NEWSನಮ್ಮಜಿಲ್ಲೆರಾಜಕೀಯ

ಬಿಜೆಪಿಗರಿಗೆ ರಾಮನೇ ದೊಡ್ಡ ಅಸ್ತ್ರ: ಸಂಗೋಪನಾ ಸಚಿವ ಕೆ.ವೆಂಕಟೇಶ್

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ರಾಮನನ್ನು ಬಿಜೆಪಿಯವರು ದೊಡ್ಡ ಅಸ್ತ್ರ ಮಾಡಿಕೊಂಡು ಜನರ ಭಾವನೆ ಕೆರಳಿಸುತ್ತಿದ್ದಾರೆ ಎಂದು ರೇಷ್ಮೆ ಹಾಗೂ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಆರೋಪಿಸಿದ್ದಾರೆ.

ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ರಾಮನ ಮೇಲೆ ನಮ್ಮ ಅಭ್ಯಂತರವಿಲ್ಲ. ನಮ್ಮ ಅಭ್ಯಂತರ ಇರೋದು ಬಿಜೆಪಿ ನಡವಳಿಕೆ ಮೇಲೆ. ರಾಮಮಂದಿರ ನಿರ್ಮಾಣದ ಬಗ್ಗೆ ನಮ್ಮ ತಕರಾರಿಲ್ಲ, ಆದರೆ ರಾಮ ನಮ್ಮವನೇ ಅಂತಾ ಬಿಜೆಪಿಯವರು ಹೇಳುವ ವಿಚಾರದಲ್ಲಿ ನಮ್ಮ ತಕರಾರಿದೆ ಎಂದರು.

ಎಲ್ಲರಿಗೂ ಬೇಕಾದವನು ರಾಮ, ಹನುಮಂತ, ಸೀತೆಯನ್ನು ಎಲ್ಲರೂ ಪೂಜೆ ಮಾಡ್ತಾರೆ. ಆದರೆ ಬಿಜೆಪಿಯವರು ರಾಮ ತಮಗೆ ಸೇರಿದವನೆಂದು ಪ್ರತಿಬಿಂಬಿಸುತ್ತಿದ್ದಾರೆ. ಇದು ಸರಿಯಾದ ವರ್ತನೆಯಲ್ಲ. ಆ ದೃಷ್ಟಿಯಿಂದ ಸಿದ್ದರಾಮಯ್ಯ ನಮ್ಮ ನಾಯಕರು. ಆದ್ದರಿಂದ ರಾಮ ನಮ್ಮಲ್ಲಿ ಇದ್ದಾರೆಂದು ಮಾಜಿ ಸಚಿವ ಆಂಜನೇಯ ಹೇಳಿದ್ದಾರಷ್ಟೇ. ರಾಮನನ್ನು ತುಚ್ಛೀಕರಿಸುವ ರೀತಿ ಅವರು ಹೇಳಿಲ್ಲ ಎಂದು ಸಮರ್ಥಿಸಿಕೊಂಡರು.

ರಾಮಮಂದಿರ ನಮ್ಮದೇ ಎಂದು ಬಿಜೆಪಿ ಬಿಂಬಿಸಿಕೊಳ್ಳುವುದು ಬೇಸರದ ಸಂಗತಿ. ಅಯೋಧ್ಯೆ ವಿಚಾರ ಬಿಟ್ಟು ಇವರಿಗೆ ಬೇರೆ ಏನೂ ಇಲ್ಲ. ಈ ದೇಶದ ಸಮಸ್ಯೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಕುಡಿಯುವ ನೀರು, ಮನೆಯಿಲ್ಲದವರು ಈ ದೇಶದಲ್ಲಿ ಎಷ್ಟೋ ಜನರಿದ್ದಾರೆ.

ಸೂರಿಲ್ಲ ಈ ಜನರ ಬಗ್ಗೆ ಮೋದಿ ಅವರಿಗೆ ಏನೂ ಗೊತ್ತಾಗಲ್ಲ. ವರ್ಷದಲ್ಲಿ ಆರು ತಿಂಗಳು ಫಾರಿನ್‌ ಸುತ್ತುತ್ತಾರೆ. ಎಲ್ಲೋ ಒಂದು ಕಡೆ ಬಂದು ಭಾಷಣ ಮಾಡಿ ಹೋಗ್ತಾರೆ. ಬಿಹಾರ, ಮಧ್ಯಪ್ರದೇಶ, ಯುಪಿಯ ಹಳ್ಳಿಗಳಿಗೆ ಹೋಗಿ ನೋಡಿದ್ರೆ ಜನರ ಪರಿಸ್ಥಿತಿ ತಿಳಿಯುತ್ತೆ ಎಂದು ಸಚಿವ ವೆಂಕಟೇಶ್ ಹೇಳಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ