NEWSನಮ್ಮಜಿಲ್ಲೆ

ಬೀಡನಹಳ್ಳಿಯಲ್ಲಿ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ

ಚರಂಡಿಗಳಿಗೆ ಬ್ಲೀಚಿಂಗ್‌ ಪೌಡರ್‌ ಸಿಂಪಡಣೆ l ಪಿಡಿಒ ಲಿಂಗರಾಜು ಹೇಳಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಆರೋಗ್ಯ ಇಲಾಖೆ ಮತ್ತು ಬೀಡನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ  ಬೀಡನಹಳ್ಳಿ ಗ್ರಾಮದ ಎಲ್ಲಾ ರಸ್ತೆ ಮತ್ತು ಚರಂಡಿಗಳಿಗೆ ಶುಕ್ರವಾರ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಪಿಡಿಒ ಲಿಂಗರಾಜು, ಕೋವಿಡ್-19 ನಿಯಂತ್ರಣದಲ್ಲಿ ಸಾರ್ವಜನಿಕರ ಜವಾಬ್ದಾರಿ ಮಹತ್ವದ್ದಾಗಿದೆ. ವಿನಾ ಕಾರಣ ಮನೆಯಿಂದ ಹೊರಗೆ ಸುತ್ತಾಡಬೇಡಿ. ತಮ್ಮ ತಮ್ಮ ಮನೆಯಲ್ಲಿ ಉಳಿದುಕೊಳ್ಳುವುದೇ ಸುರಕ್ಷಿತವಾದ ಮಾರ್ಗ. ಹೀಗಾಗಿ ಎಲ್ಲಾ ಜನರು ಆರೋಗ್ಯವನ್ನು ಕಾಪಾಡುವ ಜತೆಗೆ ನಿಮ್ಮ ಸುತ್ತಮುತ್ತಲಿನ ನಿವಾಸಿಗಳ ಅರೋಗ್ಯದ ಬಗ್ಗೆಯೂ ಗಮನಹರಿಸುವುದು ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.

ಅರ್ಧ ಗಂಟೆಗೊಮ್ಮೆ ಕೈ ಗಳನ್ನು ಸಾಬೂನಿನಿಂದ ತೊಳೆದುಕೊಳ್ಳಿ, ಸುಮ್ಮ ಸುಮ್ಮನೆ ಯಾವುದೇ ವಸ್ತುಗಳನ್ನು ಮುಟ್ಟಬಾರದು. ರಸ್ತೆಯಲ್ಲಿ ಉಗುಳಬಾರದು. ಬಿಸಿಯಾದ ನೀರು ಆಹಾರ ಸೇವಿಸಿ, ಕೆಮ್ಮುವಾಗ ಸೀನುವಾಗ ಕರವಸ್ತ್ರ ಬಳಕೆ ಮಾಡಿ, ಅಗತ್ಯ ಸಾಮಗ್ರಿಗಳನ್ನು ಕೊಳ್ಳುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಜ್ವರ ಕೆಮ್ಮು ನೆಗಡಿ ಲಕ್ಷಣಗಳು ಕಾಣಿಸಿಕೊಂಡರೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ, ಜ್ವರ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರ ಸಲಹೆ ಮೇರೆಗೆ ಔಷಧ ಪಡೆದುಕೊಳ್ಳಬೇಕು.  ಆದರೆ ಸ್ವಯಂ ಚಿಕಿತ್ಸೆ ಅಪಾಯಕಾರಿ ಎಂದು ಹೇಳಿದರು.

ಈಗಾಗಲೇ ಎಲ್ಲಾ ಚರಂಡಿಗಳಿಗೂ ಬ್ಲೀಚಿಂಗ್‌ ಪಂಡರ್‌ ಸಿಂಪಡಿಸಿದ್ದು, ಚರಂಡಿಗಳ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್