CrimeNEWSನಮ್ಮಜಿಲ್ಲೆ

ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂಬ ಶಂಕೆ: ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಟೆಕ್ಕಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖಾಸಗಿ ಕಂಪನಿಯೊಂದರ ಟೆಕ್ಕಿಯೊಬ್ಬರು ನನ್ನ ಮೇಲೆ ಅತ್ಯಾಚಾರ ನಡೆದಿರಬಹುದು ಎಂದು ಶಂಕಿಸಿ ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಡಿ.12 ರಂದು ರಾತ್ರಿ ಯುವತಿ ಕೋರಮಂಗಲ ಪಬ್ ಒಂದಕ್ಕೆ ಹೋಗಿದ್ದಳು. ಬಳಿಕ ಪ್ರಜ್ಞೆ ಬಂದಾಗ ಆಕೆ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದುದು ತಿಳಿದುಬಂದಿದೆ. ತಕ್ಷಣ ಆಕೆ ಹತ್ತಿರ ಇದ್ದ ಮನೆಯೊಂದರ ಬಾಗಿಲು ಬಡಿದಿದ್ದಾಳೆ. ನಂತರ ಸ್ಥಳೀಯರು 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಟೆಕ್ಕಿಯನ್ನು ರಕ್ಷಣೆ ಮಾಡಿದ್ದಾರೆ.

ಬಳಿಕ ಪೊಲೀಸರು ಯುವತಿಯನ್ನು ಕೋರಮಂಗಲ ಠಾಣೆಗೆ ಕರೆತಂದಿದ್ದಾರೆ. ಸದ್ಯ ಈ ಸಂಬಂಧ ದೂರು ದಾಖಲಿಸಿರುವ ಆಕೆ ಪ್ರಜ್ಞಾಹೀನಳಾಗಿದ್ದಾಗ ನನ್ನ ಮೇಲೆ ಅತ್ಯಾಚಾರ ಆಗಿರುವ ಶಂಕೆ ಇದೆ. ಹೀಗಾಗಿ ತನಿಖೆ ಮಾಡಿ ಎಂದು ದೂರು ನೀಡಿದ್ದಾಳೆ.

ಯುವತಿಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದು, ಆಕೆ ಹೇಗೆ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಬಂದಳು ಎಂಬ ಬಗ್ಗೆ ತೀವ್ರ ತಲೆಕೆಡಿಸಿಕೊಂಡು, ಸಂಬಂಧಿಸಿದ ಮಾಹಿತಿ ಕಲೆಹಾಕುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ