NEWSದೇಶ-ವಿದೇಶನಮ್ಮರಾಜ್ಯ

ನ್ಯೂಡೆಲ್ಲಿ ವಿಮಾನ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರ ಪರದಾಟ: ಸ್ಪೈಸ್ ಜೆಟ್ ಚೆಲ್ಲಾಟ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿಯ ವಿಮಾನ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಬೆಂಗಳೂರಿಗೆ ಹೋಗಲು ಜ.21ರ ರಾತ್ರಿ 9ಗಂಟೆಗೆ ಹೊರಡಬೇಕಾಗಿದ್ದ ಸ್ಪೈಸ್ ಜಟ್ ವಿಮಾನ ವಿರಡದೆ ರಾತ್ರಿಯಿಡಿ ಪರದಾಡಿದನಡೆದಿದೆ.

ರಾತ್ರಿ 9ಕ್ಕೆ ಹೊರಡಬೇಕಿದ್ದ ವಿಮಾನದ ಸಮಯ ಬದಲಾಗಿದೆ 10 ಗಂಟೆಗೆ ಹೊರಡುತ್ತದೆ ಎಂದು ಮಾಹಿತಿ ನೀಡಿದರು, ಆ ಬಳಿಕ ಮತ್ತೆ 11 ಗಂಟೆಗೆ ಎಂದು ಎರಡು ಬಾರಿ ಸಮಯವನ್ನು ಮುಂದೂಡಿದರು. ಆಗಲು ವಿಮಾನ ಹೊರಡದೇ ಮಾರನೇ ದಿನ ಅಂದರೆ ಇಂದು ಜ.22ರ ಬೆಳಗ್ಗೆ ಆರು ಗಂಟೆಗೆ ಹೊರಡುತ್ತದೆ ಎಂದು ಪ್ರಯಾಣಿಕರಿಗೆ ಮಾಹಿತಿ ನೀಡಿದರು.

ಇದರಿಂದ ಆಕ್ರೋಶಗೊಂಡ ನೂರಕ್ಕೂ ಹೆಚ್ಚು ಪ್ರಯಾಣಿಕರು ಸ್ಪೈಸ್ ಜೆಟ್ ವ್ಯವಸ್ಥಾಪಕರ ಜತೆ ವಾಗ್ವಾದ ನಡೆಸಿದರು, ವಿಳಂಬಕ್ಕೆ ಕಾರಣ ಏನು ಎಂದು ಕೇಳಿದರು ಸರಿಯಾಗಿ ಉತ್ತರ ನೀಡಲಿಲ್ಲ.

ಪ್ರಯಾಣಿಕರು ರಾತ್ರಿಯಲ್ಲ ವಿಮಾನ ನಿಲ್ದಾಣದ ಕುರ್ಚಿಗಳಲ್ಲಿ ಕುಳಿತು ಸಮಯ ಕಳೆಯಬೇಕಾಯಿತು. ರಾತ್ರಿ ಎಲ್ಲ ಕಾದು ವ್ಯವಸ್ಥಾಪಕರ ಜತೆ ವಾಗ್ವಾದ ಮಾಡಿದರು ಪ್ರಯೋಜನಕ್ಕೆ ಬರಲಿಲ್ಲ.

ನಾನು ಕೂಡ ಈ ವಿಮಾನದಲ್ಲಿ ಟಿಕೆಟ್ ಕಾಯ್ದಿರಿಸಿದ ಕಾರಣ ಈ ಪರಿಸ್ಥಿತಿಯನ್ನು ಅನುಭವಿಸಬೇಕಾಯಿತು ಎಂದು ರೈತ ಮುಖಂಡ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಸ್ಪೈಸ್ ಜೆಟ್ ಸಂಸ್ಥೆಯ ಮುಖ್ಯಸ್ಥರ ದೂರವಾಣಿ ಸಂಖ್ಯೆಯನ್ನು ಸಹ ನೀಡಲಿಲ್ಲ, ವಿಮಾನ ನಿಲ್ದಾಣ ಭದ್ರತಾಧಿಕಾರಿಗಳು ಈ ಬಗ್ಗೆ ಯಾವುದೇ ಗಂಭೀರ ಕ್ರಮ ಕೈಗೊಳ್ಳಲಿಲ್ಲ ಅವರ ಬೇಜವಾಬ್ದಾರಿತನ ಎದ್ದು ಕಾಣುತ್ತಿತ್ತು.

ಕೇಂದ್ರ ಸರ್ಕಾರದ ವಿಮಾನಯಾನ ಸಚಿವರು ಇಂತಹ ಸಂಸ್ಥೆಗಳ ರಹದಾರಿ ರದ್ದು ಮಾಡಿ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ನೊಂದ ಪ್ರಯಾಣಿಕರು ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರದ ಗಮನ ಸೆಳೆಯಲು ಯತ್ನಿಸುತ್ತಿದ್ದರು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ