CrimeNEWSದೇಶ-ವಿದೇಶ

ಬೈಕ್‌ಗೆ ಕಾರು ಡಿಕ್ಕಿ ಹೊಡೆಸಿದ ಪುಂಡರು: ಕೇಳಿದ ಬೈಕ್‌ ಸವಾರನ ಕಿಟಕಿಗೆ ಕಟ್ಟಿ 2ಕಿಮೀ ಎಳೆದೊಯ್ದರು

ವಿಜಯಪಥ ಸಮಗ್ರ ಸುದ್ದಿ

ಛತ್ತೀಸ್‌ಗಢ: ಕ್ಷುಲ್ಲಕ ವಿಚಾರಕ್ಕೆ ಕೆಲ ಯುವಕರು ಯುವಕನೊಬ್ಬನನ್ನು ಕಾರಿನ ಕಿಟಕಿಯಲ್ಲಿ ಸಿಲುಕಿಸಿ ಸುಮಾರು ಎರಡು ಕಿಲೋ ಮೀಟರ್​ ವರೆಗೆ ಎಳೆದೊಯ್ದ ಹೃದಯ ವಿದ್ರಾವಕ ಘಟನೆಯೊಂದು ಛತ್ತೀಸ್‌ಗಢ ನಡೆದಿದೆ.

ಛತ್ತೀಸ್‌ಗಢದ ದುರ್ಗ್ ನಗರದಲ್ಲಿ ಈ ಘಟನೆ ನಡೆದಿದ್ದು, ಇದಕ್ಕೆ ಕಾರಣ ಯುವಕನ ಬೈಕ್​ಗೆ ಕಾರು ಡಿಕ್ಕಿ ಹೊಡೆಸಿದ ಕಿಡಿಗೇಡಿಗಳನ್ನು ಕೇಳಿದ್ದಕ್ಕೆ ಈ ರೀತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಡಿಕ್ಕಿ ಹೊಡೆಸಿದ್ದರಿಂದ ಯುವಕ ಹಾಗೂ ಕಾರು ಸವಾರರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಸಿಟ್ಟಿಗೆದ್ದ ಕಾರಿನಲ್ಲಿದ್ದ ಕೆಲ ಪುಂಡರು ಯುವಕನನ್ನ ಕಾರಿನ ಕಿಟಿಕಿಗೆ ಕಟ್ಟಿ, ಸುಮಾರು 2 ಕಿಲೋ ಮೀಟರ್​ವರೆಗೆ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಾರೆ.

ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಜಾಗ್ರತರಾದ ಪೊಲೀಸರು ಕಾರು ಚಾಲಕ ಜಹೀರುದ್ದೀನ್ ಎಂಬಾತನನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಯುವಕನನ್ನು ಕಾರಿನಲ್ಲಿ ಎಳದೊಯ್ಯತ್ತಿರುವ ದೃಶ್ಯ ವೈರಲ್​ ಆಗಿದ್ದು, ಅನೇಕರು ಈ ಘಟನೆಯ ಬಗ್ಗೆ ಸರಿಯಾದ ಕ್ರಮ ತೆಗೆದುಕೊಳ್ಳಿ ಎಂದು ಪೊಲೀಸರನ್ನು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ