NEWSನಮ್ಮಜಿಲ್ಲೆನಮ್ಮರಾಜ್ಯ

ಕೊಡಗು: ವಿದ್ಯುತ್ ತಂತಿ ತಗುಲಿ ಧಗ ಧಗ ಉರಿದ ಟ್ರ್ಯಾಕ್ಟರ್​​ನಲ್ಲಿದ್ದ ಹುಲ್ಲು

ವಿಜಯಪಥ ಸಮಗ್ರ ಸುದ್ದಿ

ಕೊಡಗು: ಟ್ರ್ಯಾಕ್ಟರ್​​ನಲ್ಲಿ ಹುಲ್ಲು ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಟ್ರ್ಯಾಕ್ಟರ್‌ ಪಾರಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಯಡೂರು ಗ್ರಾಮದ ಮಾರಿಗುಡಿ ಬಳಿ ನಡೆದಿದೆ.

ಸಾಮರ್ಥ್ಯಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಟ್ರ್ಯಾಕ್ಟರ್​ನಲ್ಲಿ ಹುಲ್ಲು ತುಂಬಿಕೊಂಡು ಹೋಗುತ್ತಿದ್ದರು. ಈ ವೇಳೆ ಗ್ರಾಮದ ಮಾರಿಗುಡಿ ಬಳಿ ಬರುವಾಗ ಮೇಲಿನಿಂದ ಹಾದು ಹೋಗಿದ್ದ ಕರೆಂಟ್ ವೈರ್ ತಗುಲಿದೆ. ತಕ್ಷಣ ಬೆಂಕಿಹೊತ್ತುಕೊಂಡು ಉರಿಯುತ್ತಿತ್ತು.

ಈ ವೇಳೆ ಟ್ರ್ಯಾಕ್ಟರ್​ ಚಾಲಕನ ಚಾಣಾಕ್ಷತೆಯಿಂದ ಟ್ರಾಲಿಯಲ್ಲಿದ್ದ ಹುಲ್ಲನ್ನು ಲಿಫ್ಟ್​ ಮಾಡುವ ಮೂಲಕ ಕೆಳಗೆ ಸುರಿದಿದ್ದಾನೆ. ಹೀಗಾಗಿ ಚಾಲಕ ಪಾರಾಗಿದ್ದಲ್ಲದೇ ಟ್ರ್ಯಾಕ್ಟರ್‌ಅನ್ನು ಕೂಡ ಸೇಫ್ ಮಾಡಿ ಆಗುವ ಅನಾಹುತ ತಪ್ಪಿಸಿದ್ದಾನೆ.

ಈ ಹುಲ್ಲು ಕುಂದಳ್ಳಿ ಗ್ರಾಮದ ಪ್ರವೀಣ್ ಎನ್ನುವರಿಗೆ ಸೇರಿದ್ದು ಬೆಟ್ಟದಳ್ಳಿಯಿಂದ ಮಸಗೋಡಿಗೆ ತೆಗೆದುಕೊಂಡು ಹೋಗಲಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ