NEWSನಮ್ಮರಾಜ್ಯರಾಜಕೀಯ

ಫೆ.16ರಂದು ರಾಜ್ಯ ಬಜೆಟ್‌ ಮಂಡನೆ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂಬರು ಲೋಕಸಭೆ ಚುನಾವಣೆಗೆ ಮಾರ್ಚ್​ ತಿಂಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರ 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ 16ರಂದು ಮಂಡಿಸಲಾಗುವುದು.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದ್ದು, ಫೆಬ್ರವರಿ 12 ರಿಂದ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಈ ನಡುವೆಯೇ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಫೆಬ್ರವರಿ 12ರಂದು ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 16ರಂದು ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್​ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 75,000 ಕೋಟಿ ರೂ. ವೆಚ್ಚವಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದರ ಜತೆ ಜತೆಗೆ ಮತ್ತಷ್ಟು ಜನಪ್ರಿಯ ಯೋಜನಗೆಳನ್ನು ಘೋಷಿಸಲಾಗುತ್ತದೆಯೇ ಎಂದು ಕಾತುರದಿಂದ ಜನತೆ ಕಾಯುತ್ತಿದ್ದಾರೆ. ಜನತೆಯ ಭರವಸೆಯನ್ನು ಹುಸಿಗೊಳಿಸದಂತೆ ಸಿಎಂ ಸಿದ್ದರಾಮಯ್ಯ ಕಾಡಿಕೊಂಡು ಬರುತ್ತಾರೆಯೇ ಎಂಬುದಕ್ಕೆ ಫೆ.16ರಂದು ಉತ್ತರ ಸಿಗಲಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ