CrimeNEWSಬೆಂಗಳೂರು

BMTC: ನೌಕರರಿಂದ ಮೊಬೈಲ್‌ ಆ್ಯಪ್‌ಗಳ ಮೂಲಕ ₹1.5 ಕೋಟಿ ಲಂಚ ಪಡೆದ 7 ಸಿಬ್ಬಂದಿಗಳ ಅಮಾನತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊಬೈಲ್‌ ಪಾವತಿ ಆ್ಯಪ್‌ಗಳ ಮೂಲಕ ಸಂಸ್ಥೆಯ ಸಿಬ್ಬಂದಿಯಿಂದ 1.5 ಕೋಟಿ ರೂ.ಗಳಷ್ಟು ಲಂಚ ಪಡೆದ ಆರೋಪದ ಮೇಲೆ ಬಿಎಂಟಿಸಿ ಜಿಗಣಿ 27ನೇ ಘಟಕದ ಏಳು ಮಂದಿ ಅಧಿಕಾರಿಗಳು, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಘಟಕದ ಮೇಲ್ವಿಚಾರಕಿ ಆರ್‌.ಮಂಜುಳಾ, ಕಿರಿಯ ಸಹಾಯಕರಾದ ಪ್ರೀತಂ, ಎಲ್.ಎಸ್‌.ಮನೋಜ್‌ ಕುಮಾರ್‌, ಎ.ಸುಮಾ, ಶಾಂತವ್ವ, ಸಹಾಯಕ ಲೆಕ್ಕಿಗ ವಿ.ಧನಂಜಯ, ಸಹಾಯಕ ಕುಶಲಕರ್ಮಿ ಜಿ.ದೇವರಾಜ್‌ ಅಮಾನತುಗೊಂಡವರು.

ಆರೋಪಿಗಳು ಸಹೋದ್ಯೋಗಿಗಳಿಂದ ಮೊಬೈಲ್‌ ಪಾವತಿ ಆ್ಯಪ್‌ಗಳ ಮೂಲಕ ಹಣ ಜಮೆ ಮಾಡಿಸಿಕೊಂಡು ಡಿಜಿಟಲ್‌ ಹಣದ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದಾಗ ಸತ್ಯಾಂಶವನ್ನು ಮರೆಮಾಚಿದ್ದ ಆರೋಪಿಗಳು ಶಿಸ್ತುಕ್ರಮದಿಂದ ತಪ್ಪಿಸಿಕೊಂಡಿದ್ದರು.

ಮತ್ತೆ ಈ ಕುರಿತು ಬಿಎಂಟಿಸಿಯ ಭದ್ರತಾ ಮತ್ತು ಜಾಗೃತ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ತನಿಖೆ ನಡೆಸಿದಾಗ ಲಂಚ ಪ್ರಕರಣ ಸಾಬೀತಾಗಿದೆ. ಈ ಏಳು ಮಂದಿಯ ಬ್ಯಾಂಕ್‌ ದಾಖಲೆಗಳನ್ನು ಪರಿಶೀಲಿಸಿದಾಗ ಆರೋಪಿಗಳು ಮೊಬೈಲ್‌ ಪಾವತಿ ಆ್ಯಪ್‌ಗಳ ಮೂಲಕ ಲಂಚ ಪಡೆದಿರುವ ಸಾಕ್ಷ್ಯಗಳು ಲಭಿಸಿದ್ದವು.

ಏಳು ಆರೋಪಿಗಳ ಬ್ಯಾಂಕ್‌ ಖಾತೆಗಳಿಗೆ ಸುಮಾರು 1.5 ಕೋಟಿ ರೂ.ಗಳು ಜಮೆಯಾಗಿದೆ. ಈ ಮೊತ್ತವನ್ನು ಅವರು ಆನ್‌ಲೈನ್‌ ಹೂಡಿಕೆಯಲ್ಲಿ ತೊಡಗಿಸಿರುವುದು ಕಂಡುಬಂದಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ.

ಈ ಎಲ್ಲ ಆರೋಪಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಿ, ಶಿಸ್ತುಕ್ರಮ ಜರುಗಿಸಲು ನಿರ್ಧರಿಸಲಾಗಿದೆ. ಆರೋಪಿಗಳನ್ನು ‌‘ವಿಚಾರಣಾ ಇತ್ಯರ್ಥಪೂರ್ವ ಅಮಾನತು’ ಮಾಡಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ