NEWSನಮ್ಮಜಿಲ್ಲೆ

ನಾಳೆ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆ

ಜನಧನ್‌ ಫಲಾನುಭವಿಗಳು ಶಿಸ್ತಿನಿಂದ ನಗದು ಪಡೆಯಬೇಕು l ಸಚಿವ ಜಗದೀಶ ಶೆಟ್ಟರ್ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೋವಿಡ್-19 ಸೋಂಕು ತಡೆಯಲು ಸರ್ಕಾರಿ ಆಸ್ಪತ್ರೆಗಳು ಶ್ರಮಿಸುತ್ತಿವೆ. ಆದರೆ ಉಳಿದ ಸಣ್ಣಪುಟ್ಟ ಸಾಮಾನ್ಯ ಕಾಯಿಲೆಗಳು ಹಾಗೂ ತುರ್ತು ಚಿಕಿತ್ಸೆಗಳನ್ನು ಖಾಸಗಿ ಆಸ್ಪತ್ರೆಗಳು ಒದಗಿಸಬೇಕು. ಈ ಕುರಿತು ಚರ್ಚಿಸಲು ನಾಳೆ (ಏಪ್ರೀಲ್ 4) ಅವಳಿನಗರದ ಖಾಸಗಿ ವೈದ್ಯರ ಸಭೆ ನಡೆಸಲಾಗುವುದು ಎಂದು ಬೃಹತ್ ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಿಮ್ಸ್ ವೈದ್ಯರ ಸಭೆ ಉದ್ದೇಶಿಸಿ  ಮಾತನಾಡಿದರು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಮಹಿಳೆಯರ ಜನಧನ್‌ ಖಾತೆಗಳಿಗೆ ತಲಾ 500 ರೂ.ಗಳನ್ನು ಪಾವತಿಸಲಾಗುತ್ತಿದೆ. ಫಲಾನುಭವಿಗಳು ಶಿಸ್ತಿನಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಹಣ ಪಡೆಯಬೇಕು ಎಂದರು.

21 ದಿನಗಳ ಲಾಕ್‍ಡೌನ್ ಅವಧಿಯಲ್ಲಿ ಸಂಕಷ್ಟಕ್ಕೀಡಾಗುವ ಜನರಿಗೆ ನೆರವು ನೀಡಲು ಅನೇಕ ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬರುತ್ತಿವೆ. ಅವರು ನೀಡುವ ಆಹಾರ ಧಾನ್ಯ, ಮಾಸ್ಕ್, ಸ್ಯಾನಿಟೈಸರ್ ಮತ್ತಿತರ ವಸ್ತುಗಳನ್ನು ಸ್ವೀಕರಿಸಿ, ಅವರು ಹೇಳಿದ ಸ್ಥಳಗಳಿಗೆ ವಿತರಿಸಲು ಅಗತ್ಯ ಏರ್ಪಾಡು ಮಾಡಬೇಕು. ಬಡತನ ರೇಖೆಗಿಂತ ಕೆಳಗಿರುವ ಅರ್ಹ ಪಡಿತರ ಚೀಟಿದಾರರರಿಗೆ ಯಾವುದೇ ತೊಂದರೆಯಾಗದಂತೆ ಆಹಾರ ಧಾನ್ಯ ವಿತರಿಸಬೇಕು. ಒಟಿಪಿ ಆಧಾರಿತ ಸೇವೆ ಸಾಧ್ಯವಾಗದಿದ್ದರೆ ಸರಳ ರೀತಿಯಲ್ಲಿ ಸಾಂದರ್ಭಿಕವಾಗಿ ಪರಿಹಾರ ಕಂಡುಕೊಂಡು ಧಾನ್ಯಗಳನ್ನು ಪೂರೈಸಬೇಕು ಎಂದು ಸಲಹೆ ನೀಡಿದರು.

ಧಾರವಾಡ ಜಿಲ್ಲೆ ಅಷ್ಟೇ ಅಲ್ಲಾ ಇಡೀ ದೇಶ, ಜಗತ್ತು ಕೊರೊನಾ ಆತಂಕ ಎದುರಿಸುತ್ತಿದೆ. ಸರ್ಕಾರಿ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಆಡಳಿತ ವರ್ಗ ಅವಿರತವಾಗಿ ಇದರ ವಿರುದ್ಧ ಹೋರಾಡುತ್ತಿದೆ. ಅಧಿಕಾರಿಗಳ ಪ್ರಯತ್ನ ಶ್ಲಾಘನೀಯವಾಗಿದೆ ಎಂದರು.

ಜಿಲ್ಲಾಧಿಕಾರಿ ದೀಪಾ ಚೋಳನ್  ಮಾತನಾಡಿ, ರಾಜ್ಯ ಸರ್ಕಾರದ ಸೂಚನೆಯಂತೆ ಪ್ರತಿನಿತ್ಯ 25 ಸಾವಿರ ಲೀಟರ್ ಹಾಲು ಉಚಿತವಾಗಿ ಪೂರೈಸಲು ಕೊಳಚೆ ಪ್ರದೇಶಗಳ, ನಿರಾಶ್ರಿತರಿಗೆ, ವಲಸೆ ಕಾರ್ಮಿಕರನ್ನು ಗುರುತಿಸಲಾಗಿದೆ. ಸರ್ಕಾರದ ವಿವಿಧ ಹಾಸ್ಟೇಲ್‍ಗಳಲ್ಲಿ ವಸತಿ ಸೌಕರ್ಯ ಕಲ್ಪಿಸಲಾಗಿರುವ ಜನರಿಗೆ ಧಾರ್ಮಿಕ ಮುಖಂಡರಿಂದ ಹಾಗೂ ಮನೋವೈದ್ಯರಿಂದ ಆಪ್ತ ಸಮಾಲೋಚನೆ ಏರ್ಪಡಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ ಮಾತನಾಡಿ, ದೆಹಲಿಯ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದಿರುವವರಲ್ಲಿ ರೋಗ ಲಕ್ಷಣ ಇಲ್ಲದಿದ್ದರೂ ಸಹ ತಮ್ಮ ಗಂಟಲು ದ್ರವದ ಪ್ರಯೋಗಾಲಯ ಮಾದರಿ ಸಂಗ್ರಹಿಸಲು ಕಿಮ್ಸ್‍ಗೆ ಅಧಿಕ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದರ ಒತ್ತಡ ಕಡಿಮೆ ಮಾಡಲು ಎಸ್‍ಡಿಎಂ ಆಸ್ಪತ್ರೆಯಲ್ಲಿಯೂ ಫಿವರ್ ಕ್ಲಿನಿಕ್ ಹಾಗೂ ಗಂಟಲು ದ್ರವ ಸಂಗ್ರಹ ಕಾರ್ಯ ಪ್ರಾರಂಭಿಸಿದರೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ