NEWSದೇಶ-ವಿದೇಶನಮ್ಮರಾಜ್ಯವಿಡಿಯೋ

ಕನಿಷ್ಠ ಪಿಂಚಣಿ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ದೆಹಲಿಯಲ್ಲಿ ನಿವೃತ್ತ ನೌಕರರ ಉಪವಾಸ ಸತ್ಯಾಗ್ರಹ

ವಿಜಯಪಥ ಸಮಗ್ರ ಸುದ್ದಿ
  • ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ಸೇರಿ ರಾಜ್ಯದಿಂದ 360 ಮಂದಿ ನಿವೃತ್ತ ನೌಕರರು ಭಾಗಿ

ನ್ಯೂಡೆಲ್ಲಿ: ಕನಿಷ್ಠ ಪಿಂಚಣಿ ಬೇಡಿಕೆ 7500 ರೂ. ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ವಿಸ್ತರಿಸಬೇಕೆಂದು ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಪಿಎಸ್ ನಿವೃತ್ತ ನೌಕರರ ಪ್ರತಿಭಟನಾ ಸಮಾವೇಶ ಎನ್‌ಎಸಿ ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷ ಕಮಾಂಡರ್ ಅಶೋಕ್ ರಾಹುತ್ ಅವರ ನೇತೃತ್ವದಲ್ಲಿ ಡಿ.7ರ ಇಂದು ಜರುಗಿತು.

ಈ ಪ್ರತಿಭಟನಾ ಸಭೆಯಲ್ಲಿ ಕರ್ನಾಟಕದಿಂದ ಸುಮಾರು 360 ಮಂದಿ ನಿವೃತ್ತ ನೌಕರರು ಭಾಗವಹಿಸಿದ್ದು, ವಿವಿಧ ರಾಜ್ಯಗಳಿಂದ ಆಗಮಿಸಿದ ನಿವೃತ್ತರ ಸಂಖ್ಯೆ ಸುಮಾರು 20 ಸಾವಿರದಷ್ಟು ಇತ್ತು.

ಪಾರ್ಲಿಮೆಂಟ್ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದ್ದು, ಇಂದಿನ ಸಭೆಯಲ್ಲಿ ಆಗಮಿಸಿದ್ದ ವಿವಿಧ ರಾಜ್ಯಗಳ ಮುಖಂಡರು ಮಾತನಾಡಿ ಕೂಡಲೇ ನಮ್ಮ ಕನಿಷ್ಠ ಪಿಂಚಣಿ ಬೇಡಿಕೆ 7500 ರೂ. ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ವಿಸ್ತರಿಸಬೇಕೆಂದು ಆಗ್ರಹಿಸಿದರು.

ಇನ್ನು ನಾಳೆ ಅಂದರೆ ಡಿ.8ರಿಂದ ನಿರಂತರವಾಗಿ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ಹಾಗೂ ನಂತರ ದಿನಗಳಲ್ಲಿ ರಾಷ್ಟ್ರೀಯ ನಾಯಕರು ಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲು ಈಗಾಗಲೇ ನಿರ್ಧರಿಸಿದ್ದಾರೆ.

ನಾಳೆಯಿಂದ ಅಂದರೆ ಡಿ.8ರಿಂದ ಡಿ.24ರವರೆಗೆ ಜಂತರ್ ಮಂತರ್‌ನಲ್ಲಿ  ತೀವ್ರತರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸಿದರೆ ಕೈ ಬಿಡಲಾಗುವುದು ಎಂದು ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ