NEWSನಮ್ಮರಾಜ್ಯ

KSRTC: ಜ.17ರಂದು ವೇತನ ಹಿಂಬಾಕಿ ಸಂಬಂಧ ಅಂತಿಮ ನಿರ್ಧಾರದ ಸಭೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ 2020 ಜನವರಿ ಒಂದರಿಂದ 2023 ಫೆಬ್ರವರಿ 28ರ ನಡುವೆ ನಿವೃತ್ತರಾದ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಈವರೆಗೂ ವೇತನ ಹೆಚ್ಚಳದ ಹಿಂಬಾಕಿ ಕೊಡದೆ ಸಬೂಬು ಹೇಳಿಕೊಂಡು ಬರುತ್ತಿರುವ ಬಗ್ಗೆ ಕರಾರಸಾನಿಗಮಗಳ ನಿವೃತ್ತ ನೌಕರರ ಹಿತರಕ್ಷಣ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಹಾಲಿ ಕರ್ತತ್ಯ ನಿರತ ನೌಕರರಿಗೆ 1.1.2020 ರಿಂದ ಜಾರಿಗೆ ಬಂದಿರುವ ವೇತನ ಪರಿಷ್ಕರಣೆಯ ಸೌಲಭ್ಯಗಳನ್ನು ನಿವೃತ್ತ ನೌಕರರಿಗೂ 1-1- 2020 ರಿಂದ ಪಿಕ್ಸೇಷನ್ ಮಾಡಿ, ಸೌಲಭ್ಯಗಳನ್ನು ವಿಸ್ತರಿಸುವ ಮತ್ತು ಹಿಂಬಾಕಿ ಹಣವನ್ನು ನೀಡುವ ಬಗ್ಗೆ 19-10-2023 ರಂದು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಅಂದು ಕೆಎಸ್‌ಆರ್‌ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಧರಣಿ ಸ್ಥಳಕ್ಕೆ ಬಂದು ಬೇಡಿಕೆಯನ್ನು ಅತೀ ಶೀಘ್ರದಲ್ಲೇ ಆದೇಶ ಮಾಡಿ ಬಗೆಹರಿಸುವುದಾಗಿ ಭರವಸೆ ನೀಡಿ ಹೋದರು. ಅವರು ಕೊಟ್ಟ ಭರವಸೆ 4 ತಿಂಗಳು ಕಳೆದರೂ ಇನ್ನೂ ಈಡೇರಿಲ್ಲ. ಈ ಬಗ್ಗೆ ಹಲವು ಬಾರಿ ಸಚಿವರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಸಮ್ಮುಖದಲ್ಲಿ ಚರ್ಚಿಸಿ ಕೂಡಲೇ ಆದೇಶ ಮಾಡುವಂತೆ ಒತ್ತಾಯಿಸಿದ್ದೆವು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಾರಿಗೆ ಸಚಿವರು ಈ ವಿಷಯದಲ್ಲಿ ಕೊಡಲೇ ತೀರ್ಮಾನ ತೆಗೆದುಕೊಳ್ಳುವ ಭರವಸೆ ನೀಡುತ್ತಲೇ ಇದ್ದು ಇದುವರೆವಗೂ ಯಾವುದೇ ಅಂತಿಮ ಆದೇಶ ಹೊರಡಿಸಿಲ್ಲ.

ಹೀಗಾಗಿ ನಿವೃತ್ತ ನೌಕರರಿಗೆ ವೇತನ ಪಿಕ್ಸೇಷನ್ ಮಾಡಿ ಅದರ ಆರ್ಥಿಕ ಸೌಲಭ್ಯ ಮತ್ತು ವೇತನ ಬಾಕಿ ನೀಡುವ ಬಗ್ಗೆ ಮುಂದಿನ ಚಳವಳಿಯನ್ನು ನಿರ್ಧಾರ ಮಾಡಲು ಪೂರ್ವಭಾವಿ ಸಭೆಯನ್ನು ಇದೇ ಜ. 17ರ ಬುಧುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ, ವಿಲ್ಸನ್ ಗಾರ್ಡನ್ನಿನಲ್ಲಿರುವ ಕನ್ನಡ ಭವನದಲ್ಲಿ ಕರೆಯಲಾಗಿದೆ.

ನಿವೃತ್ತ ನೌಕರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಈ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಪ್ರತಿ ವಿಭಾಗದಿಂದ ಆಯ್ದ ಪ್ರಮುಖರು ಭಾಗವಹಿಸ ಬೇಕು ಎಂದು ನಿವೃತ್ತ ನೌಕರರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ