂದಿನಿಂದ ಬಂದ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ. ಬಸ್ಸಿನ ಕೆಳಭಾಗದಲ್ಲಿ ಸಿಕ್ಕಿಕೊಂಡು ಘರ್ಷಣೆಯಿಂದ ಬೆಂಕಿ ಹತ್ತಿಕೊಂಡು ಉರಿಯುತ್ತಿದ್ದ ಕಾರಿನಿಂದ ಬಸ್ಸನ್ನು ಬೇರ್ಪಡಿಸಲು ಚಾಲಕ ಗೌರೀಶ್ ಪ್ರಾಣದ ಹಂಗುತೊರೆದು ಬಸ್‌ ಚಾಲನೆ ಮಾಡಿ ಬಸ್ಸನ್ನು ರಕ್ಷಿಸಿದ್ದರು.

ಗೌರೀಶ್‌ ಅವರು ಧೈರ್ಯದಿಂದ ಎದೆಗುಂದದೆ ಸಮಯ ಪ್ರಜ್ಞೆ ಮೆರೆದು ನಿಗಮದ ಆಸ್ತಿಯನ್ನು ರಕ್ಷಿಸಿ ಲಕ್ಷಾಂತರ ರೂ.ಗಳನ್ನು ಉಳಿಸುವ ಜತೆಗೆ ಭಾರಿ ಅನಾಹುತವನ್ನು ತಪ್ಪಿಸಿದ್ದರು. ಹೀಗಾಗಿ ಅವರ ಧೈರ್ಯವನ್ನು ಮೆಚ್ಚಿ ಇಂದು ನಿಗಮದ ಕೇಂದ್ರ ಕಚೇರಿಯಲ್ಲಿ ಅವರಿಗೆ 10 ಸಾವಿರ ರೂಪಾಯಿ ನಗದು ಬಹುಮಾನದ ಜತೆಗೆ ಪ್ರಶಂಸನ ಪತ್ರನೀಡಿ ಸನ್ಮಾನಿಸಿದರು.

ಚಾಲಕ ಗೌರೀಶ್ ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು. ಇನ್ನು ನಿಗಮದ ಎಂಡಿ ಜಿ.ಸತ್ಯವತಿ ಅವರು ಕೂಡ ಚಾಲಕನ ಉತ್ತಮ ಸೇವೆಯನ್ನು ಶ್ಲಾಘಿಸಿದ್ದು ಇದು ಇತರರಿಗೂ ಮಾದರಿಯಾಗಬೇಕು ಎಂದು ಉದ್ದೇಶದಿಂದ ಗೌರೀಶ್‌ ಅವರ ಧೈರ್ಯ ಮೆಚ್ಚಿ ನಗದು ಬಹುಮಾನದ ಜತೆಗೆ ಪ್ರಶಂಸನ ಪತ್ರ ನೀಡಿ ಅಭಿನಂದಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ