NEWSನಮ್ಮಜಿಲ್ಲೆನಮ್ಮರಾಜ್ಯ

ನಂಜನಗೂಡು ನಗರಸಭೆ ಉಪಚುನಾವಣೆ: ಅಭ್ಯರ್ಥಿ ಪರ ಮುಖ್ಯಮಂತ್ರಿ ಚಂದ್ರು ಪ್ರಚಾರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಎಲ್ಲರಿಗೂ ಗುಣಮಟ್ಟದ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳು ಸಿಗಬೇಕು ಎಂಬ ಧ್ಯೇಯವನ್ನು ಇಟ್ಟುಕೊಂಡಿರುವ ಆಮ್‌ ಆದ್ಮಿ ಪಕ್ಷವು ಸ್ಥಳೀಯ ಸಮಸ್ಯೆಗಳಿಗೆ ಸದಾ ನಾಗರಿಕರ ಜತೆಯಾಗಿ ನಿಲ್ಲಲ್ಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಭರವಸೆ ನೀಡಿದರು.

ನಂಜನಗೂಡು ನಗರಸಭೆ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಕ್ಷದ ಅಭ್ಯರ್ಥಿ ಜಯಲಕ್ಷ್ಮೀ ಅವರ ಪರವಾಗಿ ಭಾನುವಾರ ಪ್ರಚಾರ ನಡೆಸಿ ಮಾತನಾಡಿದರು.

ಕಳೆದ 75 ವರ್ಷಗಳಿಂದ ಭ್ರಷ್ಟಾಚಾರ, ದುರಾಡಳಿತ ನಡೆಸುತ್ತಲೇ ಬಂದಿರುವ ಕಾಂಗ್ರೆಸ್‌, ಬಿಜೆಪಿ ಹಾಗೂ ಜನತಾದಳ ಪಕ್ಷಗಳಿಂದ ಬೇಸತ್ತಿದ್ದ ಜನರಿಗೆ ಪರ್ಯಾಯವಾಗಿ ಎಎಪಿ ಜನರಲ್ಲಿ ಭರವಸೆ ಮೂಡಿಸಿದೆ. ನಗರಸಭೆ ಚುನಾವಣೆಗಳಲ್ಲಿ ಗೆಲ್ಲುವ ಮೂಲಕ ಪಕ್ಷದ ನೆಲೆಯನ್ನು ಸ್ಥಳೀಯ ಮಟ್ಟದಲ್ಲಿ ಭದ್ರಪಡಿಸಲು ಸಹಕರಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿರುವ ಆಡಳಿತ ಮತ್ತು ವಿಪಕ್ಷಗಳು ಸರ್ಕಾರವನ್ನು ಉಳಿಸಲು ಮತ್ತು ಉರುಳಿಸಲು ಪರಸ್ಪರ ತಂತ್ರಗಾರಿಕೆಗಳಲ್ಲಿ ನಿರತವಾಗಿವೆ. ಸ್ಥಳೀಯ ಚುನಾವಣೆಗಳಲ್ಲಿ ಅಂತಹ ಪಕ್ಷಗಳಿಗೆ ಮತ ನೀಡಿದರೂ ಯಾವುದೇ ಪ್ರಯೋಜನವಾಗದು. ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು, ಜನಸಾಮಾನ್ಯರ ಜೊತೆ ಸಂಕಷ್ಟಗಳಲ್ಲಿ ನಿಲ್ಲಲು ನಮ್ಮ ಪಕ್ಷ ಸದಾ ಜೊತೆಗಿದೆ ಎಂದು ತಿಳಿಸಿದರು.

ಇನ್ನು ದೆಹಲಿಯ ಕೇಜ್ರಿವಾಲ್‌ ಮಾದರಿಯ ಆಡಳಿತ ನಮ್ಮ ರಾಜ್ಯದಲ್ಲೂ ಬರಲು ಸ್ಥಳೀಯ ಚುನಾವಣೆಗಳಲ್ಲಿ ನಮ್ಮನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಚಂದ್ರು ಜನತೆಯನ್ನು ಕೋರಿದರು.

ಸ್ಥಳೀಯರು ಪ್ರಚಾರದುದ್ದಕ್ಕೂ ಚಂದ್ರು ಹಾಗೂ ಪಕ್ಷದ ಅಭ್ಯರ್ಥಿ ಜಯಲಕ್ಷ್ಮೀ ಅವರ ಜತೆ ಹೆಚ್ಚಿನ ಸಂಖ್ಯೆಯಲ್ಲಿ ಹೆಜ್ಜೆ ಹಾಕಿದರು. ಪಕ್ಷದ ಪ್ರಣಾಳಿಕೆಯನ್ನು ಹಂಚುವ ಮೂಲಕ ಅಭ್ಯರ್ಥಿ ಜಯಲಕ್ಷ್ಮೀ ಅವರಿಗೆ ಮತ ಹಾಕುವಂತೆ ವಿನಂತಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ